ಮತ್ತೆ ಭುಗಿಲೆದ್ದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸರ್ಪ ಸಂಸ್ಕಾರ, ಆಶ್ಲೇಷ ಪೂಜಾ ವಿವಾದ
ಮಂಗಳೂರು, ಸೆಪ್ಟೆಂಬರ್. 24: ಸ್ವಲ್ಪದಿನ ತಣ್ಣಗಿದ್ದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಪೂಜಾ ವಿಧಿ ವಿಧಾನ ವಿವಾದ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಭುಗಿಲೆದ್ದಿದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುವ ಸರ್ಪ ಸಂಸ್ಕಾರ ಹಾಗೂ ಆಶ್ಲೇಷ ಬಲಿ ಪೂಜೆಯನ್ನು ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ನಡೆಸುತ್ತಿರುವ ಬಗ್ಗೆ ವಿವಾದ ಇದೀಗ ಮತ್ತೆ ಗರಿಗೆದರಿದೆ.
ನರಸಿಂಹ ಮಠದ ವಿದ್ಯಾಪ್ರಸನ್ನ ಸ್ವಾಮೀಜಿ ಅವರ ಪರವಾಗಿರುವರು ಸೇರಿಕೊಂಡು ಮತ್ತೆ ಮಠದ ಹಾಗೂ ಸ್ವಾಮೀಜಿಯ ಪರವಾಗಿ ಪ್ರಚಾರ ಆರಂಭಿಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ.
ಸುಬ್ರಹ್ಮಣ್ಯ ಕ್ಷೇತ್ರದ ದೇವಾಲಯಕ್ಕಿಂತ ಸಂಪುಟ ನರಸಿಂಹ ಮಠದಲ್ಲೇ ಸರ್ಪ ಸಂಸ್ಕಾರ ಹಾಗೂ ಆಶ್ಲೇಷ ಬಲಿ ಪೂಜೆ ನಡೆಸಿದರೆ ಮಾತ್ರ ದೇವರಿಗೆ ಸಮರ್ಪಣೆಯಾಗುತ್ತದೆ ಎನ್ನುವ ಹೇಳಿಕೆಗಳನ್ನು ಸ್ವಾಮೀಜಿಯ ಹಿಂಬಾಲಕರು ನೀಡಲಾರಂಭಿಸಿದ್ದಾರೆ.

ಈ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆ ಮತ್ತೆ ಆರಂಭವಾಗಿದೆ. ಹಿಂದೂ ಸಂಘಟನೆಗಳ ಕೆಲ ಮುಖಂಡರು ಮಠವನ್ನು ಸಮರ್ಥಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ. ಸಂಪುಟ ನರಸಿಂಹ ಮಠದ ಸ್ವಾಮೀಜಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ವಿರುದ್ಧವಾಗಿಯೇ ಮಾತನಾಡಲು ಆರಂಭಿಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ.
ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುತ್ತಿದ್ದ ಸರ್ಪ ಸಂಸ್ಕಾರ ಹಾಗೂ ಆಶ್ಲೇಷ ಬಲಿ ಪೂಜೆಯನ್ನು ನರಸಿಂಹ ಮಠದಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದೆ ಎನ್ನುವ ಆರೋಪದ ನಡುವೆಯೇ ಮಠದ ಸ್ವಾಮೀಜಿಗಳು ತಮ್ಮ ಮಠದಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಸಮರ್ಥಿಸುವ ಕಾರ್ಯವನ್ನು ಆರಂಭಿಸಿದ್ದಾರೆ ಎಂದು ದೂರಲಾಗುತ್ತಿದೆ.
ಚಾತುರ್ಮಾಸದಲ್ಲಿರುವಾಗಲೇ ಪೂಜಾ ವಿವಾದವನ್ನು ಬಳಸಿಕೊಂಡಿರುವ ಸ್ವಾಮೀಜಿ ಸುದರ್ಮ ಕಾರ್ಯಕ್ರಮದ ಮೂಲಕ ತನ್ನ ನಿಲುವನ್ನು ಸಮಾಜದ ಮುಂದಿಡಲು ಆರಂಭಿಸಿದ್ದು, ಈ ಬೆಳವಣಿಗೆ ಇದೀಗ ಭಾರೀ ಚರ್ಚೆಗೂ ಕಾರಣವಾಗಿದೆ.
ಪರ ಹಾಗೂ ವಿರೋಧ ಚರ್ಚೆಗಳು ಶ್ರೀ ಕ್ಷೇತ್ರಕ್ಕೆ ಆಗಮಿಸುವ ಭಕ್ತರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ಈ ನಡುವೆ ದೇವಾಲಯವನ್ನು ಮಠಕ್ಕೆ ನೀಡುವ ಬದಲು ಸುಬ್ರಹ್ಮಣ್ಯನ ಮೂಲ ಅರಾಧಕರಾದ ಮಲೆಕುಡಿಯರಿಗೆ ವಹಿಸಬೇಕೆನ್ನುವ ವಾದ ಕೂಡ ಕೇಳಿಬರುತ್ತಿದೆ.
ಸುಬ್ರಹ್ಮಣ್ಯ ದೇವಾಲಯ ಹಾಗು ಸಂಪುಟ ನರಸಿಂಹ ಸ್ವಾಮಿ ಮಠದ ವತಿಯಿಂದ ಬಹಿರಂಗವಾಗಿ ಅಷ್ಟಮಂಗಲ ಪ್ರಶ್ನೆಗೆ ವ್ಯವಸ್ಥೆಮಾಡಿ ಅಮಾಯಕ ಭಕ್ತರ ಗೊಂದಲ ನಿವಾರಿಸಬೇಕೆಂಬ ಕೂಗು ಕೂಡ ಕೇಳಿಬರುತ್ತಿದೆ .
ಕುಕ್ಕೆ ಸುಬ್ರಹ್ಮಣ್ಯ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವೆ ಇರುವ ಸರ್ಪ ಸಂಸ್ಕಾರ ಹಾಗೂ ಆಶ್ಲೇಷ ಬಲಿ ಪೂಜೆಯ ವಿವಾದ ದಿನದಿಂದ ದಿನಕ್ಕೆ ಜಟಿಲಗೊಳ್ಳುತ್ತಿದೆ. ಈ ಪೂಜಾ ವಿಧಿವಿಧಾನದ ಸಂಘರ್ಷದಲ್ಲಿ ಭಕ್ತಾದಿಗಳು ಮಾತ್ರ ಗೊಂದಲದಲ್ಲಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications