ಮಂಗಳೂರು; ತಿಂಗಳಿಗೆ 800 ಹೆರಿಗೆಯ ದಾಖಲೆ ಸೃಷ್ಟಿಸಿದ ಲೇಡಿಗೋಷನ್ ಆಸ್ಪತ್ರೆ
ಮಂಗಳೂರು, ನವೆಂಬರ್ 19: ಸರ್ಕಾರಿ ಆಸ್ಪತ್ರೆಗಳ ವ್ಯವಸ್ಥೆ ಕುರಿತು ಅನುಮಾನಿಸುವವರೇ ಬಹುಪಾಲು ಮಂದಿ. ಅದರಲ್ಲೂ ಹೆರಿಗೆಗೆಂದರೆ ಸರ್ಕಾರಿ ಆಸ್ಪತ್ರೆಗಳಿಗೆ ಹೋಗಲು ಹಿಂದೇಟು ಹಾಕುತ್ತಾರೆ. ಆದರೆ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆ ಮಾತ್ರ ಯಾವ ಖಾಸಗಿ ಆಸ್ಪತ್ರೆಗೂ ಕಡಿಮೆ ಇಲ್ಲ ಎಂಬಂತೆ ಕಾರ್ಯ ನಿರ್ವಹಿಸುತ್ತಿದೆ. ಇದಕ್ಕೆ ಉದಾಹರಣೆಯೆಂದರೆ, ಆಸ್ಪತ್ರೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ, ತಿಂಗಳಿಗೆ 800 ಶಿಶುಗಳು ಜನಿಸಿರುವುದು.
167 ವರ್ಷ ಇತಿಹಾಸವಿರುವ ಈ ಸರ್ಕಾರಿ ಆಸ್ಪತ್ರೆಯಲ್ಲಿ ಅಕ್ಟೋಬರ್ ತಿಂಗಳಿನಲ್ಲಿ 800 ಶಿಶುಗಳು ಜನಿಸಿ ದಾಖಲೆ ಸೃಷ್ಟಿಯಾಗಿದೆ. 272 ಹಾಸಿಗೆ ಸಾಮರ್ಥ್ಯದ ಈ ಆಸ್ಪತ್ರೆಯಲ್ಲಿ ಸಾಮಾನ್ಯವಾಗಿ ತಿಂಗಳಿಗೆ 400ರಿಂದ 450 ಮಕ್ಕಳು ಜನಿಸುತ್ತಿದ್ದವು. ಸೆಪ್ಟೆಂಬರ್ ನಲ್ಲಿ 600 ಮಕ್ಕಳು ಜನಿಸಿದ್ದವು.
ಆದರೆ ಅಕ್ಟೋಬರ್ ತಿಂಗಳಲ್ಲಿ ಈ ಎಲ್ಲ ಸಂಖ್ಯೆಯನ್ನೂ ಮೀರಿ 800ರ ಗಡಿಯಲ್ಲಿ ಶಿಶುಗಳು ಜನಿಸಿವೆ. ಇದರಲ್ಲಿ 379 ಸಿಸೇರಿಯನ್ ಆಗಿದ್ದರೆ, ಇನ್ನುಳಿದವು ಸಹಜ ಹೆರಿಗೆಯಾಗಿವೆ. ತಿಂಗಳಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಶಿಶುಗಳು ಜನಿಸಿರುವುದು ಆಸ್ಪತ್ರೆಯ ಇತಿಹಾಸದಲ್ಲಿ ಮೊದಲಾಗಿದೆ.

ಕೆಎಂಸಿ ಆಸ್ಪತ್ರೆಯ ಸಹಯೋಗದಲ್ಲಿ ಕೆಲಸ ಮಾಡುತ್ತಿರುವ ಈ ಆಸ್ಪತ್ರೆಯಲ್ಲಿ 32 ಸ್ತ್ರೀರೋಗ ತಜ್ಞರಿದ್ದಾರೆ. ಅತ್ಯುನ್ನತ ಸೇವೆಗೆ ಹೆಸರಾಗಿರುವ ಈ ಆಸ್ಪತ್ರೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾತ್ರವಲ್ಲದೇ ಉಡುಪಿ, ದಾವಣಗೆರೆ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೇರಳದಿಂದಲೂ ಹೆರಿಗೆಗೆ ಗರ್ಭಿಣಿಯರು ದಾಖಲಾಗುತ್ತಾರೆ.
ಆಸ್ಪತ್ರೆಯಲ್ಲಿ ಗುಣಮಟ್ಟದ ಸೇವೆ, ರೋಗಿಗಳ ಸಮಸ್ಯೆಗೆ ಸೂಕ್ತ ಸ್ಪಂದನೆ ದೊರೆಯುತ್ತಿರುವುದು ಆಸ್ಪತ್ರೆಯ ಜನಪ್ರಿಯತೆಗೆ ಕಾರಣವಾಗಿದೆ. ಕೊರೊನಾ ಆರಂಭಿಕ ದಿನಗಳಲ್ಲಿಯೂ ಆಸ್ಪತ್ರೆಯಲ್ಲಿ ಉತ್ತಮ ಸೇವೆ ಲಭಿಸಿತ್ತು. 23 ಬೆಡ್ ಗಳನ್ನು ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಮೀಸಲಾಗಿರಿಸಲಾಗಿತ್ತು. ಈಚೆಗೆ ಕೊರೊನಾ ಸೋಂಕಿತ ಗರ್ಭಿಣಿಯರ ಸಂಖ್ಯೆ ಇಳಿಕೆಯಾಗಿದೆ. ಜೊತೆಗೆ ಅಕ್ಟೋಬರ್ ತಿಂಗಳಿನಲ್ಲಿ 800 ಶಿಶುಗಳು ಜನಿಸಿರುವುದು ಆಸ್ಪತ್ರೆಗೆ ಮತ್ತೊಂದು ಹಿರಿಮೆ ತಂದುಕೊಟ್ಟಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications