ಮಂಗಳೂರಲ್ಲಿ ಹಸಿವಿನಿಂದ ನಿತ್ರಾಣಗೊಂಡ ಹಿರಿಯ ಜೀವಕ್ಕೆ ಆರೈಕೆ ಮಾಡಿದ ಮಹಿಳಾ ಪೇದೆ
ಮಂಗಳೂರು, ಡಿಸೆಂಬರ್ 07: ರಸ್ತೆ ಬದಿ ನಿತ್ರಾಣದಿಂದ ಪ್ರತಿಕ್ರಿಯಿಸಲು ಅಸಾಧ್ಯವಾದ ಸ್ಥಿತಿಯಲ್ಲಿದ್ದ ಹಿರಿಯ ಜೀವಕ್ಕೆ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ನೆರವಾಗಿ ಮಾನವೀಯತೆ ಮೆರೆದ ಅಪರೂಪದ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಹಸಿವು ಹಾಗೂ ಬಿಸಿಲಿನ ಬೇಗೆಗೆ ಬಸವಳಿದು ರಸ್ತೆಬದಿ ಬಿದ್ದಿದ್ದ ವೃದ್ಧರೊಬ್ಬರಿಗೆ ಸಂಚಾರಿ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ವಿಚಾರಿಸಿ ನೀರು, ಬ್ರೆಡ್ ನೀಡಿ ಉಪಚರಿಸಿದ್ದಾರೆ. ನಿತ್ರಾಣ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೂ ಸಾಗಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರು ನೇತ್ರಾವತಿ ಸೇತುವೆಯ ರಸ್ತೆ ಬದಿಯಲ್ಲಿ ಹಸಿವು ಹಾಗೂ ಬಿಸಿಲಿನಿಂದ ನಿತ್ರಾಣಗೊಂಡು ಸುಮಾರು 65 ವರ್ಷದ ವೃದ್ಧರೊಬ್ಬರು ಕುಸಿದು ಬಿದ್ದಿದ್ದರು. ಇದನ್ನು ಗಮನಿಸಿದ ದಾರಿಹೋಕರೊಬ್ಬರು ಸಮೀಪದ ಮಹಾಕಾಳಿ ಪಡ್ಪುವಿನಲ್ಲಿ ಕರ್ತವ್ಯದಲ್ಲಿದ್ದ ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ಕಾನ್ಸ್ಟೇಬಲ್ ಭಾಗ್ಯಶ್ರೀ ಗಮನಕ್ಕೆ ತಂದಿದ್ದಾರೆ.

ಕೂಡಲೇ ಸ್ಪಂದಿಸಿದ ಭಾಗ್ಯಶ್ರೀ ಸ್ಥಳಕ್ಕೆ ತೆರಳಿ ಆ ಹಿರಿಯ ಜೀವಕ್ಕೆ ಆಸರೆಯಾದರು. ಸೇತುವೆ ಮೇಲೆ ಬಿದ್ದಿದ್ದ ಆ ಹಿರಿಯ ಜೀವವನ್ನು ಕರೆದಾಗ ನಿತ್ರಾಣದಿಂದ ಪ್ರತಿಕ್ರಿಯಿಸಲು ಅಸಾಧ್ಯವಾದ ಸ್ಥಿತಿಯಾಗಿತ್ತು. ಕಾನ್ ಸ್ಟೇಬಲ್ ಭಾಗ್ಯಶ್ರೀ ಆ ಹಿರಿಯ ಜೀವಕ್ಕೆ ಕುಡಿಯುಲು ನೀರು ನೀಡಿ , ತಿನ್ನಲು ಬ್ರೆಡ್ ನೀಡಿ ಉಪಚರಿಸಿದ್ದಾರೆ.

ಅಷ್ಟರಲ್ಲಿ ಅಲ್ಲಿಗಾಗಮಿಸಿದ ಆಟೋ ಚಾಲಕರೊಬ್ಬರು ಹಣ್ಣು ನೀಡಿದ್ದಾರೆ. ಅದನ್ನು ತಿಂದ ಬಳಿಕ ಸ್ವಲ್ಪ ಸುಧಾರಿಸಿಕೊಂಡಿದ್ದಾರೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾಗ್ಯಶ್ರೀ ಅವರ ಈ ಮಾನವೀಯ ಕಳಕಳಿ ಮೆಚ್ಚುಗೆಗೆ ಪಾತ್ರವಾಗಿದೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications