ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಲ್ಲಿ ಹಸಿವಿನಿಂದ ನಿತ್ರಾಣಗೊಂಡ ಹಿರಿಯ ಜೀವಕ್ಕೆ ಆರೈಕೆ ಮಾಡಿದ ಮಹಿಳಾ ಪೇದೆ

|
Google Oneindia Kannada News

ಮಂಗಳೂರು, ಡಿಸೆಂಬರ್ 07: ರಸ್ತೆ ಬದಿ ನಿತ್ರಾಣದಿಂದ ಪ್ರತಿಕ್ರಿಯಿಸಲು ಅಸಾಧ್ಯವಾದ ಸ್ಥಿತಿಯಲ್ಲಿದ್ದ ಹಿರಿಯ ಜೀವಕ್ಕೆ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ನೆರವಾಗಿ ಮಾನವೀಯತೆ ಮೆರೆದ ಅಪರೂಪದ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಅನಾಥ ಶಿಶುವಿಗೆ ಎದೆ ಹಾಲುಣಿಸಿ ಮಾನವೀಯತೆ ತೋರಿದ ಮಹಿಳಾ ಕಾನ್‌ಸ್ಟೆಬಲ್ಅನಾಥ ಶಿಶುವಿಗೆ ಎದೆ ಹಾಲುಣಿಸಿ ಮಾನವೀಯತೆ ತೋರಿದ ಮಹಿಳಾ ಕಾನ್‌ಸ್ಟೆಬಲ್

ಹಸಿವು ಹಾಗೂ ಬಿಸಿಲಿನ ಬೇಗೆಗೆ ಬಸವಳಿದು ರಸ್ತೆಬದಿ ಬಿದ್ದಿದ್ದ ವೃದ್ಧರೊಬ್ಬರಿಗೆ ಸಂಚಾರಿ ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ವಿಚಾರಿಸಿ ನೀರು, ಬ್ರೆಡ್ ನೀಡಿ ಉಪಚರಿಸಿದ್ದಾರೆ. ನಿತ್ರಾಣ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೂ ಸಾಗಿಸಿದ್ದಾರೆ.

 ಮೆಜೆಸ್ಟಿಕ್ ನಲ್ಲಿ ಈ ಮಹಿಳಾ ಪೊಲೀಸ್‌ ಅಧಿಕಾರಿಯ ಖದರ್‌ ನೋಡಿ ಮೆಜೆಸ್ಟಿಕ್ ನಲ್ಲಿ ಈ ಮಹಿಳಾ ಪೊಲೀಸ್‌ ಅಧಿಕಾರಿಯ ಖದರ್‌ ನೋಡಿ

ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರು ನೇತ್ರಾವತಿ ಸೇತುವೆಯ ರಸ್ತೆ ಬದಿಯಲ್ಲಿ ಹಸಿವು ಹಾಗೂ ಬಿಸಿಲಿನಿಂದ ನಿತ್ರಾಣಗೊಂಡು ಸುಮಾರು 65 ವರ್ಷದ ವೃದ್ಧರೊಬ್ಬರು ಕುಸಿದು ಬಿದ್ದಿದ್ದರು. ಇದನ್ನು ಗಮನಿಸಿದ ದಾರಿಹೋಕರೊಬ್ಬರು ಸಮೀಪದ ಮಹಾಕಾಳಿ ಪಡ್ಪುವಿನಲ್ಲಿ ಕರ್ತವ್ಯದಲ್ಲಿದ್ದ ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ಕಾನ್‌ಸ್ಟೇಬಲ್ ಭಾಗ್ಯಶ್ರೀ ಗಮನಕ್ಕೆ ತಂದಿದ್ದಾರೆ.

Lady police constable saves old man

ಕೂಡಲೇ ಸ್ಪಂದಿಸಿದ ಭಾಗ್ಯಶ್ರೀ ಸ್ಥಳಕ್ಕೆ ತೆರಳಿ ಆ ಹಿರಿಯ ಜೀವಕ್ಕೆ ಆಸರೆಯಾದರು. ಸೇತುವೆ ಮೇಲೆ ಬಿದ್ದಿದ್ದ ಆ ಹಿರಿಯ ಜೀವವನ್ನು ಕರೆದಾಗ ನಿತ್ರಾಣದಿಂದ ಪ್ರತಿಕ್ರಿಯಿಸಲು ಅಸಾಧ್ಯವಾದ ಸ್ಥಿತಿಯಾಗಿತ್ತು. ಕಾನ್ ಸ್ಟೇಬಲ್ ಭಾಗ್ಯಶ್ರೀ ಆ ಹಿರಿಯ ಜೀವಕ್ಕೆ ಕುಡಿಯುಲು ನೀರು ನೀಡಿ , ತಿನ್ನಲು ಬ್ರೆಡ್ ನೀಡಿ ಉಪಚರಿಸಿದ್ದಾರೆ.

 ಅಂಬಿಯಂತೆ ಮಾನವೀಯತೆ ಮೆರೆದ ಪುತ್ರ ಅಭಿಷೇಕ್ ಅಂಬಿಯಂತೆ ಮಾನವೀಯತೆ ಮೆರೆದ ಪುತ್ರ ಅಭಿಷೇಕ್

Lady police constable saves old man

ಅಷ್ಟರಲ್ಲಿ ಅಲ್ಲಿಗಾಗಮಿಸಿದ ಆಟೋ ಚಾಲಕರೊಬ್ಬರು ಹಣ್ಣು ನೀಡಿದ್ದಾರೆ. ಅದನ್ನು ತಿಂದ ಬಳಿಕ ಸ್ವಲ್ಪ ಸುಧಾರಿಸಿಕೊಂಡಿದ್ದಾರೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾಗ್ಯಶ್ರೀ ಅವರ ಈ ಮಾನವೀಯ ಕಳಕಳಿ ಮೆಚ್ಚುಗೆಗೆ ಪಾತ್ರವಾಗಿದೆ.

English summary
Lady Traffic constable in Mangaluru saved old Man who collapsed on the road because of hunger.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X