ಮಂಗಳೂರು- ಬೆಂಗಳೂರು ರೈಲು ಹಳಿಯ ಮೇಲೆ ಗುಡ್ಡ ಕುಸಿತ

ಮಂಗಳೂರು, ಆಗಸ್ಟ್ 29: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಘಟ್ಟ ಪ್ರದೇಶದಲ್ಲಿ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಳಿಸಿದೆ. ಬೆಳ್ತಂಗಡಿ ಪ್ರದೇಶದಲ್ಲಿ ಸುರಿದ ಭಾರಿ ಮಳೆಗೆ ಮಂಗಳವಾರ ಗುಡ್ಡ ಕುಸಿದಿದೆ.

ಬೆಳ್ತಂಗಡಿಯ ಗಡಿಭಾಗ ಶಿರಾಡಿ ಘಾಟ್ ನ ಎಡಕುಮೇರಿ ಎಂಬಲ್ಲಿ ಮಂಗಳೂರು- ಬೆಂಗಳೂರು ರೈಲು ಹಳಿಯ ಮೇಲೆ ಗುಡ್ಡ ಕುಸಿದಿದೆ. ಪರಿಣಾಮವಾಗಿ ಮಂಗಳೂರು- ಬೆಂಗಳೂರು ರೈಲು ಸಂಚಾರಕ್ಕೆ ತಡೆಯುಂಟಾಗಿದೆ.

Landslide in ghat section between Sakaleshpur and Subrahmanya railway station

ನಾಲ್ಕು ದಿನಗಳಿಂದ ಈ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ರೈಲು ಹಳಿಗಳ ಮೇಲೆ ಮಣ್ಣು ಬಿದ್ದ ಪರಿಣಾಮ ರೈಲು ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ.

ಸಕಲೇಶಪುರ- ಸುಬ್ರಹ್ಮಣ್ಯ ರಸ್ತೆ ಮಧ್ಯೆ ಈ ಗುಡ್ಡ ಕುಸಿತ ಉಂಟಾಗಿದ್ದು, ಬೆಂಗಳೂರಿನಿಂದ ಮಂಗಳವಾರ ಮುಂಜಾನೆ ಹೊರಟ ಯಶವಂತಪುರ - ಮಂಗಳೂರು ವೀಕ್ಲಿ ಎಕ್ಸ್ಪ್ರೆಸ್ ರೈಲನ್ನು ಸಿರಿಬಾಗಿಲು ಬಳಿ ತಡೆಯಲಾಗಿದೆ.

Landslide in ghat section between Sakaleshpur and Subrahmanya railway station

ಕಾರವಾರದಿಂದ ಬೆಂಗಳೂರಿಗೆ ಹೊರಟಿರುವ ಕಾರವಾರ - ಯಶವಂತಪುರ ಎಕ್ಸ್ ಪ್ರೆಸ್ ರೈಲಿನ ಮಾರ್ಗವನ್ನು ತಾತ್ಕಾಲಿಕವಾಗಿ ಬದಲಿಸಲಾಗಿದೆ. ಈ ರೈಲು ಶೋರ್ನೂರು, ಕಣ್ಣೂರು, ಪಾಲಕ್ಕಾಡ್, ಬಂಗಾರಪೇಟೆ ಮೂಲಕ ಬೆಂಗಳೂರಿಗೆ ತಲುಪಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ರೈಲು ಹಳಿಯ ಮೇಲೆ ಬಿದ್ದಿರುವ ಮಣ್ಣನ್ನು ತೆರವುಗೊಳಿಸುವ ಕಾರ್ಯ ಭರದಿಂದ ಸಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+