ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಡೀಲ್ ಬಳಿ ರೈಲು ಹಳಿಯ ಮೇಲೆ ಕುಸಿದ ಗುಡ್ಡ ಹಲವು ರೈಲು ಸಂಚಾರ ರದ್ದು

|
Google Oneindia Kannada News

ಮಂಗಳೂರು ಆಗಸ್ಟ್ 23: ಮಂಗಳೂರು- ಮುಂಬೈ ಮಧ್ಯೆ ಸಂಪರ್ಕ ಕಲ್ಪಿಸುವ ಕೊಂಕಣ ರೈಲು ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಮಂಗಳೂರು ಹೊರವಲಯದ ಪಡೀಲ್ - ಕುಲಶೇಖರ ನಡುವೆ ರೈಲು ಹಳಿಯ ಮೇಲೆ ಸುರಿಯುತ್ತಿರುವ ಭಾರೀ ಮಳೆಗೆ ಗುಡ್ಡ ಕುಸಿದ ಪರಿಣಾಮ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುವ ಹಲವು ರೈಲುಗಳನ್ನು ರದ್ದು ಗೊಳಿಸಲಾಗಿದೆ.

ಮೈಸೂರು- ಮಂಗಳೂರು -ಕಾರವಾರ ಮಧ್ಯೆ ಓಡಲಿದೆ ನೂತನ ರೈಲುಮೈಸೂರು- ಮಂಗಳೂರು -ಕಾರವಾರ ಮಧ್ಯೆ ಓಡಲಿದೆ ನೂತನ ರೈಲು

ಎರಡು ದಿನಗಳಿಂದ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಪಡೀಲ್ - ಕುಲಶೇಖರ ನಡುವೆ ಗುಡ್ಡ ಕುಸಿದು ಹಳಿಯ ಮೇಲೆ ಬಿದ್ದಿದೆ. ಹಳಿಯ ಮೇಲೆ ಬಿದ್ದ ಮಣ್ಣನ್ನು ತೆರವುಗೊಳಿಸಲಾಯಿತಾದರೂ ಮಣ್ಣು ನಿರಂತರವಾಗಿ ಕುಸಿದು ಬೀಳುತ್ತಿರುವ ಕಾರಣ ಮಂಗಳೂರಿನಿಂದ ಗೋವಾ-ಮುಂಬೈ ಮಧ್ಯೆ ಸಂಚರಿಸುವ ರೈಲುಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.

Landslide Near Padil Several Train Service Cancelled

ಜೆಸಿಬಿ ಯಂತ್ರ ಬಳಸಿ, ರೈಲು ಹಳಿಯ ಮೇಲೆ ಬಿದ್ದಿರುವ ಮಣ್ಣನ್ನು ತೆರವುಗೊಳಿಸುವ ಕಾರ್ಯ ಭರದಿಂದ ಸಾಗಿದೆ. ಶನಿವಾರ ಮುಂಜಾನೆವರೆಗೆ ಮಣ್ಣು ತೆರವುಗೊಳಿಸುವ ಕಾರ್ಯ ಪೂರ್ಣಗೊಳ್ಳಲಿದ್ದು, ರೈಲು ಸಂಚಾರ ಸುಗಮಗೊಳ್ಳಲಿದೆ ಎಂದು ಹೇಳಲಾಗಿದೆ.

English summary
Due to heavy rain there is a landslide on Railway track bitween Kulashekara- Padil . Because of this several train service affected
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X