Get Updates
Get notified of breaking news, exclusive insights, and must-see stories!

ಉಡುಪಿಯಲ್ಲಿ ನಿಲ್ಲದ ಭಾಷಾ ಸಮರ: ಭಾಷೆಗಿಂತ ಮಾಡಿದ ಕೆಲಸ ಮುಖ್ಯ ಎಂದ ಪ್ರಮೋದ್ ಮಧ್ವರಾಜ್

ಉಡುಪಿ, ಮಾರ್ಚ್ 31: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಅಭ್ಯರ್ಥಿಗಳ ಘೋಷಣೆಯಾಗಿದ್ದು, ಇಬ್ಬರು ಜನನಾಯಕರ ನಡುವೆ ಭಾಷಾ ಸಮರ ಆರಂಭವಾಗಿದೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಸರಳತೆಗೆ ಹೆಸರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬದ್ಧತೆಗೆ ಹೆಸರಾದ ಜಯಪ್ರಕಾಶ್ ಹೆಗ್ಡೆ ನಡುವೆ ಹಣಾಹಣಿ ಆರಂಭವಾಗಿದೆ.

ಇದೀಗ ಕ್ಷೇತ್ರದಲ್ಲಿ ಭಾಷಾ ವಾರ್‌ ನಡೆಯುತ್ತಿದ್ದು, ಸಂಸದರಾಗುವವರಿಗೆ ಹಿಂದಿ ಅಥವಾ ಇಂಗ್ಲಿಷ್ ಬರಬೇಕಲ್ಲವೇ ಎಂದು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿದರೆ, ಸಂಸದರಾದ ಆರೇ ತಿಂಗಳಲ್ಲಿ ಹಿಂದಿ ಭಾಷೆಯಲ್ಲಿ ಭಾಷಣ ಮಾಡುತ್ತೇನೆ ಎಂದು ಕೋಟ ಶ್ರೀನಿವಾಸ ಪೂಜಾರಿ ಸವಾಲು ಹಾಕಿದ್ದಾರೆ.

Language War Continues In Udupi-Chikkamagaluru Lok Sabha Constituency

ಇದೀಗ ಈ ಭಾಷಾ ಸಮರಕ್ಕೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪ್ರವೇಶಿಸಿದ್ದು, ತಮ್ಮ ಪಕ್ಷದ ಪಕ್ಷದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಬ್ಯಾಟ್‌ ಬೀಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರಿಗೆ ಭಾಷೆಯ ಬಗ್ಗೆ ಅಷ್ಟೊಂದು ಪ್ರೇಮ ಇದ್ದರೆ, ಎಲ್ಲಾ 28 ಲೋಕಸಭೆ ಕ್ಷೇತ್ರಗಳಲ್ಲೂ ಹಿಂದಿ ಪಂಡಿತರನ್ನು ತಂದು ನಿಲ್ಲಿಸಲಿ ಎಂದು ಪ್ರಮೋದ್ ಮಧ್ವರಾಜ್ ತಿರುಗೇಟು ನೀಡಿದ್ದಾರೆ.

ಕೋಟ ಶ್ರೀನಿವಾಸ್ ಪೂಜಾರಿಯವರು ಗ್ರಾಮ ಪಂಚಾಯತ್ ಸದಸ್ಯನಿಂದ ಹಿಡಿದು ಮಂತ್ರಿಯಾಗುವ ತನಕ ಎಲ್ಲ ಹಂತಗಳಲ್ಲಿ ಜನಸೇವೆ ಮಾಡಿ ಅನುಭವ ಇರುವವರು. ಭಾಷೆ ಮುಖ್ಯ ಅಲ್ಲ, ಭಾಷೆಗಿಂತ ಮಾಡಿದ ಕೆಲಸ ಮುಖ್ಯ. ಈಗ ಉತ್ತರ ಪ್ರದೇಶದಿಂದ ಬಂದವರು ಉಡುಪಿ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಉಡುಪಿಯಿಂದ ಆಯ್ಕೆಯಾಗಿ ಹೋಗಿ ದೆಹಲಿಯಲ್ಲಿ ಕೆಲಸ ಮಾಡಲು ಕಷ್ಟ ಏನಿಲ್ಲ. ಕೆಲಸ ಮಾಡುವವರಿಗೆ ಭಾಷೆ ಮುಖ್ಯ ಅಂತ ಅನಿಸುವುದಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಯವರು ಲೋಕಸಭೆಯಲ್ಲಿ ಕೆಲಸ ಮಾಡಲು ಹಿಂದಿ ಅಥವಾ ಇಂಗ್ಲಿಷ್ ಭಾಷೆ ಮುಖ್ಯ ಎನ್ನುವ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+