ಮಂಗಳೂರಲ್ಲಿ ಹಾರಾಡಲಿದೆ 305 ಮೀಟರ್ ಉದ್ದದ ರಾಷ್ಟ್ರಧ್ವಜ
ಮಂಗಳೂರು, ಆಗಸ್ಟ್ 14 : ಸ್ವಾತಂತ್ರ ದಿನಾಚರಣೆಗೆ ಮಂಗಳೂರು ಸಿದ್ಧವಾಗುತ್ತಿದೆ.ನಗರದ ಸಾರಸ್ವತ ವಿದ್ಯಾಸಂಸ್ಥೆಯಲ್ಲಿ 305 ಮೀಟರ್ ಉದ್ದದ ಬೃಹತ್ ತ್ರಿವರ್ಣ ಧ್ವಜವನ್ನು 1,000 ಮಂದಿ ವಿದ್ಯಾರ್ಥಿಗಳು ಹಿಡಿದು ರಾಷ್ಟ್ರಭಕ್ತಿಯನ್ನು ಅನಾವರಣಗೊಳಿಸಲಿದ್ದಾರೆ.
ಗಣಪತಿ ಪ್ರೌಢಶಾಲೆಯ ಸಮೀಪದ ಮಹಾಲಕ್ಷ್ಮೀ ಗಣಪತಿ ದೇವಸ್ಥಾನದ ಮುಂಭಾಗದಿಂದ ಈ ರಾಷ್ಟ್ರಧ್ವಜವು ಅನಾವರಣಗೊಳ್ಳುತ್ತಾ ಹಂಪನಕಟ್ಟೆ ವೃತ್ತದವರೆಗೆ ಮುಂದುವರಿಯಲಿದೆ. ಈ ಬೃಹತ್ ರಾಷ್ಟ್ರಧ್ವಜವನ್ನು ಸಂಸ್ಥೆಯ ವಿದ್ಯಾರ್ಥಿಗಳು ಹಿಡಿದು ಎಲ್ಲರ ಗಮನ ಸೆಳೆಯಲಿದ್ದಾರೆ. [ಸ್ವಾತಂತ್ರ ದಿನಾಚರಣೆ ತಯಾರಿಯ ಚಿತ್ರಗಳು]

ಶನಿವಾರ ಬೆಳಗ್ಗೆ 7.45ಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಗುಣಮಟ್ಟದ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಲ್ಲಿ ರಾಷ್ಟ್ರದ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶವನ್ನಿಟ್ಟುಕೊಂಡು ಬೃಹತ್ ತ್ರಿವರ್ಣ ಧ್ವಜ ಅನಾವರಣಗೊಳಿಸಲಾಗುತ್ತಿದೆ. [ಸ್ವಾತಂತ್ರ್ಯ ದಿನೋತ್ಸವ: ಹುಟ್ಟುಹಬ್ಬ ಆಚರಣೆಗೆ ಸಜ್ಜಾದ ಭಾರತ]
ರಾಷ್ಟ್ರದ ಉತ್ತಮ ಭವಿಷ್ಯಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ದೇಶಭಕ್ತ ಪ್ರಜೆಗಳಿಗೆ, ದೇಶ ರಕ್ಷಕರಿಗೆ ಈ ಕಾರ್ಯಕ್ರಮವನ್ನು ಸಮರ್ಪಿಸಲಾಗುತ್ತಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಕಾರ್ಯದರ್ಶಿ ಮಹೇಶ್ ಎಲ್. ಬೊಂಡಾಲ್ ಹೇಳಿದ್ದಾರೆ.
ಸಾರಸ್ವತ ವಿದ್ಯಾಸಂಸ್ಥೆಯ ಅಧೀನದಲ್ಲಿರುವ ಗಣಪತಿ ಆಂಗ್ಲ ಮಾಧ್ಯಮ ಶಾಲೆ, ಗಣಪತಿ ಅನುದಾನಿತ ಪ್ರಾಥಮಿಕ ಶಾಲೆ, ಗಣಪತಿ ಪ್ರೌಢಶಾಲೆ, ಗಣಪತಿ ಪ.ಪೂ. ಕಾಲೇಜು, ಆನಂದಾಶ್ರಮ ಶಾಲೆ, ಪರಿಜ್ಞಾನ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications