ಲೇಸರ್ ಬೆಳಕಲ್ಲಿ ಮೂಡಿದ ಬಾಹುಬಲಿ ಜೀವನ ಚರಿತ್ರೆಗೆ ನಟ ರಮೇಶ್ ಪ್ರಶಂಸೆ
ಮಂಗಳೂರು, ಫೆಬ್ರವರಿ 10: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಾಮಸ್ತಕಾಭಿಷೇಕದ ಸಂಭ್ರಮ ಮನೆ ಮಾಡಿದೆ. ರಾತ್ರಿಯಾಗುತ್ತಿದ್ದಂತೆಯೇ ಮಂಜುನಾಥನ ಆಲಯ ಸ್ವರ್ಗದಂತೆ ಭಾಸವಾಗುತ್ತಿದ್ದು, ಆಕರ್ಷಕ ವಿದ್ಯುತ್ ದೀಪಾಲಂಕಾರಗಳಿಂದ ಜಗಮಗಿಸುತ್ತಿದೆ.
ಈ ನಡುವೆ ವೈರಾಗ್ಯ, ತ್ಯಾಗ, ಸಂಯಮದ ಸಹನೆಯ ಸಾಕಾರಮೂರ್ತಿ ಬಾಹುಬಲಿಯ ಜೀವನ ಸಾರುವ ಲೇಸರ್ ಷೋ ಧರ್ಮಸ್ಥಳ ದ ವೈಭವಕ್ಕೆ ಮೆರುಗು ತಂದಿದ್ದು, ಬಹುಭಾಷಾ ನಟ ರಮೇಶ್ ಸೇರಿದಂತೆ ಲಕ್ಷಾಂತರ ಜನ ಅಭೂತಪೂರ್ವ ಸನ್ನಿವೇಶಕ್ಕೆ ಸಾಕ್ಷಿಯಾದರು.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಾಮಸ್ತಕಾಭಿಷೇಕದ ವೈಭವ ಕಳೆಗಟ್ಟಿದೆ.ಬೆಳಗ್ಗೆ ಪೂಜಾ ವಿಧಿವಿಧಾನಗಳು ನಡೆದ್ರೆ ರಾತ್ರಿಯಾಗುತ್ತಿದ್ದಂತೆಯೇ ಧರ್ಮಸ್ಥಳ ಸ್ವರ್ಗದ ರೀತಿ ಭಾಸವಾಗುತ್ತಿದೆ.ಧರ್ಮಸ್ಥಳ ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದ್ದು,ಸ್ವರ್ಗವೇ ಧರೆಗಿಳಿದು ಬಂದಂತೆ ಭಾಸ ವಾಗುತ್ತಿದೆ.

ಮಹಾಮಸ್ತಕಾಭಿಷೇಕ ಮಹೋತ್ಸವ ದ ಹಿನ್ನೆಲೆಯಲ್ಲಿ ಬಾಹುಬಲಿಯ ಜೀವನ ವೃತ್ತಾಂತ ಸಾರುವ ಲೇಸರ್ ಷೋ ಗೆ ಚಿತ್ರ ನಟ ರಮೇಶ್ ಅರವಿಂದ್ ಚಾಲನೆ ನೀಡಿದರು.ರತ್ನಗಿರಿ ಬೆಟ್ಟದಲ್ಲಿ ವಿರಾಜಮಾನನಾದ ಬಾಹುಬಲಿ ಮೂರ್ತಿಯ ಮೇಲೆ ಲೇಸರ್ ಷೋ ಮಾಡಿದ್ದು, ಬಾಹುಬಲಿಯ ಜೀವನ ಸಾರುವ ಗತ ವೈಭವವನ್ನು ಷೋ ಮೂಲಕ ತೋರಿಸಲಾಯಿತು.
ರಮೇಶ್ ಅರವಿಂದ್ ಷೋ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಬಾಹುಬಲಿಯ ಉತ್ಸವ ಮಾಡೋದು ಬಾಹುಬಲಿಯ ವ್ಯಕ್ತಿತ್ವವನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಬೇಕೆಂಬ ಕಾರಣಕ್ಕಾಗಿ. ಧರ್ಮಸ್ಥಳ ಈ ಕಾರ್ಯದಲ್ಲಿ ಯಶಸ್ವಿಯಾಗಿದೆ ಎಂದರು.

ಬೆಂಗಳೂರು ಮೂಲದ ಕಂಪೆನಿ ಈ ಲೇಸರ್ ಷೋ ಪ್ರದರರ್ಶಿಸಿದ್ದು , ಡಾ ಡಿ ವೀರೇಂದ್ರ ಹೆಗ್ಗಡೆ ಯವರ ತಂತ್ರಜ್ಞಾನ ಬಳಕೆಯ ಆಸಕ್ತಿಗೆ ಸಾಕ್ಷಿಯಾಗಿದೆ. ನುರಿತ ತಂತ್ರಜ್ಞರು ಕಳೆದ ಒಂದು ತಿಂಗಳಿನಿಂದ ಷೋ ಗಾಗಿ ಶ್ರಮ ಪಟ್ಟಿದ್ದು ಬಾಹುಬಲಿಯ ಮೂರ್ತಿಯ ಮೇಲೆನೇ ಬಾಹುಬಲಿ ವ್ಯಕ್ತಿತ್ವ ಚಿತ್ರಿಸಿದ್ದು ಜನರ ಮೆಚ್ಚುಗೆ ಗಳಿಸಿದೆ.ಲೇಸರ್ ಷೋ ಫೆಬ್ರವರಿ 18 ತನಕ ಪ್ರತಿದಿನ ರಾತ್ರಿ ಪ್ರದರ್ಶನ ವಾಗಲಿದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications