ಪ್ರಣವಾನಂದ ಸ್ವಾಮೀಜಿಗೆ ಜೀವ ಬೆದರಿಕೆ ಕರೆ
ಮಂಗಳೂರು, ಜ.31 : ಕರ್ನಾಟಕದ ಐದು ನಗರಗಳಲ್ಲಿ ನಾಥುರಾಮ್ ಗೋಡ್ಸೆ ಪ್ರತಿಮೆ ನಿರ್ಮಾಣ ಮಾಡವುದಾಗಿ ಘೋಷಿಸಿದ್ದ ಪ್ರಣವಾನಂದ ಸ್ವಾಮೀಜಿ ಅವರಿಗೆ ಜೀವ ಬೆದರಿಕೆ ಕರೆ ಬರುತ್ತಿದೆ. ಮೊದಲ ದೇವಾಲಯ ಉದ್ಘಾಟನೆಯಾಗುವ ಮೊದಲ ದಿನ ನಿನ್ನನ್ನು ಕೊಲ್ಲುತ್ತೇವೆ ಎಂದು ಅನಾಮಿಕ ವ್ಯಕ್ತಿಗಳು ಕರೆ ಮಾಡಿ ಬೆದರಿಕೆ ಹಾಕಿದ್ದಾರೆ.
ಅಖಿಲ ಭಾರತ ಹಿಂದೂ ಮಹಾಸಭಾದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಅವರು ಕೆಲವು ದಿನಗಳ ಹಿಂದೆ ರಾಣಿಬೆನ್ನೂರು, ಮಂಗಳೂರು, ಕಾರವಾರ, ಬೆಂಗಳೂರು ಹಾಗೂ ಚಿತ್ರದುರ್ಗದಲ್ಲಿ ಸ್ವತಂತ್ರ್ಯ ಹೋರಾಟಗಾರ ನಾಥುರಾಮ್ ಗೋಡ್ಸೆ ಅವರ ದೇವಾಲಯ ನಿರ್ಮಿಸುತ್ತೇನೆ ಎಂದು ಘೋಷಿಸಿದ್ದರು.

ಸದ್ಯ, ಭೂಗತ ಪಾತಕಿಗಳು ದೇವಾಲಯ ಕಟ್ಟಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಮುಂಬೈನಿಂದ ದಿನಕ್ಕೊಂದರಂತೆ ಬೆದರಿಕೆ ಕರೆಗಳು ಮೂರು ದಿನಗಳಿಂದ ಬರುತ್ತಿವೆ, ಅಗತ್ಯ ರಕ್ಷಣೆ ನೀಡಿ ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ. [ಕರ್ನಾಟಕ ಸೇರಿ ದೇಶದೆಲ್ಲೆಡೆ ಗೋಡ್ಸೆ ಪ್ರತಿಮೆ ಸ್ಥಾಪನೆ!]
ಘೋಡ್ಸೆ ಪ್ರತಿಮೆ ನಿರ್ಮಾಣಕ್ಕಾಗಿ ಸಾರ್ವಜನಿಕ ಸ್ಥಳ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿಗೆ ಪತ್ರ ಬರೆಯಲಾಗುವುದು. ಒಂದು ವೇಳೆ ಅವರು ಸಾರ್ವಜನಿಕ ಸ್ಥಳ ನೀಡದಿದ್ದರೆ ಖಾಸಗಿ ಸ್ಥಳದಲ್ಲೇ ಪ್ರತಿಮೆ ನಿರ್ಮಾಣ ಮಾಡಲಾಗುವುದು ಎಂದು ಸ್ವಾಮೀಜಿ ಹೇಳಿದ್ದರು. ['ಮಹಾತ್ಮಾ ಗಾಂಧೀಜಿಯಂತೆ ಗೋಡ್ಸೆ ಕೂಡಾ ದೇಶಭಕ್ತ']

ದಿನಕ್ಕೊಂದು ನಂಬರ್ನಿಂದ ಕರೆ ಬರುತ್ತಿದ್ದು, ಮೊದಲ ದೇವಾಲಯ ಉದ್ಘಾಟನೆಯಾಗುವ ಮೊದಲ ದಿನ ನಿನ್ನನ್ನು ಕೊಲ್ಲುತ್ತೇವೆ ಎಂದು ಅನಾಮಿಕ ವ್ಯಕ್ತಿಗಳು ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ದುಷ್ಕರ್ಮಿಗಳನ್ನು ಬಂಧಿಸಿ, ತಮಗೆ ಅಗತ್ಯ ರಕ್ಷಣೆ ನೀಡಿ ಎಂದು ಅವರು ಪೊಲೀಸರಿಗೆ ಮನವಿ ಮಾಡಿದ್ದಾರೆ.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications