ಲಾಕ್ಡೌನ್ ಎಫೆಕ್ಟ್; ಕುಕ್ಕೆ ಸುಬ್ರಹ್ಮಣ್ಯದ ವಾರ್ಷಿಕ ಆದಾಯದಲ್ಲಿ ಭಾರೀ ಇಳಿಕೆ
ಮಂಗಳೂರು, ಏಪ್ರಿಲ್ 18: ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ದಕ್ಷಿಣ ಕನ್ನಡ ಜಿಲ್ಲೆಯ ನಾಗಕ್ಷೇತ್ರ ಸುಬ್ರಹ್ಮಣ್ಯದ ವಾರ್ಷಿಕ ಆದಾಯದಲ್ಲಿ ಭಾರೀ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ದೇಗುಲದ 2020 ಎಪ್ರಿಲ್ ನಿಂದ 2021 ಮಾರ್ಚ್ 31ರ ತನಕ ವಾರ್ಷಿಕ ಆದಾಯದ ಲೆಕ್ಕಾಚಾರ ಮಾಡಲಾಗಿದ್ದು, ಕಳೆದ ಬಾರಿಗಿಂತ ಈ ಬಾರಿ 29 ಕೋಟಿ ರೂಪಾಯಿ ಇಳಿಕೆ ಕಂಡುಬಂದಿದೆ. ಈ ಬಾರಿ ಅರವತ್ತೆಂಟು ಕೋಟಿ ತೊಂಬತ್ನಾಲ್ಕು ಲಕ್ಷ ಎಂಬತ್ತೆಂಟು ಸಾವಿರದ ಮೂವತ್ತೊಂಬತ್ತು ರೂಪಾಯಿ ಹದಿನೇಳು ಪೈಸೆ (68,94,88,039.17) ಆದಾಯ ಕಂಡು ಬಂದಿದ್ದು, ಕಳೆದ ಬಾರಿಗಿಂತ 29,97,36,154.17 ರೂ. ಆದಾಯ ಕಡಿಮೆ ಬಂದಿದೆ.
ಕಳೆದ ವರ್ಷ ಮಾರ್ಚ್ 17ರಿಂದ ಸೆ.8ರ ತನಕ ಲಾಕ್ಡೌನ್ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆಯಲ್ಲಿ ಕಡಿಮೆಯಾಗಿತ್ತು. ಮತ್ತು ದೇವಸ್ಥಾನ ಸಂಪೂರ್ಣ ಬಂದ್ ಆಗಿತ್ತು. ಲಾಕ್ಡೌನ್ ತೆರವಾದ ಬಳಿಕವೂ ಹಲವು ಕಾಲ ಸೇವೆಗಳು ಸಂಪೂರ್ಣವಾಗಿ ನಡೆದಿರಲಿಲ್ಲ. ಹೀಗಾಗಿ ಸೆಪ್ಟೆಂಬರ್ 15 ರಿಂದ ಮಾರ್ಚ್ 31ರವರೆಗಿನ ತನಕದ ಆದಾಯ ಇದಾಗಿದೆ.

ದೇವಸ್ಥಾನಕ್ಕೆ ಪ್ರಮುಖವಾಗಿ ಹರಕೆ ಸೇವೆ, ಕಾಣಿಕೆ ಡಬ್ಬಿ, ಬಡ್ಡಿ, ಛತ್ರಗಳ ಬಾಡಿಗೆ ಕಟ್ಟಡ ಬಾಡಿಗೆ ಮತ್ತು ಕೃಷಿ ತೋಟದಿಂದ ಆದಾಯ ಬರುತ್ತದೆ. ಎಲ್ಲವನ್ನು ಸೇರಿಸಿ ಈ ವರ್ಷದ ಆದಾಯ 68 ಕೋಟಿ 94 ಲಕ್ಷದ 88 ಸಾವಿರದ 039 ರೂಪಾಯಿ 17 ಪೈಸೆ ಆದಾಯ ಬಂದಿದೆ.
ದಕ್ಷಿಣಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರಾಜ್ಯ, ದೇಶಾದ್ಯಂತ ಭಕ್ತರು ಬರುತ್ತಾರೆ. ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಈ ನಿಟ್ಟಿನಲ್ಲಿ ಭಕ್ತರ ಅನುಕೂಲಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಮಾಡುತ್ತಿದೆ. ಈಗಾಗಲೇ 180 ಕೋಟಿ ರೂಪಾಯಿ ವೆಚ್ಚದಲ್ಲಿ ಮಾಸ್ಟರ್ ಪ್ಲಾನ್ ಯೋಜನೆಯ ಹಲವು ಕಾಮಗಾರಿ ನಡೆಯುತ್ತಿದೆ. ವಸತಿಗೃಹ ನಿರ್ಮಾಣ, ಶೌಚಾಲಯ, ಸಮಗ್ರ ನೀರು ಸರಬರಾಜು ಯೋಜನೆ, ಚರಂಡಿ ವ್ಯವಸ್ಥೆ, ರಸ್ತೆ ನಿರ್ಮಾಣ ಯೋಜನೆ ಪ್ರಗತಿಯಲ್ಲಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications