ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‌ಡೌನ್ ಸಡಿಲಿಕೆ; ವಿವರಗಳು

ಮಂಗಳೂರು, ಜೂನ್ 21; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದೆ. ಜೂನ್ 21ರಿಂದ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ.

ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ ಈ ಕುರಿತು ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅನ್‌ಲಾಕ್ 1.0 ಭಾಗವಾಗಿ ಅಗತ್ಯವಸ್ತು ಖರೀದಿ ಅವಧಿ ವಿಸ್ತರಣೆ ಮಾಡಲಾಗಿದೆ.

ಆದರೆ ಜಿಲ್ಲೆಯಾದ್ಯಂತ ರಾತ್ರಿ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ. ವಾರಾಂತ್ಯದ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಗ್ಗೆ 7ರವರೆಗೆ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರುತ್ತದೆ.

Lockdown Relaxation In Dakshina Kannada District

ಬಸ್ ಸಂಚಾರವಿಲ್ಲ; ದಕ್ಷಿಣ ಕನ್ನಡದಲ್ಲಿ ಯಾವುದೇ ಬಸ್ ಸಂಚಾರಕ್ಕೆ ಅನುಮತಿ ‌ನೀಡಿಲ್ಲ. ಜೂನ್ 21ರಿಂದ ಜುಲೈ 5ರ ಸಂಜೆಯವರೆಗೂ ಆದೇಶ ವಿಸ್ತರಿಸಲಾಗಿದೆ.

ಆಹಾರ, ದಿನಸಿ, ಹಣ್ಣು-ತರಕಾರಿ, ಮೀನು-ಮಾಂಸ, ಬೀದಿಬದಿ ವ್ಯಾಪಾರ ಮತ್ತು ಮದ್ಯ ಪಾರ್ಸೆಲ್‌ಗೆ ಮಾತ್ರ ಮಧ್ಯಾಹ್ನ 1ರವರೆಗೆ ಅವಕಾಶ ನೀಡಲಾಗಿದೆ.

ಜಿಲ್ಲೆಯಲ್ಲಿ ಪಾರ್ಕ್ ಮತ್ತು ಸಾರ್ವಜನಿಕ ಉದ್ಯಾನ ತೆರೆಯಲು ಅವಕಾಶ ಇಲ್ಲ. ನಿರ್ಮಾಣ ಚಟುವಟಿಕೆ ಮತ್ತು ಸ್ಟೀಲ್, ಸಿಮೆಂಟ್ ಅಂಗಡಿಗಳಿಗೆ ಅನುಮತಿ ನೀಡಲಾಗಿದೆ.

ಆಟೋ ರಿಕ್ಷಾ ಮತ್ತು ಟ್ಯಾಕ್ಸಿಯಲ್ಲಿ ಇಬ್ಬರು ಪ್ರಯಾಣಿಕರ ಸಹಿತ ಸಂಚರಿಸಬಹುದಾಗಿದೆ. ಕೆಎಸ್ಆರ್‌ಟಿಸಿ ಬಸ್ ಸಂಚಾರವಿಲ್ಲ. ಹೊರ ಜಿಲ್ಲೆಯಿಂದಲೂ ಬಸ್ ಆಗಮಿಸುವಂತಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+