ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಚುನಾವಣಾ ಅಸ್ತ್ರವಾದ ಭಾಷಾ ಸಮರ
ಉಡುಪಿ, ಮಾರ್ಚ್ 26: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಹಿಂದಿ ಇಂಗ್ಲಿಷ್ ಭಾಷಾ ಸಮರ..ವಾದ ಪ್ರತಿವಾದ ಮುಂದುವರೆದಿದೆ. ಕೋಟ ಶ್ರೀನಿವಾಸ ಪೂಜಾರಿ ಇದೇ ವಿಚಾರವನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ. ಜಯಪ್ರಕಾಶ್ ಹೆಗಡೆ ಸ್ಪಷ್ಟಿಕರಣ ಕೊಟ್ಟು, ಒಂದೇ ವೇದಿಕೆಗೆ ಬಂದು ಚರ್ಚೆ ಮಾಡೋಣ ಎಂದು ಸವಾಲು ಹಾಕಿದ್ದಾರೆ.
ಸಂಸದನಾದವನಿಗೆ ಹಿಂದಿ ಇಂಗ್ಲಿಷ್ ಬರಬೇಕು.. ಭಾಷೆ ಬರದಿದ್ದರೆ ಸಂಸತ್ತಿನಲ್ಲಿ ಅಧಿಕಾರಿಗಳ ಜೊತೆ ಮಾತನಾಡಿ ಜೊತೆ ಕೆಲಸ ಮಾಡಿಸಲಿಕ್ಕೂ ಕಷ್ಟ. ಸಂಸತ್ ಕಲಾಪದಲ್ಲಿ ಭಾಷಣ ಮಾಡಿದರೆ ಯಾರಿಗೂ ಅರ್ಥವಾಗುವುದಿಲ್ಲ. ಹೀಗಂತ ಜಯಪ್ರಕಾಶ್ ಹೆಗ್ಡೆ ಅಭಿಪ್ರಾಯ ಹೇಳಿದ್ದೆ ತಡ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಭಾಷಾ ಸಮರ ಆರಂಭವಾಗಿದೆ. ನಾನು ಆರು ತಿಂಗಳಲ್ಲಿ ಹಿಂದಿ ಕಲಿತು ಸಂಸತ್ತಿನಲ್ಲಿ ಭಾಷಣ ಮಾಡುತ್ತೇನೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿ ಇದೇ ವಿಚಾರವನ್ನು ಪ್ರಚಾರದ ವಸ್ತುವಾಗಿ ಮಾಡಿದ್ದಾರೆ. ಕೋಟ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಮರಸಾರಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿರುವ ಕೋಟ, ಕೂಲಿ ಮಾಡುವವರ ಕುಟುಂಬದಿಂದ ಬಂದವನು. ನಾನು ಕೂಲಿ ಮಾಡುತ್ತಿದ್ದೆ. ಹಿಂದಿ ಕಲಿತೇನೆ ಎಂದಿದ್ದಾರೆ.
ಟಿಕೆಟ್ ಘೋಷಣೆಯಾದ ನಂತರ ಜಯಪ್ರಕಾಶ್ ಹೆಗ್ಗಡೆ ಉಡುಪಿ ಜಿಲ್ಲೆಗೆ ಆಗಮಿಸಿದ್ದಾರೆ ಮುಂದಿನ ಚುನಾವಣಾ ಪ್ರಚಾರ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಚರ್ಚಿಸಿದ್ದಾರೆ. ಈ ಸಂದರ್ಭದಲ್ಲಿ ಸಂಸದನ ಭಾಷಾ ಕಿಚ್ಚಿಗೆ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಇಷ್ಟು ವರ್ಷದ ರಾಜಕೀಯದಲ್ಲಿ ನಾನು ಯಾರ ಬಗ್ಗೆಯೂ ಕೀಳಾಗಿ ಮಾತಾಡಿಲ್ಲ.1994ರಿಂದ ಇಂದಿನವರೆಗೆ ವಿಧಾನಸಭೆಯಲ್ಲಿ ನಾನು ಆಡಿದ ಮಾತನ್ನು ಕಡತದಿಂದ ತೆಗೆದುಹಾಕಿಲ್ಲ. ಅವರ ಪಕ್ಷದವರೇ ಅವರನ್ನು ಕೀಳಾಗಿ ಮಾತನಾಡುತ್ತಿದ್ದಾರೆ ಬಿಟ್ಟರೆ ನಾನಲ್ಲ ಎಂದು ತಿರುಗೇಟು ನೀಡಿದ್ದಾರೆ.
ಕರಾವಳಿ ಮಲೆನಾಡನ್ನು ಹಂಚಿಕೊಂಡ ಚುನಾವಣಾ ರಣಾಂಗಣದಲ್ಲಿ ಸಜ್ಜನ ವರ್ಸಸ್ ಸಿಂಪಲ್ ಖ್ಯಾತಿಯ ಇಬ್ಬರು ಅಭ್ಯರ್ಥಿಗಳ ನಡುವಿನ ಹೋರಾಟಕ್ಕೆ ಭಾಷೆ ಮೊದಲ ಅಸ್ತ್ರವಾಗಿದೆ. ಚುನಾವಣೆಗೆ ಭರ್ತಿ ಒಂದು ತಿಂಗಳು ಬಾಕಿ ಇದೆ. ಕದನ ಕಲಿಗಳಿಂದ ಯಾವೆಲ್ಲಾ ಪಟ್ಟುಗಳ ಪ್ರದರ್ಶನ ಆಗುತ್ತದೆ ಎಂಬ ಕುತೂಹಲವಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications