2023 Bastille Day Military Parade: ರಾಜ್ಯಕ್ಕೆ ಹೆಮ್ಮೆ ತಂದ ಮಂಗಳೂರಿನ ಕುವರಿ ದಿಶಾ ಅಮೃತ್
ಮಂಗಳೂರು, ಜುಲೈ 11: ಗಣರಾಜ್ಯೋತ್ಸವ ಪೆರೇಡ್ನಲ್ಲಿ ನೌಕಾಪಡೆಯ ತುಕಡಿಯನ್ನು ಮುನ್ನಡೆಸಿ ನಾಡಿಗೆ ಹೆಮ್ಮೆ ತಂದ ಲೆಫ್ಟಿನೆಂಟ್ ಕಮಾಂಡರ್ ಮಂಗಳೂರಿನ ದಿಶಾ ಅಮೃತ್ ಈ ಬಾರಿ ಪ್ಯಾರಿಸ್ನ ಬಾಸ್ಟಿಲ್ ಡೇ ಪರೇಡ್ನಲ್ಲಿ ಭಾಗವಹಿಸಲಿದ್ದು, ನಾಡಿಗೆ ಮತ್ತೊಮ್ಮೆ ಹಿರಿಮೆ ತರಲಿದ್ದಾರೆ.
ಫ್ರಾನ್ಸ್ನ ಪ್ಯಾರಿಸ್ನಲ್ಲಿ ಜು.14ರಂದು ಬಾಸ್ಟಿಲ್ಸ್ ಡೇ ಪರೇಡ್ (ಫ್ರಾನ್ಸ್ ರಾಷ್ಟ್ರೀಯ ದಿನಾಚರಣೆ) ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಈ ಭಾರತದ ನೌಕಾ ದಳ, ಭೂ ದಳ, ವಾಯು ದಳ ಸೇರಿದಂತೆ ಮೂರು ತುಕಡಿಗಳು ಭಾಗವಹಿಸಲಿವೆ.

ಜು.14 ರಂದು ನಡೆಯಲಿರುವ ಬ್ಯಾಸ್ಟಿಲ್ ಪರೇಡ್ನಲ್ಲಿ ಭಾಗವಹಿಸಲು ಈಗಾಗಲೇ ನೌಕಾಪಡೆಯ ನಾಲ್ಕು ಮಂದಿ ಅಧಿಕಾರಿಗಳು ಹಾಗೂ 64 ನಾವಿಕರ ತಂಡ ಪ್ಯಾರಿಸ್ ತಲುಪಿದೆ. ಈ ನಾಲ್ವರು ಅಧಿಕಾರಿಗಳ ಪೈಕಿ ದಿಶಾ ಅಮೃತ್ ಕೂಡ ಓರ್ವರಾಗಿದ್ದಾರೆ. ನೌಕಾ ತುಕಡಿಯನ್ನು ಕಮಾಂಡರ್ ವ್ರತ್ ಬಘೇಲ್ ಮುನ್ನಡೆಸಲಿದ್ದು, ಲೆ. ಕಮಾಂಡರ್ ದಿಶಾ ಅಮೃತ್ ಹಾಗೂ ಲೆಫ್ಟಿನೆಂಟ್ ಕಮಾಂಡರ್ ರಜತ್ ತ್ರಿಪಾಠಿ, ಲೆಫ್ಟಿನೆಂಟ್ ಕಮಾಂಡರ್ ಜಿತಿನ್ ಲಲಿತಾ ಧರ್ಮರಾಜ್ ಅವರು ತುಕಡಿಯನ್ನು ಪ್ರತಿನಿಧಿಸಲಿದ್ದಾರೆ.
ಫ್ರಾನ್ಸ್ನ ರಾಷ್ಟ್ರೀಯ ದಿನಾಚರಣೆ ಮಾತ್ರ ಅಲ್ಲದೇ, ಅದೇ ದಿನ ಇಂಡೋ-ಫ್ರಾನ್ಸ್ ಕಾರ್ಯತಂತ್ರ ಪಾಲುದಾರಿಕೆಯ 25ನೇ ವಾರ್ಷಿಕೋತ್ಸವವೂ ನಡೆಯುತ್ತಿರುವುದು ಗಮನಾರ್ಹವಾಗಿದೆ.
ಇನ್ನು ಪ್ರಸಕ್ತ ವರ್ಷ, ಭಾರತ- ಫ್ರಾನ್ಸ್ ನಿರ್ಣಾಯಕ ಪಾಲುದಾರಿಕೆಯ ತ್ರೈಮಾಸಿಕ ಶತಮಾನವನ್ನು ಸಂಕೇತಿಸುತ್ತದೆ. ಉಭಯ ರಾಷ್ಟ್ರಗಳು ಸಾಗರ ರಕ್ಷಣಾ ವಲಯ ಸಹಿತ ನೌಕಾರಂಗದಲ್ಲಿ ಗಾಢ ಬಾಂಧವ್ಯವನ್ನು ಹೊಂದಿವೆ. ಉಭಯ ರಾಷ್ಟ್ರಗಳ ನಡುವಣ ದ್ವಿಪಕ್ಷೀಯ ಕವಾಯತು ನೌಕಾ ಶಕ್ತಿಯ ಎಲ್ಲ ಆಯಾಮಗಳನ್ನು ಒಳಗೊಂಡ ಸದೃಢ ಕವಾಯತಾಗಿ ಹೊರಹೊಮ್ಮಲಿದೆ. ಈ ಪರೇಡ್ ಭಾರತ-ಫ್ರಾನ್ಸ್ ನಡುವಿನ ಬಾಂಧವ್ಯದ ಬೆಳವಣಿಗೆಯನ್ನು ಪ್ರತಿಬಿಂಬಿಸಲಿದೆ.
ನೌಕದಳದ ವಿಶೇಷ ಸಾಧಕಿ ದಿಶಾ ಅಮೃತ್ ಯಾರು?
ದಿಶಾ ಅವರು ಮಂಗಳೂರಿನ ಬೋಳೂರು ತಿಲಕ್ ನಗರದ ಅಮೃತ್ ಕುಮಾರ್ ಮತ್ತು ಲೀಲಾ ಅಮೃತ್ ದಂಪತಿ ಪುತ್ರಿಯಾಗಿದ್ದಾರೆ. ಬಾಲ್ಯದಲ್ಲೇ ನೌಕಾಪಡೆ ಅಧಿ ಕಾರಿಯಾಗಬೇಕೆಂದು ಕನಸು ಕಂಡವರು ದಿಶಾ ಅಮೃತ್. ದಿಶಾ ಅವರು ಮಂಗಳೂರಿನ ಕೆನರಾ, ಅಲೋಶಿಯಸ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿ, ಬೆಂಗಳೂರಿನ ಬಿಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಬಿಇ ಕಂಪ್ಯೂಟರ್ ಸೈನ್ಸ್ ಕಲಿತು ಬಳಿಕ ತನ್ನ ಇಚ್ಚೆಯಂತೆ ನೌಕಾಪಡೆ ಸೇರಿದರು. 2016ರಲ್ಲಿ ನೌಕಾಪಡೆ ಸೇರಿದ ಇವರು ಪ್ರಸ್ತುತ ಲೆಫ್ಟಿನೆಂಟ್ ಕಮಾಂಡರ್ ಆಗಿದ್ದು, ಇವರ ಪತಿ ರಾಹುಲ್ ಭಾರತೀಯ ಸೇವೆಯಲ್ಲಿ ಜನರಲ್ ಆಗಿದ್ದಾರೆ.
ಈ ಬಗ್ಗೆ ದಿಶಾ ಅಮೃತ್ ತಂದೆ ಅನೃತ್ ಕುಮಾರ್ ಬೋಳೂರು ಮಾತನಾಡಿ ದಿಶಾ ಅಮೃತ್ಗೆ ನೌಕಾಪಡೆಯ ಅಧಿಕಾರಿಯಾಗಬೇಕೆಂದು ಬಾಲ್ಯದಿಂದಲೇ ಕನಸು ಇತ್ತು. ಈ ಗುರಿಯಿಟ್ಟುಕೊಂಡು ಸಾಧನೆ ಮಾಡಿದ ದಿಶಾ ಅಮೃತ್ ಸಾಧನೆ ನಮಗೆ ಹೆಮ್ಮೆ ಎನಿಸುತ್ತಿದೆ. ಮತ್ತಷ್ಟು ಸಾಧನೆ ಮಾಡಬೇಕೆಂಬ ತುಡಿತ ದಿಶಾಗೆ ಇದೆ ಎಂದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications