2023 Bastille Day Military Parade: ರಾಜ್ಯಕ್ಕೆ ಹೆಮ್ಮೆ ತಂದ ಮಂಗಳೂರಿನ ಕುವರಿ ದಿಶಾ ಅಮೃತ್
ಮಂಗಳೂರು, ಜುಲೈ 11: ಗಣರಾಜ್ಯೋತ್ಸವ ಪೆರೇಡ್ನಲ್ಲಿ ನೌಕಾಪಡೆಯ ತುಕಡಿಯನ್ನು ಮುನ್ನಡೆಸಿ ನಾಡಿಗೆ ಹೆಮ್ಮೆ ತಂದ ಲೆಫ್ಟಿನೆಂಟ್ ಕಮಾಂಡರ್ ಮಂಗಳೂರಿನ ದಿಶಾ ಅಮೃತ್ ಈ ಬಾರಿ ಪ್ಯಾರಿಸ್ನ ಬಾಸ್ಟಿಲ್ ಡೇ ಪರೇಡ್ನಲ್ಲಿ ಭಾಗವಹಿಸಲಿದ್ದು, ನಾಡಿಗೆ ಮತ್ತೊಮ್ಮೆ ಹಿರಿಮೆ ತರಲಿದ್ದಾರೆ.
ಫ್ರಾನ್ಸ್ನ ಪ್ಯಾರಿಸ್ನಲ್ಲಿ ಜು.14ರಂದು ಬಾಸ್ಟಿಲ್ಸ್ ಡೇ ಪರೇಡ್ (ಫ್ರಾನ್ಸ್ ರಾಷ್ಟ್ರೀಯ ದಿನಾಚರಣೆ) ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಈ ಭಾರತದ ನೌಕಾ ದಳ, ಭೂ ದಳ, ವಾಯು ದಳ ಸೇರಿದಂತೆ ಮೂರು ತುಕಡಿಗಳು ಭಾಗವಹಿಸಲಿವೆ.

ಜು.14 ರಂದು ನಡೆಯಲಿರುವ ಬ್ಯಾಸ್ಟಿಲ್ ಪರೇಡ್ನಲ್ಲಿ ಭಾಗವಹಿಸಲು ಈಗಾಗಲೇ ನೌಕಾಪಡೆಯ ನಾಲ್ಕು ಮಂದಿ ಅಧಿಕಾರಿಗಳು ಹಾಗೂ 64 ನಾವಿಕರ ತಂಡ ಪ್ಯಾರಿಸ್ ತಲುಪಿದೆ. ಈ ನಾಲ್ವರು ಅಧಿಕಾರಿಗಳ ಪೈಕಿ ದಿಶಾ ಅಮೃತ್ ಕೂಡ ಓರ್ವರಾಗಿದ್ದಾರೆ. ನೌಕಾ ತುಕಡಿಯನ್ನು ಕಮಾಂಡರ್ ವ್ರತ್ ಬಘೇಲ್ ಮುನ್ನಡೆಸಲಿದ್ದು, ಲೆ. ಕಮಾಂಡರ್ ದಿಶಾ ಅಮೃತ್ ಹಾಗೂ ಲೆಫ್ಟಿನೆಂಟ್ ಕಮಾಂಡರ್ ರಜತ್ ತ್ರಿಪಾಠಿ, ಲೆಫ್ಟಿನೆಂಟ್ ಕಮಾಂಡರ್ ಜಿತಿನ್ ಲಲಿತಾ ಧರ್ಮರಾಜ್ ಅವರು ತುಕಡಿಯನ್ನು ಪ್ರತಿನಿಧಿಸಲಿದ್ದಾರೆ.
ಫ್ರಾನ್ಸ್ನ ರಾಷ್ಟ್ರೀಯ ದಿನಾಚರಣೆ ಮಾತ್ರ ಅಲ್ಲದೇ, ಅದೇ ದಿನ ಇಂಡೋ-ಫ್ರಾನ್ಸ್ ಕಾರ್ಯತಂತ್ರ ಪಾಲುದಾರಿಕೆಯ 25ನೇ ವಾರ್ಷಿಕೋತ್ಸವವೂ ನಡೆಯುತ್ತಿರುವುದು ಗಮನಾರ್ಹವಾಗಿದೆ.
ಇನ್ನು ಪ್ರಸಕ್ತ ವರ್ಷ, ಭಾರತ- ಫ್ರಾನ್ಸ್ ನಿರ್ಣಾಯಕ ಪಾಲುದಾರಿಕೆಯ ತ್ರೈಮಾಸಿಕ ಶತಮಾನವನ್ನು ಸಂಕೇತಿಸುತ್ತದೆ. ಉಭಯ ರಾಷ್ಟ್ರಗಳು ಸಾಗರ ರಕ್ಷಣಾ ವಲಯ ಸಹಿತ ನೌಕಾರಂಗದಲ್ಲಿ ಗಾಢ ಬಾಂಧವ್ಯವನ್ನು ಹೊಂದಿವೆ. ಉಭಯ ರಾಷ್ಟ್ರಗಳ ನಡುವಣ ದ್ವಿಪಕ್ಷೀಯ ಕವಾಯತು ನೌಕಾ ಶಕ್ತಿಯ ಎಲ್ಲ ಆಯಾಮಗಳನ್ನು ಒಳಗೊಂಡ ಸದೃಢ ಕವಾಯತಾಗಿ ಹೊರಹೊಮ್ಮಲಿದೆ. ಈ ಪರೇಡ್ ಭಾರತ-ಫ್ರಾನ್ಸ್ ನಡುವಿನ ಬಾಂಧವ್ಯದ ಬೆಳವಣಿಗೆಯನ್ನು ಪ್ರತಿಬಿಂಬಿಸಲಿದೆ.
ನೌಕದಳದ ವಿಶೇಷ ಸಾಧಕಿ ದಿಶಾ ಅಮೃತ್ ಯಾರು?
ದಿಶಾ ಅವರು ಮಂಗಳೂರಿನ ಬೋಳೂರು ತಿಲಕ್ ನಗರದ ಅಮೃತ್ ಕುಮಾರ್ ಮತ್ತು ಲೀಲಾ ಅಮೃತ್ ದಂಪತಿ ಪುತ್ರಿಯಾಗಿದ್ದಾರೆ. ಬಾಲ್ಯದಲ್ಲೇ ನೌಕಾಪಡೆ ಅಧಿ ಕಾರಿಯಾಗಬೇಕೆಂದು ಕನಸು ಕಂಡವರು ದಿಶಾ ಅಮೃತ್. ದಿಶಾ ಅವರು ಮಂಗಳೂರಿನ ಕೆನರಾ, ಅಲೋಶಿಯಸ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿ, ಬೆಂಗಳೂರಿನ ಬಿಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಬಿಇ ಕಂಪ್ಯೂಟರ್ ಸೈನ್ಸ್ ಕಲಿತು ಬಳಿಕ ತನ್ನ ಇಚ್ಚೆಯಂತೆ ನೌಕಾಪಡೆ ಸೇರಿದರು. 2016ರಲ್ಲಿ ನೌಕಾಪಡೆ ಸೇರಿದ ಇವರು ಪ್ರಸ್ತುತ ಲೆಫ್ಟಿನೆಂಟ್ ಕಮಾಂಡರ್ ಆಗಿದ್ದು, ಇವರ ಪತಿ ರಾಹುಲ್ ಭಾರತೀಯ ಸೇವೆಯಲ್ಲಿ ಜನರಲ್ ಆಗಿದ್ದಾರೆ.
ಈ ಬಗ್ಗೆ ದಿಶಾ ಅಮೃತ್ ತಂದೆ ಅನೃತ್ ಕುಮಾರ್ ಬೋಳೂರು ಮಾತನಾಡಿ ದಿಶಾ ಅಮೃತ್ಗೆ ನೌಕಾಪಡೆಯ ಅಧಿಕಾರಿಯಾಗಬೇಕೆಂದು ಬಾಲ್ಯದಿಂದಲೇ ಕನಸು ಇತ್ತು. ಈ ಗುರಿಯಿಟ್ಟುಕೊಂಡು ಸಾಧನೆ ಮಾಡಿದ ದಿಶಾ ಅಮೃತ್ ಸಾಧನೆ ನಮಗೆ ಹೆಮ್ಮೆ ಎನಿಸುತ್ತಿದೆ. ಮತ್ತಷ್ಟು ಸಾಧನೆ ಮಾಡಬೇಕೆಂಬ ತುಡಿತ ದಿಶಾಗೆ ಇದೆ ಎಂದರು.
-
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ












Click it and Unblock the Notifications