ಚಂದ್ರ ಗ್ರಹಣ: ದಕ್ಷಿಣ ಕನ್ನಡದ ದೇವಸ್ಥಾನಗಳಲ್ಲಿ ಪೂಜಾ ಸಮಯ ಬದಲಾವಣೆ ಇರಲಿದೆಯೇ?
ಮಂಗಳೂರು, ನವೆಂಬರ್ 18: ನವೆಂಬರ್ 19 ಕಾರ್ತಿಕ ಪೂರ್ಣಿಮೆಯ ದಿನ ಶುಕ್ರವಾರ ಸಂಭವಿಸುವ ಅಪರೂಪದ ಚಂದ್ರ ಗ್ರಹಣ ಸಮಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ದೇವಸ್ಥಾನಗಳಲ್ಲಿ ಪೂಜಾ ಸಮಯ ಬದಲಾವಣೆ, ವಿಶೇಷ ಪೂಜೆ, ಸ್ವಚ್ಛತೆ ಇರುವುದಿಲ್ಲ.
ಭಾರತದ ದಕ್ಷಿಣ ಭಾಗಕ್ಕೆ ಈ ಚಂದ್ರ ಗ್ರಹಣದ ಎಫೆಕ್ಟ್ ಇಲ್ಲದಿರುವುದರಿಂದ ಯಾವುದೇ ಬದಲಾವಣೆ ಇಲ್ಲ ಅಂತಾ ದೇವಸ್ಥಾನಗಳ ಆಡಳಿತ ಮಂಡಳಿ ಹೇಳಿವೆ.
ಈ ತಿಂಗಳ ಕಾರ್ತಿಕ ಪೂರ್ಣಿಮೆ ವಿಶೇಷವಾಗಿರಲಿದ್ದು, ನವೆಂಬರ್ 19 ಕಾರ್ತಿಕ ಪೂರ್ಣಿಮೆಯ ದಿನ ಈ ಶತಮಾನದ ಅತ್ಯಂತ ಸುದೀರ್ಘ ಚಂದ್ರ ಗ್ರಹಣ ನಡೆಯಲಿದೆ.

ಭಾಗಶಃ ಚಂದ್ರಗ್ರಹಣ ಇದೇ ನವೆಂಬರ್ 19ರಂದು ಸಂಭವಿಸಲಿದೆ. ವಿಶೇಷವಾಗಿ ಚಂದ್ರ ಮತ್ತು ಭೂಮಿಯ ನಡುವಿನ ಹೆಚ್ಚಿನ ಅಂತರದಿಂದಾಗಿ, ಈ ಗ್ರಹಣವು ದೀರ್ಘಾವಧಿಯವರೆಗೆ ಇರುತ್ತದೆ.
ಈ ಭಾಗಶಃ ಚಂದ್ರ ಗ್ರಹಣದ ಅವಧಿ 3 ಗಂಟೆ 28 ನಿಮಿಷ 24 ಸೆಕೆಂಡುಗಳು. ಇದಕ್ಕೂ ಮೊದಲು 18 ಫೆಬ್ರವರಿ 1440 ರಂದು ಅಂತಹ ದೀರ್ಘ ಚಂದ್ರ ಗ್ರಹಣ ಸಂಭವಿಸಿತ್ತು. ಅಂದರೆ, ಇಷ್ಟು ದೀರ್ಘಾವಧಿಯ ಈ ಭಾಗಶಃ ಚಂದ್ರಗ್ರಹಣವು 580 ವರ್ಷಗಳ ನಂತರ ಸಂಭವಿಸುತ್ತಿದೆ.
ಈ ವೇಳೆ, ಸುಮಾರು 1:30 ಮಧ್ಯಾಹ್ನ ನಂತರ ಪೂರ್ಣ ಚಂದ್ರಗ್ರಹಣವು ಪೂರ್ಣ ಪ್ರಮಾಣದಲ್ಲಿರಲಿದೆ. ಈ ಸಂದರ್ಭದಲ್ಲಿ ಭೂಮಿಯು 97 ಪ್ರತಿಶತದಷ್ಟು ಪೂರ್ಣ ಚಂದ್ರನನ್ನು ಸೂರ್ಯನ ಕಿರಣಗಳಿಂದ ಮರೆಮಾಡುತ್ತದೆ ಎಂದು ನಾಸಾ ಹೇಳಿದೆ.
ಈ ಚಂದ್ರ ಗ್ರಹಣವು 3 ಗಂಟೆ 28 ನಿಮಿಷ ಹಾಗೂ 23 ಸೆಕೆಂಡುಗಳ ಕಾಲ ಇರಲಿದೆ. ಹಾಗಾಗಿಯೇ ಈ ಶತಮಾನದ ಸುದೀರ್ಘ ಚಂದ್ರ ಗ್ರಹಣ ಎನಿಸಿಕೊಳ್ಳಲಿದೆ. 2001ರಿಂದ 2100ವರೆಗಿನ ಅವಧಿಯಲ್ಲಿ ಇಷ್ಟು ಸುದೀರ್ಘವಾದ ಯಾವುದೇ ಚಂದ್ರ ಗ್ರಹಣ ಇರುವುದಿಲ್ಲ. ಹಾಗಾಗಿಯೇ ಇದನ್ನು ಶತಮಾನದ ಸುದೀರ್ಘ ಚಂದ್ರ ಗ್ರಹಣ ಎಂದು ಕರೆಯಲಾಗುತ್ತಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಹೇಳಿದೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications