ಬಿಜೆಪಿ ಸೋಲಿಸಲು ಮೈತ್ರಿಗೆ ಎಸ್ ಡಿಪಿಐ ಸಿದ್ಧ: ಎಂ.ಕೆ. ಫೈಝಿ
ಮಂಗಳೂರು, ಸೆಪ್ಟೆಂಬರ್. 26: ದೇಶದ ಕೋಮುವಾದಿಗಳ ಪಕ್ಷವಾದ ಬಿಜೆಪಿಯನ್ನು ಸೋಲಿಸುವ ಸಲುವಾಗಿ ಯಾವ ಪಕ್ಷವಾದರೂ ಮೈತ್ರಿಗೆ ಎಸ್ ಡಿಪಿಐ ಸಿದ್ಧವಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಝಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಅಘೋಷಿತ ತುರ್ತು ಪರಿಸ್ಥಿತಿ ವಾತಾವರಣ ಸೃಷ್ಟಿ ಮಾಡಿದೆ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಕಳೆದ ನಾಲ್ಕು ವರ್ಷದಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿದೆ.
ಸರಕಾರದ ನೀತಿ, ಕಾರ್ಯಕ್ರಮ, ಉದ್ದೇಶಗಳನ್ನು ಪ್ರಶ್ನಿಸುವವರನ್ನು ಬಂಧಿಸುವ ಪ್ರಕ್ರಿಯೆ ಹೆಚ್ಚುತ್ತಿವೆ. ನಗರ ನಕ್ಸಲ್ ಹೆಸರಿನಲ್ಲಿ ಬೆದರಿಸುವ ಪ್ರಕ್ರಿಯೆ ಆರಂಭವಾಗಿದೆ. ನಗರ ನಕ್ಸಲ್ ಎಂದು ಹಣೆಪಟ್ಟಿ ಕಟ್ಟಿ ಪ್ರಗತಿಪರ ಚಿಂತಕರನ್ನು ಗುರಿಯಾಗಿಸುವ ಷಡ್ಯಂತ್ರ ನಡೆಯುತ್ತಿವೆ ಎಂದು ಫೈಝಿ ಆರೋಪಿಸಿದರು.

ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದ ದಿನದಿಂದ ಜನರ ಮೇಲೆ ದೌರ್ಜನ್ಯ ಎಸಗುತ್ತಿದೆ. ತನ್ನ ಜನವಿರೋಧಿ ತಪ್ಪು ನೀತಿಗಳನ್ನು ಹೇರುತ್ತಿದೆ. ತನ್ನ ವಿಫಲತೆಗಳನ್ನು ಮರೆ ಮಾಚಲು ವಿಷಯಾಂತರದ ಮೂಲಕ ಜನರ ದಿಕ್ಕು ತಪ್ಪಿಸುತ್ತಿದೆ.
ಬಿಜೆಪಿಯ ಸೋಲಿಗೆ ಕಾಂಗ್ರೆಸ್ ನೇತೃತ್ವದ ಎಡಪಕ್ಷಗಳನ್ನೊಳಗೊಂಡ ಮೈತ್ರಿಗೆ ವೇದಿಕೆ ಸಿದ್ಧವಾದರೆ ಎಸ್ ಡಿಪಿಐ ಕೂಡ ಅದರಲ್ಲಿ ಭಾಗವಹಿಸಿ ಪೂರ್ಣ ಸಹಕಾರ ನೀಡಲಿದೆ. ದೇಶದಲ್ಲಿ ಬಿಜೆಪಿಯನ್ನು ಸೋಲಿಸಲು ನಡೆಯುವ ಎಲ್ಲಾ ಪ್ರಯತ್ನಕ್ಕೆ ನಮ್ಮ ಬೆಂಬಲವಿದೆ.
ಇಲ್ಲಿ ಕಾಂಗ್ರೆಸ್, ಎಡಪಕ್ಷಗಳ ಪ್ರಶ್ನೆ ಉದ್ಭವಿಸುವುದಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಮಹಾಮೈತ್ರಿ ಅಥವಾ ತೃತೀಯ ರಂಗದೊಂದಿಗೂ ಕೈ ಜೋಡಿಸಲು ಪಕ್ಷ ಸಿದ್ಧವಿದೆ ಎಂದು ಫೈಝಿ ಸ್ಪಷ್ಟಪಡಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications