ಬಿಜೆಪಿ ಸೋಲಿಸಲು ಮೈತ್ರಿಗೆ ಎಸ್ ಡಿಪಿಐ ಸಿದ್ಧ: ಎಂ.ಕೆ. ಫೈಝಿ
ಮಂಗಳೂರು, ಸೆಪ್ಟೆಂಬರ್. 26: ದೇಶದ ಕೋಮುವಾದಿಗಳ ಪಕ್ಷವಾದ ಬಿಜೆಪಿಯನ್ನು ಸೋಲಿಸುವ ಸಲುವಾಗಿ ಯಾವ ಪಕ್ಷವಾದರೂ ಮೈತ್ರಿಗೆ ಎಸ್ ಡಿಪಿಐ ಸಿದ್ಧವಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಝಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಅಘೋಷಿತ ತುರ್ತು ಪರಿಸ್ಥಿತಿ ವಾತಾವರಣ ಸೃಷ್ಟಿ ಮಾಡಿದೆ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಕಳೆದ ನಾಲ್ಕು ವರ್ಷದಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿದೆ.
ಸರಕಾರದ ನೀತಿ, ಕಾರ್ಯಕ್ರಮ, ಉದ್ದೇಶಗಳನ್ನು ಪ್ರಶ್ನಿಸುವವರನ್ನು ಬಂಧಿಸುವ ಪ್ರಕ್ರಿಯೆ ಹೆಚ್ಚುತ್ತಿವೆ. ನಗರ ನಕ್ಸಲ್ ಹೆಸರಿನಲ್ಲಿ ಬೆದರಿಸುವ ಪ್ರಕ್ರಿಯೆ ಆರಂಭವಾಗಿದೆ. ನಗರ ನಕ್ಸಲ್ ಎಂದು ಹಣೆಪಟ್ಟಿ ಕಟ್ಟಿ ಪ್ರಗತಿಪರ ಚಿಂತಕರನ್ನು ಗುರಿಯಾಗಿಸುವ ಷಡ್ಯಂತ್ರ ನಡೆಯುತ್ತಿವೆ ಎಂದು ಫೈಝಿ ಆರೋಪಿಸಿದರು.

ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದ ದಿನದಿಂದ ಜನರ ಮೇಲೆ ದೌರ್ಜನ್ಯ ಎಸಗುತ್ತಿದೆ. ತನ್ನ ಜನವಿರೋಧಿ ತಪ್ಪು ನೀತಿಗಳನ್ನು ಹೇರುತ್ತಿದೆ. ತನ್ನ ವಿಫಲತೆಗಳನ್ನು ಮರೆ ಮಾಚಲು ವಿಷಯಾಂತರದ ಮೂಲಕ ಜನರ ದಿಕ್ಕು ತಪ್ಪಿಸುತ್ತಿದೆ.
ಬಿಜೆಪಿಯ ಸೋಲಿಗೆ ಕಾಂಗ್ರೆಸ್ ನೇತೃತ್ವದ ಎಡಪಕ್ಷಗಳನ್ನೊಳಗೊಂಡ ಮೈತ್ರಿಗೆ ವೇದಿಕೆ ಸಿದ್ಧವಾದರೆ ಎಸ್ ಡಿಪಿಐ ಕೂಡ ಅದರಲ್ಲಿ ಭಾಗವಹಿಸಿ ಪೂರ್ಣ ಸಹಕಾರ ನೀಡಲಿದೆ. ದೇಶದಲ್ಲಿ ಬಿಜೆಪಿಯನ್ನು ಸೋಲಿಸಲು ನಡೆಯುವ ಎಲ್ಲಾ ಪ್ರಯತ್ನಕ್ಕೆ ನಮ್ಮ ಬೆಂಬಲವಿದೆ.
ಇಲ್ಲಿ ಕಾಂಗ್ರೆಸ್, ಎಡಪಕ್ಷಗಳ ಪ್ರಶ್ನೆ ಉದ್ಭವಿಸುವುದಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಮಹಾಮೈತ್ರಿ ಅಥವಾ ತೃತೀಯ ರಂಗದೊಂದಿಗೂ ಕೈ ಜೋಡಿಸಲು ಪಕ್ಷ ಸಿದ್ಧವಿದೆ ಎಂದು ಫೈಝಿ ಸ್ಪಷ್ಟಪಡಿಸಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications