ಕಾಸರಗೋಡು: ಪೊದೆಯೊಂದರಲ್ಲಿ ಮಾರಕಾಸ್ತ್ರಗಳು ಪತ್ತೆ!
ಕಾಸರಗೋಡು/ಮಂಗಳೂರು, ಮಾರ್ಚ್ 27 : ದುಷ್ಕ್ರತ್ಯ ಎಸಗಲು ಅಪಾರ ಪ್ರಮಾಣ ಮಾರಕಾಸ್ತ್ರಗಳನ್ನು ಸಂಗ್ರಹಿಸಿಟ್ಟಿರುವುದು ಕಾಸರಗೂಡು ಹೊರವಲಯದ ಪೊದೆಯೊಂದರಲ್ಲಿ ಪತ್ತೆಯಾಗಿವೆ.
ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ತಲವಾರು, ಮಚ್ಚು, ಕಬ್ಬಿಣದ ರಾಡ್, ದೊಣ್ಣೆಗಳು, ಮರದ ತುಂಡು, ಬಿಯರ್ ಬಾಟಲ್ ಗಳು, ಪಾತ್ರೆಗಳು ಸೇರಿದಂತೆ ಮತ್ತಿತರ ಸೊತ್ತುಗಳು ಪತ್ತೆಯಾಗಿವೆ.

ಮಾರಕಾಸ್ತ್ರಗಳು ಬಿದ್ದಿರುವುದು ಕಂಬಾರ್ ಪೆರಿಯಡ್ಕದ ನಿವಾಸಿಯೊಬ್ಬರಿಗೆ ಸೇರಿದ ಜಾಗ ಎಂದು ಹೇಳಲಾಗುತ್ತಿದೆ. ಗಲಭೆ ಸೃಷ್ಟಿಸುವ ಸಂಚಿನ ಹಿನ್ನೆಲೆಯಲ್ಲಿ ಇಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಮಾರಕಾಸ್ತ್ರಗಳನ್ನು ಸಂಗ್ರಹಿಸಿಡಲಾಗಿತ್ತು ಎಂದು ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ.
ಅಲ್ಲದೆ, ಇಲ್ಲಿಗೆ ಆಗಮಿಸಿದ್ದ ತಂಡ ಒಂದು ರಾತ್ರಿ ಇಲ್ಲಿಯೇ ತಂಗಿದ್ದು, ಮುಂದಿನ ದಿನಗಳಲ್ಲಿ ವ್ಯಾಪಕವಾಗಿ ಗಲಭೆ ಸೃಷ್ಟಿಸುವ ಹುನ್ನಾರ ನಡೆಸಿತ್ತು ಎನ್ನುವುದನ್ನು ಪೊಲೀಸರು ಖಚಿತಪಡಿಸಿದ್ದಾರೆ.
ಈ ಹಿಂದೆ ಕಾಸರಗೋಡಿನ ಸುತ್ತಮುತ್ತ ಗಲಭೆ ನಡೆಸಲು ಸಂಚು ನಡೆದಿದೆ ಎಂದು ಗುಪ್ತಚರ ಇಲಾಖೆ ಖಚಿತಪಡಿಸಿದ ಬೆನ್ನಲ್ಲೇ ಇಷ್ಟೊಂದು ಪ್ರಮಾಣದಲ್ಲಿ ಮಾರಕಾಸ್ತ್ರಗಳು ಕೂಡಾ ಸಿಗುತ್ತಿರುವುದು ಸಂಶಯಕ್ಕೆ ಕಾರಣವಾಗಿದೆ.
ಕಾಸರಗೋಡು ನಗರ ಠಾಣಾ ಸರ್ಕಲ್ ಇನ್ಸ್ ಪೆಕ್ಟರ್ ಅಬ್ದುಲ್ ರಹೀಮ್ ನೇತೃತ್ವದ ಪೊಲೀಸ್ ತಂಡ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದು, ತನಿಖೆ ತೀವ್ರಗೊಳಿಸಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications