ಕುಕ್ಕೆಯಲ್ಲಿ ಮಡೆಸ್ನಾನ, ಮಂಗಳೂರಲ್ಲಿ ಪ್ರತಿಭಟನೆ
ಮಂಗಳೂರು, ನ.25 : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೆಯಾದ ಚಂಪಾಷಷ್ಠಿ ಪ್ರಯುಕ್ತ ನಡೆಯುವ ಮಡೆಸ್ನಾನ ಹರಕೆ ಸೇವೆಯು ನ.25ರಿಂದ 27ರವರೆಗೆ ನಡೆಯಲಿದೆ. ಮಡೆಸ್ನಾನ ವಿರುದ್ಧ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ಜನಜಾಗೃತಿ ಹಾಗೂ ಧರಣಿ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಸುಬ್ರಮಣ್ಯದಲ್ಲಿ ನಡೆಯುವ ನಿರ್ದಿಷ್ಟ ಸಮುದಾಯದ ಜನ ಉಂಡುಬಿಟ್ಟ ಎಂಜಲೆಲೆಯ ಮೇಲೆ ಭಕ್ತಾದಿಗಳು ನಡೆಸುವ ಉರುಳು ಸೇವೆ (ಮಡೆ-ಮಡೆಸ್ನಾನ) ಪದ್ಧತಿಯನ್ನು ನಿಲ್ಲಿಸಬೇಕೆಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿತ್ತು. ಆದರೆ, ಹೈಕೋರ್ಟ್ ವಿಭಾಗೀಯ ಪೀಠ ಮಡೆ-ಮಡೆಸ್ನಾನಕ್ಕೆ ಇರುವ ತಡೆಯನ್ನು ಕಳೆದವಾರ ತೆರವುಗೊಳಿಸಿತ್ತು.

ಆದ್ದರಿಂದ ನ.25ರ ಮಂಗಳವಾರದಿಂದ ನ.27ರವರೆಗೆ ಮಡೆಸ್ನಾನ ನಡೆಯಲಿದೆ. ಈ ನಡುವೆ ಕುಮಾರಧಾರಾ ತಟದಿಂದ ದೇವಳವರೆಗೂ ನಡೆಯುವ ಬೀದಿ ಮಡೆಸ್ನಾನ ಶನಿವಾರದಿಂದ ಆರಂಭವಾಗಿದ್ದು, ಗುರುವಾರ ಬೆಳಗಿನವರೆಗೆ ನಡೆಯಲಿದೆ.[ಮಡೆಸ್ನಾನಕ್ಕೆ ಹೈಕೋರ್ಟಿನಿಂದ ಗ್ರೀನ್ ಸಿಗ್ನಲ್]
ಇಂದು ಧರಣಿ : ಮಡೆಸ್ನಾನವನ್ನು ಮುಂದುವರಿಸುವಂತೆ ಹೈಕೋರ್ಟ್ ನೀಡಿದ ಆದೇಶವನ್ನು ಖಂಡಿಸಿ, ಮಂಗಳವಾರ ಕರ್ನಾಟಕ ರಾಜ್ಯ ಹಿಂದುಳಿದ ವರ್ಗ ಜಾಗೃತಿ ವೇದಿಕೆ ಪ್ರತಿಭಟನೆ ನಡೆಸಲಿದೆ. ಪ್ರತಿಭಟನೆಯ ಬಗ್ಗೆ ವೇದಿಕೆಯ ಅಧ್ಯಕ್ಷ ಕೆ.ಎಸ್ .ಶಿವರಾಮು ಅವರು ಮಾಹಿತಿ ನೀಡಿದ್ದು, ಈ ಅಮಾನವೀಯ ಮತ್ತು ವಿಚಾರಹೀನ ಪದ್ಧತಿಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಮಡೆಸ್ನಾನ ಪದ್ಧತಿ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಮಡೆಸ್ನಾನದ ಆಚರಣೆ ವಿಚಾರವಾಗಿ ಹಲವಾರು ಗೊಂದಲಗಳು ಏರ್ಪಟ್ಟಿತ್ತು. ಸದ್ಯ, ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಿರುವುದರಿಂದ ಮಡೆಸ್ನಾನಕ್ಕೆ ಇದ್ದ ಅಡ್ಡಿ ನಿವಾರಣೆ ಆದಂತಾಗಿದೆ. [ಮಡೆಸ್ನಾನದಲ್ಲಿ ಬ್ರಾಹ್ಮಣರು ಕೂಡಾ ಇದ್ರು ಕಣ್ರೀ]
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications