ಕಾಸರಗೋಡಿನಲ್ಲಿ ಮದ್ರಸಾ ಶಿಕ್ಷಕನ ಹತ್ಯೆ: ಇಂದು ಹರತಾಳ
ಮದ್ರಾಸಾದ ಶಿಕ್ಷಕನೊಬ್ಬನನ್ನು ಅಪರಿಚಿತ ತಂಡವೊಂದು ಕೊಲೆ ಮಾಡಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಮಂಗಳೂರು / ಕಾಸರಗೋಡು, ಮಾರ್ಚ್ 21: ಮದ್ರಸಾ ಅಧ್ಯಾಪಕನೋರ್ವನನ್ನು ತಂಡವೊಂದು ಅಧ್ಯಾಪಕರ ಕೋಣೆಗೆ ನುಗ್ಗಿ ಇರಿದು ಕೊಲೆಗೈದ ಘಟನೆ ಸೋಮವಾರ ಮಧ್ಯರಾತ್ರಿ ಕಾಸರಗೋಡಿನಲ್ಲಿ ನಡೆದಿದೆ. ಕೊಡಗು ಮೂಲದ ನಿವಾಸಿ ರಿಯಾಝ್ (30) ಕೊಲೆಗೀಡಾದ ಮದ್ರಸಾ ಅಧ್ಯಾಪಕ.
ಮಸೀದಿ ಸಮೀಪವೇ ಉಸ್ತಾದರಿಗೆ 2 ಕೊಠಡಿಗಳಿದ್ದು ಒಂದು ಕೊಠಡಿಯಲ್ಲಿ ರಿಯಾಝ್ ಉಸ್ತಾದ್ ಹಾಗೂ ಇನ್ನೊಂದು ಕೊಠಡಿಯಲ್ಲಿ ಮಸೀದಿ ಖತೀಬ್ ಆಬ್ದುಲ್ ಅಝೀಝ್ ಮುಸ್ಲಿಯಾರ್ ಮಲಗಿದ್ದರು.[ಮಂಗಳೂರು: ಮಸೀದಿಗೆ ಕಲ್ಲು ತೂರಿದ ಕಿಡಿಗೇಡಿ ಸಿಕ್ಕಿಬಿದ್ದ!]
ಮಧ್ಯರಾತ್ರಿ ಶಬ್ದ ಕೇಳಿ ಖತೀಬ್ ಉಸ್ತಾದ್ ಕೊಠಡಿ ಬಾಗಿಲು ತೆರೆಯುವಷ್ಟರಲ್ಲಿ ಯದ್ವಾತದ್ವ ಕಲ್ಲು ತೂರಾಟ ನಡೆಯುತ್ತಿತ್ತೆನ್ನಲಾಗಿದೆ. ಮೈಕ್ ಮೂಲಕ ರಿಯಾಝ್ ಉಸ್ತಾದ್ ಮೇಲೆ ಇರಿತ ನಡೆದಿದೆಯೆಂದು ಖತೀಬ್ ಉಸ್ತಾದ್ ಹೇಳಿಕೆ ನೀಡಿದರು.[ಮಂಗಳೂರು: ಸಿಡಿಮದ್ದು ತಯಾರಿ ವೇಳೆ ಸ್ಫೋಟ, ಇಬ್ಬರು ಸಾವು]

ಚೀರಾಟ ಕೇಳಿದ ಸ್ಥಳೀಯರು ಓಡಿಬಂದು, ರಕ್ತದ ಮುಡುವಿನಲ್ಲಿದ್ದ ರಿಯಾಝ್ ಉಸ್ತಾದರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಡಿವೈಎಸ್ಪಿ ವಿ.ಸುಕುಮಾರನ್ , ಸರ್ಕಲ್ ಇನ್ ಸ್ಪೆಕ್ಟರ್ ಅಬ್ದುಲ್ ರಹಮಾನ್, ಉತ್ತರ ವಲಯ ಎಡಿ ಜಿಪಿ ರಾಜೇಶ್ ದಿವಾನ್ , ಐಜಿ ಮಹಿಪಾಲ್ ಯಾದವ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.[ಯೋಗಿ ಆದಿತ್ಯನಾಥ್ ಗೂ ಮಂಗಳೂರಿನ ಕದ್ರಿಗೂ ಏನಿದು ನಂಟು?]
ಕೊಲೆಯನ್ನು ಖಂಡಿಸಿ ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಇಂದು (ಮಾರ್ಚ್ 21)ಬೆಳಿಗ್ಗೆ ಆರರಿಂದ ಸಂಜೆ ಆರರ ತನಕ ಮುಸ್ಲಿಂ ಲೀಗ್ ಹರತಾಳಕ್ಕೆ ಕರೆ ನೀಡಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications