ಮಂಗಳೂರು ಕಾವ್ಯಾ ಆತ್ಮಹತ್ಯೆ ಪ್ರಕರಣ: ಸಿಸಿಟಿವಿ ಫುಟೇಜ್ ನಲ್ಲೇನಿದೆ?
ಮಂಗಳೂರು, ಆಗಸ್ಟ್ 9: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಸಾವಿನ ಸುತ್ತ ಹುಟ್ಟಿಕೊಂಡಿರುವ ಸಂಶಯದ ಸಂಶಯ ನಿವಾರಿಸುವ ಕೆಲವೊಂದು ಸಿಸಿಟಿವಿ ವಿಡಿಯೋಗಳು 'ಒನ್ ಇಂಡಿಯಾ'ಕ್ಕೆ ಲಭ್ಯವಾಗಿದೆ .
ಜುಲೈ 20 ರಂದು ಮೂಡಬಿದರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕಾವ್ಯ ಸಂಶಯಾಸ್ಪದ ಸಾವಿನ ಸುತ್ತ ಇದ್ದ ಅನುಮಾನದ ಹುತ್ತ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದಂತೆ ಇದೀಗ ಕಾಲೇಜಿನ ಅಡಳಿತ ಮಂಡಳಿ ಕೆಲವೊಂದು ಸಿಸಿಟಿವಿ ಫುಟೇಜ್ ಗಳನ್ನು ಬಿಡುಗಡೆ ಮಾಡಿದೆ.

ಕಾವ್ಯ ಸಾವಿನ ಕುರಿತಂತೆ ಸಾಕಷ್ಟು ಅನುಮಾನಗಳನ್ನು ಕಾವ್ಯ ಪೋಷಕರು ವ್ಯಕ್ತಪಡಿಸಿದ್ದರು ಮತ್ತು ಇದೊಂದು ವ್ಯವಸ್ಥಿತ ಕೊಲೆ ಆರೋಪಿಸಿದ್ದರು. ಇದು ಮಾದ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳು ಸೇರಿದಂತೆ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು.
ಇದೀಗ ಕಾವ್ಯಳ ಸಂಶಯಾಸ್ಪದ ಸಾವಿನ ಬಳಿಕ ಆಳ್ವಾಸ್ ವಿದ್ಯಾಸಂಸ್ಥೆ ಮತ್ತು ಆಸ್ಪತ್ರೆಯಲ್ಲಿ ನಡೆದ ವಿದ್ಯಮಾನಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಇದನ್ನು ಇಂದು ಬಿಡುಗಡೆ ಮಾಡಲಾಗಿದೆ.

ಸಿಸಿಟಿವಿ ವಿಡಿಯೋ 1 : ಸಂಜೆ 07: 27 ಕಾವ್ಯಳನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ದೃಶ್ಯ ಕಂಡು ಬಂದಿದೆ.
ಸಿಸಿಟಿವಿ ವಿಡಿಯೋ 2 : ಸಂಜೆ 07: 44 ಕಾವ್ಯಳ ದೇಹವನ್ನು ಆಸ್ಪತ್ರೆ ಒಳಗೆ ಸಾಗಿಸುತ್ತಿರುವ ದೃಶ್ಯ ಸೆರೆಯಾಗಿದೆ.
ಸಿಸಿಟಿವಿ ವಿಡಿಯೋ 3 : 07 .45 ಕ್ಕೆ ಆಸ್ಪತ್ರೆ ಒಳಗೆ ಕಾವ್ಯಳಿಗೆ ತುರ್ತು ಚಿಕಿತ್ಸೆ ನೀಡುವುದು.
ಸಿಸಿಟಿವಿ ವಿಡಿಯೋ 4 : ರಾತ್ರಿ 08.46 ಕ್ಕೆ ಕಾವ್ಯ ಹೆತ್ತವರು ಆಸ್ಪತ್ರೆಯ ಹೊರಭಾಗದಲ್ಲಿ ರೋದಿಸುತ್ತಿರುವುದು ದಾಖಲಾಗಿದೆ.
ಸಿಸಿಟಿವಿ ವಿಡಿಯೋ 5 : 08.06 ರಲ್ಲಿ ಕಾವ್ಯಾ ಮೃತ ದೇಹವನ್ನು ಶವಾಗಾರಕ್ಕೆ ಸಾಗಿಸುವುದು ಸೆರೆಯಾಗಿದೆ.
ಇಂದು (ಆಗಸ್ಟ್ 9) ಕಾವ್ಯಾ ಪರ ನ್ಯಾಯಕ್ಕೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳು ಮಂಗಳೂರಿನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿರುವಾಗಲೇ ಈ ವಿಡಿಯೋ ದೃಶ್ಯವಳಿಗಳು ಬಿಡುಗಡೆಗೊಂಡಿರುವುದು ಕೂತೂಹಲಕ್ಕೆ ಕಾರಣವಾಗಿದೆ.
ಕಾವ್ಯ ಸಾವು ಪ್ರಕರಣವನ್ನು ಪೋಲಿಸ್ ಇಲಾಖೆ ವಿಶೇಷ ತನಿಖಾ ತಂಡ ರಚಿಸಿ ತನಿಖೆ ಮಾಡುತ್ತಿದ್ದಾರೆ.ಈ ತನಿಖೆಯ ಬಳಿಕವೇ ನಿಜಾಂಶ ಬಯಲಿಗೆ ಬರಲಿದೆ. ಈ ಪ್ರಕರಣದಲ್ಲಿ ಕಾವ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಯೇ? ಅಥವಾ ಇದು ಕೊಲೆ ಯೇ? ಆತ್ಮಹತ್ಯೆಗೆ ಕಾರಣವೇನು? ಈ ಎಲ್ಲಾ ಪ್ರಶ್ನೆಗಳಿಗೆ ತನಿಖೆಯ ಬಳಿಕವೇ ಉತ್ತರ ದೊರಕಲಿದೆ .
-
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ -
Jowar Price: ಕರ್ನಾಟಕದ ಮಾರುಕಟ್ಟೆಗಳಲ್ಲಿ ಜೋಳದ ದರ ಏರಿಳಿತ; ಇಲ್ಲಿದೆ ಜಿಲ್ಲಾವಾರು ಬೆಲೆ ಪಟ್ಟಿ -
Karnataka Rain: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ: ಐಎಂಡಿ ವರದಿ -
Zomato: ಬೆಂಗಳೂರು Vs ಚೆನ್ನೈ ಸಾಂಬಾರ್ ಎಂದ ಝೊಮ್ಯಾಟೊ; ನಮಗೆ ಸ್ವಿಗ್ಗಿ ಸಾಕು ಎಂದ ನೆಟ್ಟಿಗರು -
ವಾರ ಭವಿಷ್ಯ: ಈ ರಾಶಿಯ ಪ್ರೇಮಿಗಳು ಮತ್ತೆ ಒಂದಾಗುತ್ತಾರೆ! ಸೂರ್ಯನಿಗೆ ಅರ್ಘ್ಯದಿಂದ ಭಾಗ್ಯ ಬದಲಾವಣೆ -
SSLC ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡಿಂಗ್: ಸರ್ಕಾರದ ದಿಢೀರ್ ನಿರ್ಧಾರಕ್ಕೆ ಖಾಸಗಿ ಶಾಲೆಗಳ ತೀವ್ರ ವಿರೋಧ -
ರಾಜ್ಯದಲ್ಲಿ ತೃತೀಯ ಭಾಷೆ 'ಆಟಕ್ಕುಂಟು ಲೆಕ್ಕಕ್ಕಿಲ್ಲ', ಆದರೆ ಕೇಂದ್ರದಿಂದ ಕಡ್ಡಾಯದ ಹೊಸ ಆದೇಶ : ರಾಜೀವ ಹೆಗಡೆ ಬರಹ -
RCB Vs CSK ಮ್ಯಾಚ್ ನೋಡಲು ಬರೋಬ್ಬರಿ 1.46 ಲಕ್ಷ ಕಳೆದುಕೊಂಡ ಕಳೆದುಕೊಂಡ ಟೆಕ್ಕಿ, ಐಪಿಎಲ್ ಅಭಿಮಾನಿಗಳೇ ಹುಷಾರ್ -
April 6 Horoscope: ಈ ರಾಶಿಗಳಿಗೆ ಲಾಭ, ಕೆಲವರಿಗೆ ಎಚ್ಚರಿಕೆ ಸೂಚನೆ -
ಏಪ್ರಿಲ್ 8ಕ್ಕೆ ದ್ವಿತೀಯ PUC ಫಲಿತಾಂಶ? ಶಿಕ್ಷಣ ಇಲಾಖೆಯ ಮಹತ್ವದ ಅಪ್ಡೇಟ್ ಇಲ್ಲಿದೆ












Click it and Unblock the Notifications