ಮಂಗಳೂರು ಕಾವ್ಯಾ ಆತ್ಮಹತ್ಯೆ ಪ್ರಕರಣ: ಸಿಸಿಟಿವಿ ಫುಟೇಜ್ ನಲ್ಲೇನಿದೆ?
ಮಂಗಳೂರು, ಆಗಸ್ಟ್ 9: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಸಾವಿನ ಸುತ್ತ ಹುಟ್ಟಿಕೊಂಡಿರುವ ಸಂಶಯದ ಸಂಶಯ ನಿವಾರಿಸುವ ಕೆಲವೊಂದು ಸಿಸಿಟಿವಿ ವಿಡಿಯೋಗಳು 'ಒನ್ ಇಂಡಿಯಾ'ಕ್ಕೆ ಲಭ್ಯವಾಗಿದೆ .
ಜುಲೈ 20 ರಂದು ಮೂಡಬಿದರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕಾವ್ಯ ಸಂಶಯಾಸ್ಪದ ಸಾವಿನ ಸುತ್ತ ಇದ್ದ ಅನುಮಾನದ ಹುತ್ತ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದಂತೆ ಇದೀಗ ಕಾಲೇಜಿನ ಅಡಳಿತ ಮಂಡಳಿ ಕೆಲವೊಂದು ಸಿಸಿಟಿವಿ ಫುಟೇಜ್ ಗಳನ್ನು ಬಿಡುಗಡೆ ಮಾಡಿದೆ.

ಕಾವ್ಯ ಸಾವಿನ ಕುರಿತಂತೆ ಸಾಕಷ್ಟು ಅನುಮಾನಗಳನ್ನು ಕಾವ್ಯ ಪೋಷಕರು ವ್ಯಕ್ತಪಡಿಸಿದ್ದರು ಮತ್ತು ಇದೊಂದು ವ್ಯವಸ್ಥಿತ ಕೊಲೆ ಆರೋಪಿಸಿದ್ದರು. ಇದು ಮಾದ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳು ಸೇರಿದಂತೆ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು.
ಇದೀಗ ಕಾವ್ಯಳ ಸಂಶಯಾಸ್ಪದ ಸಾವಿನ ಬಳಿಕ ಆಳ್ವಾಸ್ ವಿದ್ಯಾಸಂಸ್ಥೆ ಮತ್ತು ಆಸ್ಪತ್ರೆಯಲ್ಲಿ ನಡೆದ ವಿದ್ಯಮಾನಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಇದನ್ನು ಇಂದು ಬಿಡುಗಡೆ ಮಾಡಲಾಗಿದೆ.

ಸಿಸಿಟಿವಿ ವಿಡಿಯೋ 1 : ಸಂಜೆ 07: 27 ಕಾವ್ಯಳನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ದೃಶ್ಯ ಕಂಡು ಬಂದಿದೆ.
ಸಿಸಿಟಿವಿ ವಿಡಿಯೋ 2 : ಸಂಜೆ 07: 44 ಕಾವ್ಯಳ ದೇಹವನ್ನು ಆಸ್ಪತ್ರೆ ಒಳಗೆ ಸಾಗಿಸುತ್ತಿರುವ ದೃಶ್ಯ ಸೆರೆಯಾಗಿದೆ.
ಸಿಸಿಟಿವಿ ವಿಡಿಯೋ 3 : 07 .45 ಕ್ಕೆ ಆಸ್ಪತ್ರೆ ಒಳಗೆ ಕಾವ್ಯಳಿಗೆ ತುರ್ತು ಚಿಕಿತ್ಸೆ ನೀಡುವುದು.
ಸಿಸಿಟಿವಿ ವಿಡಿಯೋ 4 : ರಾತ್ರಿ 08.46 ಕ್ಕೆ ಕಾವ್ಯ ಹೆತ್ತವರು ಆಸ್ಪತ್ರೆಯ ಹೊರಭಾಗದಲ್ಲಿ ರೋದಿಸುತ್ತಿರುವುದು ದಾಖಲಾಗಿದೆ.
ಸಿಸಿಟಿವಿ ವಿಡಿಯೋ 5 : 08.06 ರಲ್ಲಿ ಕಾವ್ಯಾ ಮೃತ ದೇಹವನ್ನು ಶವಾಗಾರಕ್ಕೆ ಸಾಗಿಸುವುದು ಸೆರೆಯಾಗಿದೆ.
ಇಂದು (ಆಗಸ್ಟ್ 9) ಕಾವ್ಯಾ ಪರ ನ್ಯಾಯಕ್ಕೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳು ಮಂಗಳೂರಿನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿರುವಾಗಲೇ ಈ ವಿಡಿಯೋ ದೃಶ್ಯವಳಿಗಳು ಬಿಡುಗಡೆಗೊಂಡಿರುವುದು ಕೂತೂಹಲಕ್ಕೆ ಕಾರಣವಾಗಿದೆ.
ಕಾವ್ಯ ಸಾವು ಪ್ರಕರಣವನ್ನು ಪೋಲಿಸ್ ಇಲಾಖೆ ವಿಶೇಷ ತನಿಖಾ ತಂಡ ರಚಿಸಿ ತನಿಖೆ ಮಾಡುತ್ತಿದ್ದಾರೆ.ಈ ತನಿಖೆಯ ಬಳಿಕವೇ ನಿಜಾಂಶ ಬಯಲಿಗೆ ಬರಲಿದೆ. ಈ ಪ್ರಕರಣದಲ್ಲಿ ಕಾವ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಯೇ? ಅಥವಾ ಇದು ಕೊಲೆ ಯೇ? ಆತ್ಮಹತ್ಯೆಗೆ ಕಾರಣವೇನು? ಈ ಎಲ್ಲಾ ಪ್ರಶ್ನೆಗಳಿಗೆ ತನಿಖೆಯ ಬಳಿಕವೇ ಉತ್ತರ ದೊರಕಲಿದೆ .
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications