ಪ್ರಧಾನಿ ಮೋದಿ ಆಯಸ್ಸು ವೃದ್ಧಿಗಾಗಿ 200ಕ್ಕೂ ಅಧಿಕ ಪುರೋಹಿತರಿಂದ ಮೃತ್ಯುಂಜಯ ಯಾಗ
ಮಂಗಳೂರು, ಜ.17: ಪ್ರಧಾನಿ ನರೇಂದ್ರ ಮೋದಿಯ ದೀರ್ಘಾಯಸ್ಸುಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ದಲ್ಲಿ ನಡೆಯುತ್ತಿದ್ದ ಮಹಾ ಮೃತ್ಯುಂಜಯ ಯಾಗ ಸಂಪನ್ನಗೊಂಡಿದೆ.
ಶ್ರೀಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಯಾಗ ನಡೆದಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ, ಸಚಿವರಾದ ಕೆ.ಎಸ್ ಈಶ್ವರಪ್ಪ, ಸಿ.ಸಿ. ಪಾಟೀಲ, ಶಶಿಕಲಾ ಜೊಲ್ಲೆ ಆದಿಯಾಗಿ ನೂರಾರು ಮಂದಿ ಈ ಯಾಗದ ಪೂರ್ಣಾಹುತಿಯಲ್ಲಿ ಭಾಗಿಯಾಗಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದ ಏಳು ಹೋಮಕುಂಡಗಳಲ್ಲಿ ಯಾಗ ನಡೆದಿದ್ದು, ಏಳು ಕುಂಡಗಳಲ್ಲೂ ಪ್ರಧಾನ ಅರ್ಚಕರು ಮತ್ತು ಸಹಾಯಕ ಅರ್ಚಕರಿಂದ ಮಂತ್ರಘೋಷ, ವಿವಿಧ ದ್ರವ್ಯಗಳ ಅರ್ಪಣೆ ಯಾಗಕುಂಡಕ್ಕೆ ಹಾಕಲಾಗಿದೆ. ಈ ಯಾಗದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 140ಕ್ಕೂ ಹೆಚ್ಚು ಅರ್ಚಕರು ಭಾಗಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ ಯಾಗದ ಪೂರ್ಣಾಹುತಿ ಮಾಡಲಾಗಿದೆ.

ಯಾಗದ ಪೂಜೆಯಲ್ಲಿ ಶಾಸಕ ಹರೀಶ್ ಪೂಂಜಾ ದಂಪತಿ ಸೇವಾ ಕರ್ತರಾಗಿ ಭಾಗವಹಿಸಿದ್ದಾರೆ. ವೇದಮೂರ್ತಿ ನಾಗೇಂದ್ರ ಭಾರದ್ವಜ್ ನೇತೃತ್ವದಲ್ಲಿ ಯಾಗ ನಡೆದಿದೆ. ಈ ಮಹಾಯಾಗಕ್ಕೂ ಮುನ್ನ ಬೆಳ್ತಂಗಡಿ ತಾಲೂಕಿನ 25 ಶಿವ ದೇವಸ್ಥಾನಗಳಲ್ಲಿ ಮೃತ್ಯುಂಜಯ ಹೋಮ ನಡೆದಿತ್ತು. ಅಂತಿಮವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ದಲ್ಲಿ ಮಹಾಮೃತ್ಯುಂಜಯ ಹೋಮದ ಪೂರ್ಣಾಹುತಿ ನಡೆದಿದೆ.
ಇದಕ್ಕೂ ಮುನ್ನ ಆದಿತ್ಯವಾರ ಸಂಜೆ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದ ಸನ್ನಿಧಾನದ ಮುಂಭಾಗ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಗಿತ್ತು. ಪುರೋಹಿತರ ಸಮ್ಮುಖದಲ್ಲಿ ಮಂಜುನಾಥ ಸ್ವಾಮಿಯ ಆಲಯದಲ್ಲಿ ವಿಶೇಷ ಪೂಜೆಯ ಬಳಿಕ ಸ್ವಾಮಿಯ ಉತ್ಸವ ಮೂರ್ತಿಯನ್ನು ವೈಭಯುತವಾಗಿ ಯಾಗ ಮಂಟಪಕ್ಕೆ ಕರೆತರಲಾಗಿದೆ.

ಸೋಮವಾರ ಮಹಾಮೃತ್ಯುಂಜಯ ಹೋಮದ ಪ್ರಧಾನ ಹೋಮ ನಡೆದಿದೆ. ಬೆಳಗ್ಗೆ 9 ಗಂಟೆಗೆ ಅಮೃತವರ್ಷಿಣಿ ಸಭಾಭವನದಲ್ಲಿ ಪ್ರಧಾನ ಹೋಮ ಆರಂಭವಾಗಿ, 10.30ರ ವೇಳೆಗೆ ಮೃತ್ಯುಂಜಯ ಹೋಮ ಕುಂಡ ಹೊರತುಪಡಿಸಿ ಉಳಿದ ಆರು ಹೋಮ ಕುಂಡಗಳಲ್ಲಿ ಹೋಮ ಪೂರ್ಣಾಹುತಿ ಮಾಡಿ ಮಂಗಳಾರತಿ ಮಾಡಲಾಗಿದೆ. ಆನಂತರ ಆರು ಕುಂಡಗಳ ಅಗ್ನಿಯನ್ನು ಮೃತ್ಯುಂಜಯ ಹೋಮದ ಪ್ರಧಾನ ಕುಂಡಕ್ಕೆ ಅರ್ಪಿಸಲಾಗಿದೆ. ಆ ಬಳಿಕ ಪ್ರಧಾನ ಕುಂಡದಲ್ಲಿ ಕಲ್ಪೋಕ್ತ ಪೂಜೆ ಆರಂಭವಾಗಿದ್ದು, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ನಡೆದಿದೆ.
ಯಾಗದ ಪೌರೋಹಿತ್ಯಕ್ಕೆ ರಾಜ್ಯದ ನಾನಾ ಮೂಲೆಗಳಿಂದ ಪುರೋಹಿತರು ಆಗಮಿಸಿದ್ದರು. ಶೃಂಗೇರಿ, ಉಡುಪಿ,ಬೆಂಗಳೂರು, ಮೈಸೂರು,ಕಾಸರಗೋಡು ಭಾಗದಿಂದ ಒಟ್ಟು 200ಕ್ಕೂ ಅಧಿಕ ಪುರೋಹಿತರು ಆಗಮಿಸಿದ್ದಾರೆ.

Recommended Video
ಇನ್ನು ಯಾಗದ ಬಗ್ಗೆ ಮಾತನಾಡಿದ ಯಾಗದ ಸೇವಾಕರ್ತ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ, 'ನಾನು ಪ್ರಧಾನಿ ನರೇಂದ್ರ ಮೋದಿಯವರ ಅಭಿಯಾಗಿದ್ದು, ಅವರ ತತ್ವ ಆದರ್ಶಗಳ ಆರಾಧಕನಾಗಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಜೀವಭಯವಿರುವ ಕಾರಣ ಪಕ್ಷದ ಸಂಕಲ್ಪದಂತೇ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಸಹಕಾರ ಮತ್ತು ಆಶೀರ್ವಾದದಿಂದ ಬೆಳ್ತಂಗಡಿ ತಾಲೂಕಿನ ಜನರ ಪರವಾಗಿ ಮೃತ್ಯುಂಜಯ ಹೋಮ ಮಾಡಿದ್ದೇವೆ' ಎಂದು ಹೇಳಿದರು.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications