ಜ.4ರಿಂದ ಮಂಗಳೂರಿನಲ್ಲಿ 'ಸಾದೃಶ್ಯಂ' ಚಿತ್ರಕಲಾ ಪ್ರದರ್ಶನ
ಮಂಗಳೂರು. ಜನವರಿ. 03: ಮಹಾಲಸಾ ಚಿತ್ರಕಲಾ ಶಾಲೆ ವಿದ್ಯಾರ್ಥಿಗಳಿಂದ 'ಸಾದೃಶ್ಯಂ' ಎಂಬ ಚಿತ್ರಕಲಾ ಪ್ರದರ್ಶನವನ್ನು ಬಲ್ಲಾಳ್ ಬಾಗ್ ನ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಜನವರಿ 4ರಿಂದ ಜ.8ರವರೆಗೆ ಆಯೋಜಿಸಲಾಗಿದೆ.
ಈ ಚಿತ್ರಕಲಾ ಪ್ರದರ್ಶನ ಪ್ರತಿದಿನ ಬೆಳಿಗ್ಗೆ 10ರಿಂದ ಸಂಜೆ 7ರವರೆಗೆ ನಡೆಯಲಿದ್ದು ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಮಹಾಲಸಾ ಚಿತ್ರಕಲಾ ಶಾಲೆ ಪ್ರಾಂಶುಪಾಲ ಪುರುಷೋತ್ತಮ್ ನಾಯಕ್ ತಿಳಿಸಿದ್ದಾರೆ.
ದ.ಕ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷೆ ಸರಸ್ವತಿ ಈ ಚಿತ್ರಕಲಾ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ಮಹಾಲಸಾ ಶಿಕ್ಷಣ ಸಮಿತಿ ನಿರ್ದೇಶಕ ಬಾಬುರಾವ್ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಕಲಾವಿದ ರಮೇಶ್ ರಾವ್ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ಈ ಕುರಿತು ಮಾತನಾಡಿದ ಚಿತ್ರಕಲಾ ವಿಭಾಗದ ಮುಖ್ಯಸ್ಥ ಎನ್. ಎಸ್. ಪತ್ತಾರ್, ಈಗಾಗಲೇ ಕಲಾ ವಿದ್ಯಾರ್ಥಿಗಳಲ್ಲಿ ಕಡಿಮೆಯಾಗುತ್ತಿರುವ ತೈಲವರ್ಣ ಮಾಧ್ಯಮದ ಬಳಕೆ ಉತ್ತೇಜಿಸುವ ದೃಷ್ಟಿಯಿಂದ ಶಾಲೆಯಲ್ಲಿ 'ಮರುಕೃತಿ ರಚನಾ ಶಿಬಿರ' ಆಯೋಜಿಸಲಾಗಿತ್ತು.
ಈ ಮರು ಕೃತಿಗಳನ್ನು ಇದೀಗ ಸಮೂಹ ಪ್ರದರ್ಶನ ಮಾಡಲಾಗುತ್ತಿದೆ. ಉಪನ್ಯಾಸಕ ಸಯ್ಯದ್ ಆಸಿಫ್ ಅಲಿ ಅವರ ಮಾರ್ಗದರ್ಶನದಲ್ಲಿ ಈ ಕಲಾಕೃತಿಗಳು ಮೂಡಿಬಂದಿವೆ. ಚಿತ್ರಕಲೆಗಳನ್ನು ವೀಕ್ಷಿಸಲು ಎಲ್ಲವೂ ನೈಜ್ಯ ಚಿತ್ರಣಗಳಂತೆ ಪ್ರತಿಬಿಂಬಿಸುತ್ತವೆ ಎಂದು ಅವರು ತಿಳಿಸಿದರು.
ಮರುಕೃತಿ ರಚನಾ ಶಿಬಿರದಲ್ಲಿ ಒಟ್ಟು 28 ತೈಲವರ್ಣ ಕಲಾಕೃತಿಗಳು ರಚನೆಗೊಂಡಿವೆ. ವಿದ್ಯಾರ್ಥಿಗಳಲ್ಲಿ ಕುಶಲತೆ ಹಾಗೂ ಏಕಾಗ್ರತೆ ಅಭಿವೃದ್ದಿ ಪಡಿಸುವ ಉದ್ದೇಶದಿಂದ ಈ ಕಲಾಕೃತಿಗಳನ್ನು ರಚಿಸಲಾಗಿದೆ. ಈ ಎಲ್ಲಾ ಕಲಾಕೃತಿಗಳು ಕ್ಯಾನ್ ವಾಸ್ ನ ಮೇಲೆ ರಚಿಸಿರುವುದೇ ವಿಶೇಷ ಎಂದು ಹೇಳಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications