ಮಂಗಳೂರಿನ ವಿವಿ ಕಾಲೇಜಿನಲ್ಲಿ ಮೆಹಂದಿ, ಕೇಶವಿನ್ಯಾಸದ ಸಂಭ್ರಮ!
ಮಂಗಳೂರು, ಫೆಬ್ರವರಿ 23 : ಯಾವತ್ತೂ ಪಾಠ-ಪ್ರವಚನ ಎಂದು ಗಂಭೀರವಾಗಿರುವ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಶನಿವಾರ ಮಾತ್ರ ವಿದ್ಯಾರ್ಥಿನಿಯರು ಮೆಹಂದಿ ಹಚ್ಚುವುದು, ಕೇಶವಿನ್ಯಾಸದಲ್ಲಿ ಬ್ಯುಸಿಯಾಗಿದ್ದರು.
ಈ ಸಂಭ್ರಮಕ್ಕೆ ಕಾರಣವಾದದ್ದು ಲಲಿತ ಕಲಾ ಸಂಘ ಕಾಲೇಜು ವಾರ್ಷಿಕೋತ್ಸವದ ಅಂಗವಾಗಿ ಏರ್ಪಡಿಸಿದ್ದ ಮೆಹಂದಿ ಹಚ್ಚುವ ಮತ್ತು ಕೇಶವಿನ್ಯಾಸ ಸ್ಪರ್ಧೆ. ನೂರಾರು ವಿದ್ಯಾರ್ಥಿನಿಯರು ಈ ಸ್ಪರ್ಧಿಯಲ್ಲಿ ಅತ್ಯಂತ ಲವಲವಿಕೆಯಿಂದ ಭಾಗವಹಿಸಿದರು.

ಎಲ್ಲಾ ಪದವಿ ವಿದ್ಯಾರ್ಥಿನಿಯರಿಗಾಗಿ ಏರ್ಪಡಿಸಲಾಗಿದ್ದ ಈ ಸ್ಪರ್ಧೆಗಳಲ್ಲಿ ಮೆಹಂದಿ ಹಚ್ಚುವ ಕಲೆಯಲ್ಲಿ 13 ಮಂದಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಿದರೆ, ಮೊದಲ ಬಾರಿಗೆ ಏರ್ಪಡಿಸಲಾಗಿದ್ದ ಕೇಶವಿನ್ಯಾಸ ಸ್ಪರ್ಧೆಯಲ್ಲಿ 11 ಮಂದಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ಉದಯ್ ಕುಮಾರ್ ಎಂ.ಎ, ಸ್ಪರ್ಧಾ ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಮೆಹಂದಿ ಹಚ್ಚುವ ಸ್ಪರ್ಧೆಗೆ ಹಿರಿಯ ಪ್ರಾಧ್ಯಾಪಕರಾದ ಡಾ. ಸುಭಾಷಿಣಿ ಶ್ರೀವತ್ಸ, ಪಿ. ರಾಜೇಶ್ವರಿ, ಡಾ. ಕೆ.ಎ. ನಾಗರತ್ನ, ಶಿಫಾಲಿ ಮೊದಲಾದವರು ತೀರ್ಪುಗಾರರಾಗಿ ಭಾಗವಹಿಸಿದ್ದರು. ಕೇಶವಿನ್ಯಾಸ ಸ್ಪರ್ಧೆಗೆ ಡಾ. ಎನ್.ಕೆ. ರಾಜಲಕ್ಷ್ಮೀ, ಡಾ.ಭಾರತಿ ಪ್ರಕಾಶ್, ಪರಿಣಿತಾ, ವನಜಾ ಮೊದಲಾದವರು ತೀರ್ಪುಗಾರರಾಗಿದ್ದರು.

ಸ್ಪರ್ಧೆಗಳ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಲಲಿತ ಕಲಾ ಸಂಘದ ನೇತೃತ್ವ ವಹಿಸಿರುವ ಡಾ. ಸುಮಾ ಟಿ.ಆರ್, ಹಿರಿಯ ಪ್ರಾಧ್ಯಾಪಕಿ ಡಾ. ಮೀನಾಕ್ಷಿ, ವಿದ್ಯಾರ್ಥಿ ಕಾರ್ಯದರ್ಶಿ ಮಯೂರೇಶ್, ಜೊತೆ ಕಾರ್ಯದರ್ಶಿ ಶ್ರೇಯಾ ಉಪಸ್ಥಿತರಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications