ಸರಣಿ ರಜೆ ಹಿನ್ನಲೆ, ಕರಾವಳಿಯ ಪುಣ್ಯ ಕ್ಷೇತ್ರಗಳಲ್ಲಿ ಭಕ್ತ ಸಾಗರ
ಮಂಗಳೂರು, ಅಕ್ಟೋಬರ್ 2: ಸರಣಿ ರಜೆ ಹಾಗೂ ಶಾಲಾ ಮಕ್ಕಳಿಗೆ ದಸರಾ ರಜೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರಮುಖ ಪುಣ್ಯ ಕ್ಷೇತ್ರಗಳಿಗೆ ಭಾರೀ ಪ್ರಮಾಣದಲ್ಲಿ ಭಕ್ತರು ಭೇಟಿ ನೀಡುತ್ತಿದ್ದಾರೆ.
ಕೊಲ್ಲೂರು ಶ್ರೀ ಮೂಕಾಂಬಿಕಾ ಸನ್ನಿಧಿ, ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀ ಕ್ಷೇತ್ರ ಕಟೀಲು, ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನಕ್ಕಾಗಿ ಭಕ್ತ ಸಾಗರವೇ ಹರಿದು ಬರುತ್ತಿದೆ.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ಕ್ಷೇತ್ರದ ಪ್ರಮುಖ ಸೇವೆಗಳಾದ ಆಶ್ಲೇಷ ಬಲಿ, ನಾಗ ಪ್ರತಿಷ್ಠೆ ಮತ್ತಿತರ ಸೇವೆಗಳು ಅಧಿಕವಾಗಿ ನೆರವೇರುತ್ತಿವೆ. ಭಕ್ತರಿಂದಾಗಿ ಕ್ಷೇತ್ರದಲ್ಲಿ ಜನದಟ್ಟಣೆಯೂ ಏರ್ಪಟ್ಟಿದೆ.
ದೇವಳದ ಒಳಾಂಗಣ, ಹೊರಾಂಗಣ, ರಥಬೀದಿ, ಸುಬ್ರಹ್ಮಣ್ಯ ಕುಮಾರಧಾರ ಸ್ನಾನ ಘಟ್ಟದಲ್ಲಿ ಭಾರೀ ಜನಸಂದಣಿ ಕಂಡು ಬಂದಿದೆ. ದೇವರ ದರ್ಶನ ಪಡೆಯಲು, ಅನ್ನ ಪ್ರಸಾದ ಸ್ವೀಕರಿಸಲು ಭಕ್ತರು ಮಾರುದ್ದ ಸರತಿ ಸಾಲಿನಲ್ಲಿ ನಿಂತಿದ್ದು ಕಂಡು ಬಂತು.
ಇಂದೂ ಗಾಂಧಿ ಜಯಂತಿ ಪ್ರಯುಕ್ತ ರಜೆ ಇರುವುದರಿಂದ ಮಂಗಳವಾರದವರೆಗೆ ತೀರ್ಥ ಕ್ಷೇತ್ರಗಳಲ್ಲಿ ಭಕ್ತರ ಸಂದಣಿ ಅಧಿಕವಾಗಿರುವ ಸಾಧ್ಯತೆ ಇದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications