ಭಾಗಶಃ ಚಂದ್ರಗ್ರಹಣ, ಕರಾವಳಿ ದೇವಾಲಯಗಳ ದರ್ಶನದಲ್ಲಿ ಬದಲಾವಣೆ

ಮಂಗಳೂರು, ಆಗಸ್ಟ್ 7: ಇಂದು ಭಾಗಶಃ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಕರಾವಳಿಯ ದೇವಾಲಯಗಳು ಅವಧಿಗೆ ಮುಂಚೆಯೇ ಬಾಗಿಲು ಹಾಕಲಿವೆ. ಕರಾವಳಿಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ, ಶ್ರೀ ಕ್ಷೇತ್ರ ಕಟೀಲು ಸೇರಿದಂತೆ ಕರಾವಳಿಯ ದೇವಾಲಯಗಳ ಅವಧಿಗೆ ಮುನ್ನವೇ ದೇವರ ದರ್ಶನ ಸ್ಥಗಿತಗೊಳಿಸಲಿವೆ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ಇಂದು ವಿಶೇಷ ಪೂಜೆ ನಡೆಸಲಾಯಿತು. ಇಲ್ಲಿ ಇಂದು ರಾತ್ರಿ 8.30ರ ಬದಲಾಗಿ 8 ಗಂಟೆಗೇ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ.

Major temples of Dakshina Kannada to close down early due to Lunar Eclipse

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ದೇವರ ದರ್ಶನ ಸಂಜೆ 6 ಗಂಟೆಗೆ ಸ್ಥಗಿತಗೊಳ್ಳಲಿದೆ. ಶ್ರೀ ಕ್ಷೇತ್ರ ಕಟೀಲು ದುರ್ಗಾ ಪರಮೇಶ್ವರಿ ದೇವಾಲಯದಲ್ಲಿಯೂ ಇಂದು ಅವಧಿಗೆ ಮುನ್ನವೇ ದೇವಾಲಯದ ಬಾಗಿಲು ಹಾಕಲಾಗುತ್ತದೆ.

ಇನ್ನು ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯದಲ್ಲಿಯೂ ಈಗಾಗಲೇ ವಿಶೇಷ ಪೂಜೆ ನೆರವೇರಿದ್ದು, ರಾತ್ರಿ 8 ಗಂಟೆಯ ಬದಲಾಗಿ ಇಂದು ಸಂಜೆ 5 ಗಂಟೆಗೇ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+