ಕನ್ನಡ ಶಾಲೆಗೆ ವರ್ಣಮಾಲೆ ಗೊತ್ತಿಲ್ಲದ ಮಲಯಾಳಿ ಶಿಕ್ಷಕಿ: ಸರ್ಕಾರದ ವಿರುದ್ಧ ಸಿಡಿದೆದ್ದ ಮಕ್ಕಳು
ಮಂಗಳೂರು, ಜೂನ್ 20: ಕೇರಳ ಸರ್ಕಾರ ಕನ್ನಡಕ್ಕೆ ಮತ್ತೆ ಮಲತಾಯಿ ಧೋರಣೆ ಬೀರಿದೆ. ಕನ್ನವೇ ಗೊತ್ತಿಲ್ಲದ ಮಲಯಾಳಿ ಶಿಕ್ಷಕಿ ಯನ್ನು ಕನ್ನಡ ಶಾಲೆಯ ಶಿಕ್ಷಕಿಯನ್ನಾಗಿ ಕೇರಳ ಸರ್ಕಾರ ನಿಯುಕ್ತಿ ಮಾಡಿದೆ. ನಟ ನಿರ್ದೇಶಕ ರಿಷಬ್ ಶೆಟ್ಟಿಯವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದಂತೆಯೇ ನೈಜ ಘಟನೆ ಕೇರಳ-ಕರ್ನಾಟಕದ ಗಡಿ ಜಿಲ್ಲೆ ಕಾಸರಗೋಡಿನಲ್ಲಿ ನಡೆದಿದೆ.
ಕಾಸರಗೋಡು ಜಿಲ್ಲೆಯ ಅಡೂರು ಸರ್ಕಾರಿ ಶಾಲೆಯ ಫ್ರೌಢ ತರಗತಿಗಳಿಗೆ ಶಿಕ್ಷಕಿಯಾಗಿ ಮಲಯಾಳಂ ಶಿಕ್ಷಕಿಯನ್ನು ನೇಮಕ ಮಾಡಲಾಗಿದೆ. ಕನ್ನಡ ಮತ್ತು ಮಲಯಾಳಂ ಮಾಧ್ಯಮಗಳು ಜೊತೆಯಾಗಿ ಇರುವ ಶಾಲೆ ಇದಾಗಿದ್ದು, ಪ್ರೌಢ ಶಾಲೆ ಕನ್ನಡ ಮಾಧ್ಯಮದ ಸಮಾಜ ವಿಜ್ಞಾನಕ್ಕೆ ತರಗತಿಗೆ ಹೊಸದಾಗಿ ಮಲಯಾಳಂ ಶಿಕ್ಷಕಿ ನಿಯುಕ್ತಿಗೊಂಡಿದ್ದಾರೆ.

ಕನ್ನಡದಲ್ಲೇ ಸಮಾಜ ವಿಜ್ಞಾನ ಪಾಠವನ್ನು ಕನ್ನಡ ವಿದ್ಯಾರ್ಥಿಗಳಿಗೆ ಹೇಳಬೇಕಾದ ಮಲಯಾಳಿ ಶಿಕ್ಷಕಿಗೆ ಕನ್ನಡದ ಅ.ಆ.ಇ.ಈ ಗೊತ್ತಿಲ್ಲ. ಕನ್ನಡವನ್ನು ಸರಿಯಾಗಿ ಉಚ್ಛರಿಸಲೂ ಬಾರದ ಶಿಕ್ಷಕಿ ನೇಮಕಗೊಂಡಿದ್ದಾರೆ ಎಂದು ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇರಳ ರಾಜ್ಯ ಸರಕಾರದ ಕ್ರಮ ಖಂಡಿಸಿ ಪೋಷಕರು ಮತ್ತು ವಿದ್ಯಾರ್ಥಿಗಳು ಶಾಲೆಯಲ್ಲಿ ಪ್ರತಿಭಟನೆ ಮಾಡಿದ್ದಾರೆ. ಹತ್ತನೇ ತರಗತಿಯಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಮಲಯಾಳಿ ಶಿಕ್ಷಕಿಯ ಪಾಠವೂ ಅರ್ಥವಾಗುತ್ತಿಲ್ಲ. ಇದರಿಂದ ಪರೀಕ್ಷೆ ಎದುರಿಸಲು ಕಷ್ಟವಾಗುತ್ತಿದೆ ಎಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
ಕೇರಳ ಸರ್ಕಾರದ ಕ್ರಮವನ್ನು ಪೋಷಕಿ ನಯನಾ ಖಂಡಿಸಿದ್ದಾರೆ. ಕನ್ನಡ ಗೊತ್ತಿಲ್ಲದ ಶಿಕ್ಷಕಿ ಕನ್ನಡದಲ್ಲಿ ಪಾಠ ಮಾಡಲು ಸಾಧ್ಯವಾಗುವುದಿಲ್ಲ. ಮನೆಗೆ ಬಂದ ಮಕ್ಕಳು ಪಾಠ ಅರ್ಥ ಆಗಿಲ್ಲ ಅಂತಾ ಕೊರಗುತ್ತಿದ್ದಾರೆ. ಶಾಲೆಯಿಂದಲೂ ಯಾವುದೇ ಸ್ಪಂದನೆ ಸಿಗುತ್ತಿಲ್ಲ. ನಮ್ಮ ಮಕ್ಕಳಿಗೆ ಕನ್ನಡವೇ ಮೊದಲ ಭಾಷೆ. ನ್ಯಾಯಾಲಯದ ಆದೇಶವಿದ್ದರೂ ಉಲ್ಲಂಘನೆಯಾಗುತ್ತಿದೆ. ಕೇರಳ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕೆಂದು ಪೋಷಕಿ ನಯನಾ ಒತ್ತಾಯಿಸಿದ್ದಾರೆ.
ಇನ್ನು ಹತ್ತನೇ ತರಗತಿ ವಿದ್ಯಾರ್ಥಿನಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ತರಗತಿಯಲ್ಲಿ ಶಿಕ್ಷಕಿಗೆ ನಾವು ಕನ್ನಡ ಕಲಿಸುತ್ತಿದ್ದೇವೆ. ಸರಿಯಾಗಿ ಕನ್ನಡದ ಶಬ್ಧವನ್ನು ಹೇಳಲು ಶಿಕ್ಷಕಿಗೆ ಸಾಧ್ಯವಾಗುತ್ತಿಲ್ಲ. ಪಾಠವನ್ನು ನಮ್ಮಲ್ಲೇ ಓದಲು ಹೇಳುತ್ತಿದ್ದಾರೆ. ಪಾಠವೂ ಅರ್ಧವಾಗುತ್ತಿಲ್ಲ. ಪಬ್ಲಿಕ್ ಪರೀಕ್ಷೆಯನ್ನು ಎದುರಿಸೋದು ಹೇಗೆ ಎಂದು ಭಯವಾಗುತ್ತಿದೆ ಎಂದು ತಮ್ಮ ಅಸಾಹಯಕತೆ ತೋಡಿಕೊಂಡಿದ್ದಾರೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications