ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತೊಕ್ಕುಟ್ಟು ಬಳಿ ವ್ಯಕ್ತಿಯ ಬರ್ಬರ ಹತ್ಯೆ; ಕುಟುಂಬ ಕಲಹ ಶಂಕೆ

|
Google Oneindia Kannada News

ಮಂಗಳೂರು, ಜುಲೈ 4: ಮಂಗಳೂರು ಹೊರವಲಯದ ತೊಕ್ಕೊಟ್ಟು ಎಂಬಲ್ಲಿ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಉಳ್ಳಾಲ ಸಮೀಪದ ತೊಕ್ಕೊಟ್ಟು ಎಂಬಲ್ಲಿನ ಚೆಂಬುಗುಡ್ಡೆ ಬಳಿಯ ಮನೆಯೊಂದರಲ್ಲಿ ಈ ಘಟನೆ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ನಾರಾಯಣ (46) ಎಂದು ಗುರುತಿಸಲಾಗಿದೆ. ಕುಟುಂಬ ಕಲಹದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಹೇಳಲಾಗಿದೆ. ಕೊಲೆ ನಡೆದ ಸ್ಥಳಕ್ಕೆ ಉಳ್ಳಾಲ ಪೊಲೀಸರು ತೆರಳಿ ತನಿಖೆ ನಡೆಸಿದ್ದು, ರಾಜೇಶ್ ಎಂಬುವರನ್ನು ವಶಕ್ಕೆ ಪಡೆದಿದ್ದಾರೆ.

 ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ವಿಡಿಯೋ ವೈರಲ್; ಸು ಮೋಟೊ ಪ್ರಕರಣ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ವಿಡಿಯೋ ವೈರಲ್; ಸು ಮೋಟೊ ಪ್ರಕರಣ

ಸ್ಥಳೀಯ ನಿವಾಸಿ ಲಲಿತಾ ಎಂಬುವರ ಮನೆಯಲ್ಲಿ ಅವರ ಅಣ್ಣನ ಮಗನಾದ ನಾರಾಯಣ ಉಳಿದುಕೊಳ್ಳುತ್ತಿದ್ದ. ಲಲಿತಾ ಅವರ ಮಗ ರಾಜೇಶ್ (35) ಕೊಲೆ ಆರೋಪಿ.

Man brutally murdered in Mangaluru

ಲಲಿತಾ ಅವರ ಎರಡನೆಯ ಮಗ ರಮೇಶ್ ಮೂಡುಬಿದಿರೆಯಲ್ಲಿ ವಾಸವಾಗಿದ್ದಾನೆ. ಆರೋಪಿ ರಾಜೇಶ್ ಗುಜರಾತ್ ನಲ್ಲಿ ಕೆಲಸ ಮಾಡುತ್ತಿದ್ದು, ಪ್ರತಿ ಮೂರು ತಿಂಗಳಿಗೊಮ್ಮೆ ಇಲ್ಲಿಗೆ ಬರುತ್ತಿದ್ದ. ಈ ಬಾರಿಯೂ ಊರಿಗೆ ಬಂದವನು, ರಜೆಯ ಮೇಲೆ ಊರಿನಲ್ಲಿದ್ದ. ನಾರಾಯಣ ಕೂಲಿ ಕೆಲಸ ಮಾಡುತ್ತಿದ್ದ. ಕೌಟುಂಬಿಕ ಕಲಹದಿಂದ ಮಾತಿನ ಚಕಮಕಿ ನಡೆದು ಕೊಲೆ ನಡೆದಿರಬೇಕು ಎಂದು ಸಂಶಯಿಸಲಾಗಿದೆ.

ಮಂಗಳೂರಿನಲ್ಲಿ ಯುವತಿಗೆ ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕಮಂಗಳೂರಿನಲ್ಲಿ ಯುವತಿಗೆ ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕ

ನಾರಾಯಣ ಅವರನ್ನು ಕತ್ತಿಯಿಂದ ಭೀಕರವಾಗಿ ಕೊಲೆ ಮಾಡಿದ ಬಳಿಕ ಕೊಲೆಗೆ ಬಳಸಿದ ಕತ್ತಿಯನ್ನು ತೊಳೆದು ಕೊಲೆಯಾದ ನಾರಾಯಣನ ಕೈಯಲ್ಲಿ ಇಟ್ಟಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

English summary
Man was hacked to death at Thokkotu near Ullala on night of July 3 for family dispute. Deceased person identified as Narayana (46). Police arrested one person.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X