ಅಂಗನವಾಡಿ ಕಾರ್ಯಕರ್ತೆ ಕೈ ಕಡಿದು ಆತ್ಮಹತ್ಯೆಗೆ ಶರಣಾದ
ಮಂಗಳೂರು, ಡಿಸೆಂಬರ್ 03 : ಅಂಗನವಾಡಿ ಕಾರ್ಯಕರ್ತೆಯನ್ನು ಕೊಲೆ ಮಾಡಲು ಯತ್ನಿಸಿ ವ್ಯಕ್ತಿಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಕಾರ್ಯಕರ್ತೆಯ ಎಡಗೈಗೆ ಗಂಭೀರವಾದ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೆಳ್ತಗಂಡಿ ತಾಲೂಕಿನ ಮುನಿಕಾರ್ ಮಲೆಕುಡಿಯ ಕಾಲೋನಿಯಲ್ಲಿ ಗುರುವಾರ ಈ ಘಟನೆ ನಡೆದಿದೆ. ಅಂಗನವಾಡಿ ಕಾರ್ಯಕರ್ತೆ ಹೊನ್ನಮ್ಮ ಗೌಡ (37) ಅವರ ಕೈ ಕತ್ತರಿಸಿ, ಉಮೇಶ್ ಗೌಡ (41) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಂಗನವಾಡಿಯಲ್ಲಿ ಮಕ್ಕಳ ಮುಂದೆಯೇ ಈ ಘಟನೆ ನಡೆದಿದೆ. [ಆಪ್ತ ಗೆಳತಿಯನ್ನು ಕೊಂದಿದ್ದ ಅನುಷಾ ಆತ್ಮಹತ್ಯೆಗೆ ಶರಣು]

ಗುರುವಾರ ಅಂಗನವಾಡಿಗೆ ನುಗ್ಗಿದ ಉಮೇಶ್ ಗೌಡ ಹೊನ್ನಮ್ಮ ಅವರ ಮೇಲೆ ಗುಂಡು ಹಾರಿಸಲು ಪ್ರಯತ್ನಿಸಿದ್ದಾನೆ. ಆದರೆ, ಅವರು ತಪ್ಪಿಸಿಕೊಂಡಿದ್ದಾರೆ. ಆಗ ಅವರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಆಗ ಹೊನ್ನಮ್ಮ ಅವರು ಎಡಗೈ ಅಡ್ಡ ಹಿಡಿದಿದ್ದು, ಕೈಗೆ ಗಂಭೀರವಾದ ಗಾಯಗಳಾಗಿವೆ. [ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಸಮಯ ಬದಲಾವಣೆ]
ಹಲ್ಲೆಯಿಂದಾಗಿ ಹೊನ್ನಮ್ಮ ಅವರು ಗಾಯಗೊಂಡಾಗ ಗಾಬರಿಗೊಂಡ ಉಮೇಶ್ ಗೌಡ, ಅಂಗನವಾಡಿಯಲ್ಲಿಯೇ ಕುತ್ತಿಗೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಾಯಗೊಂಡ ಹೊನ್ನಮ್ಮ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗಲಾಟೆ ನಡೆದಿತ್ತು : ಕೆಲವು ತಿಂಗಳ ಹಿಂದೆ ಉಮೇಶ್ ಮತ್ತು ಹೊನ್ನಮ್ಮ ಮದುವೆ ನಿಶ್ಚಯವಾಗಿತ್ತು. ಉಮೇಶ್ ಗೌಡನಿಗೆ ಕುಡಿತದ ಚಟವಿದೆ ಎಂಬ ಕಾರಣಕ್ಕೆ ಹೊನ್ನಮ್ಮ ಮದುವೆಯಾಗಲು ನಿರಾಕರಿಸಿದ್ದರು. ಉಮೇಶ್ ನಡವಳಿಕೆ ಸರಿಇಲ್ಲ ಎಂದು ಹೇಳಿಕೆ ನೀಡಿದ್ದರು.

ಇದರಿಂದ ಕೋಪಗೊಂಡ ಉಮೇಶ್ ಹಿಂದೆಯೂ ಹೊನ್ನಮ್ಮ ಮೇಲೆ ಹಲ್ಲೆ ನಡೆಸಿದ್ದ. ಗುರುವಾರ ಏಕಾಏಕಿ ಅಂಗನವಾಡಿಗೆ ನುಗ್ಗಿ ಹೊನ್ನಮ್ಮ ಕೈ ಕಡಿದು, ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications