ಮಂಗಳೂರು ಏರ್ಪೋರ್ಟ್ ರನ್ ವೇಗೆ ಅಪಾಯ ತಂದೊಡ್ಡಿದ ಮಹಾಮಳೆ
ಮಂಗಳೂರು, ಜೂನ್ 5: ಮಂಗಳೂರಿನಲ್ಲಿ ಮೇ 29 ರಂದು ಸುರಿದ ಮಹಾಮಳೆ ಮಂಗಳೂರಿನಲ್ಲಿ ಸೃಷ್ಠಿಸಿದ ಅವಾಂತರಗಳು ಒಂದೊಂದಾಗಿ ಇನ್ನೂ ಬೆಳಕಿಗೆ ಬರುತ್ತಲೇ ಇವೆ. ಮಹಾಮಳೆಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇಯ ತಡೆಗೋಡೆ ಬಿರುಕು ಬಿಟ್ಟಿದ್ದು ತಡವಾಗಿ ಗೊತ್ತಾಗಿದೆ.
ಮೇ 29 ರಂದು ನಿರಂತರವಾಗಿ ಸುರಿದಿದ್ದ ಮಹಾಮಳೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಒಂದು ಪಾರ್ಶ್ವದ ತಡೆಗೋಡೆಯ ಕೆಳಗೆ ಮಣ್ಣು ಕುಸಿದಿದೆ. ಇದರಿಂದ ತಡೆಗೋಡೆ ಬಿರುಕು ಬಿಟ್ಟಿದೆ.
ಮಂಗಳೂರಿನಲ್ಲಿರುವುದು ಟೇಬಲ್ ಟಾಪ್ ವಿಮಾನ ನಿಲ್ದಾಣವಾಗಿದ್ದು, ಗುಡ್ಡದ ಮೇಲೆ ಎತ್ತರದಲ್ಲಿ ನಿರ್ಮಿಸಲಾಗಿರುವ ಈ ವಿಮಾನ ನಿಲ್ದಾಣದ ರನ್ ವೇ ಸುತ್ತ ಕಲ್ಲಿನ ತಡೆಗೋಡೆ ನಿರ್ಮಿಸಲಾಗಿದೆ. ಇದೀಗ ತಡೆಗೋಡೆ ಸಂಪೂರ್ಣ ಬಿರುಕು ಬಿಟ್ಟಿದೆ.

ತಡೆಗೋಡೆ ಬಿರುಕು ಬಿಟ್ಟ ಮಾಹಿತಿಯನ್ನು ಸ್ಥಳೀಯ ನಿವಾಸಿಗಳು ವಿಮಾನ ನಿಲ್ದಾಣ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿರಲಿಲ್ಲಎಂದು ದೂರಲಾಗಿದೆ. ಆದರೆ ಇಂದು ಸ್ಥಳಕ್ಕೆ ವಿಮಾನ ನಿಲ್ದಾಣದ ಅಧಿಕಾರಿಗಳು ಆಗಮಿಸಿ ಕುಸಿದ ಮಣ್ಣನ್ನು ಪರಿಶೀಲನೆ ನಡೆಸಿದ್ದು , ಬಿರುಕಿನಿಂದ ಯಾವುದೇ ಅಪಾಯ ಇಲ್ಲ ಎಂದು ತಿಳಿಸಿದ್ದಾರೆ.

ಈ ಭೂಕುಸಿತದಿಂದ ಅಕ್ಕಪಕ್ಕದ ಗದ್ದೆಗಳಿಗೂ ಹಾನಿಯುಂಟಾಗಿದ್ದು, ವಿಮಾನ ನಿಲ್ದಾಣದಲ್ಲಿ ಸರಿಯಾದ ಡ್ರೈನೇಜ್ ವ್ಯವಸ್ಥೆ ಇಲ್ಲದಿರುವುದು ಈ ಭೂಕುಸಿತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.
-
Bengaluru Airport: ಮಳೆ ಅಬ್ಬರಕ್ಕೆ 30 ವಿಮಾನಗಳ ಮಾರ್ಗ ಬದಲು, ಏರ್ಪೋರ್ಟ್ ಟರ್ಮಿನಲ್ನಲ್ಲಿ ನೀರು ಸೋರಿಕೆ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
ಆಲಿಕಲ್ಲು ಮಳೆಗೆ ನೆಲಕಚ್ಚಿದ ಮಾವು, ಹಲಸು, ಕಲ್ಲಂಗಡಿ; ಕೈಗೆ ಬಂದ ತುತ್ತು ಬಾಯಿಗಿಲ್ಲ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Heavy Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ: ಐಎಂಡಿ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ? -
ಮೊದಲ ಮಳೆಗೆ ಎಚ್ಚೆತ್ತ GBA: 2000 ಕೋಟಿ ರೂ. ವೆಚ್ಚದ ರಾಜಕಾಲುವೆ ಕಾಮಗಾರಿಗಳಿಗೆ ಡೆಡ್ಲೈನ್ -
Rain Alert: ಬೇಸಿಗೆ ಮಳೆಗೆ ಬೆಂಗಳೂರಿನ ಕೆಲವೆಡೆ ಸಂಚಾರ ಅಸ್ತವ್ಯಸ್ತ, ಮಾ.21ರವರೆಗೂ ಮಳೆ -
Bengaluru Rain: ಬೆಂಗಳೂರಿನಲ್ಲಿ ತಾಪಮಾನ ಕುಸಿತ: ಸುಡುಬಿಸಿಲಿಗೆ ಬ್ರೇಕ್ ಹಾಕಿದ ವರ್ಷದ ಮೊದಲ ಮಳೆ, ತಂಪಾದ ಸಿಲಿಕಾನ್ ಸಿಟಿ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್












Click it and Unblock the Notifications