ಆಳ್ವಾಸ್ ವಿದ್ಯಾರ್ಥಿಗಳಿಂದ ವೈಜ್ಞಾನಿಕ ವಿಜ್ಞಾನ ಪ್ರದರ್ಶನ
ಆಳ್ವಾಸ್ ಇಂಜಿನಿಯರಿಂಗ್ ನ ಮೆಕ್ಯಾನಿಕಲ್ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನದ ಮಾದರಿಗಳ ಪ್ರಾತ್ಯಕ್ಷಿಕೆ ಕಾರ್ಯಕ್ರಮ ವಿವೇಕ್ ಆಳ್ವ ಉದ್ಘಾಟಿಸಿದರು. ಸುಳ್ಯದಲ್ಲಿ ಯುವಜನ ಹಬ್ಬವನ್ನು ಜಾನಕಿ ಕುರುಂಜಿ ವೆಂಕಟ್ರಮಣ ಗೌಡ ಉದ್ಘಾಟಿಸಿದರು.
ಮಂಗಳೂರು, ಡಿಸೆಂಬರ್, 18: ಆಳ್ವಾಸ್ ಇಂಜಿನಿಯರಿಂಗ್ ನ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳು ತಯಾರಿಸಿದ ವೈಜ್ಞಾನಿಕ ತತ್ವ ಸಿದ್ದಾಂತ ಆಧಾರಿತ ವಿಜ್ಞಾನದ ಮಾದರಿಗಳ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಶನಿವಾರ ಆಳ್ವಾಸ್ ಕ್ಯಾಂಪಸ್ ನಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಮೂಡಬಿದ್ರೆ ಮಿಜಾರು ಸುತ್ತಮುತ್ತಲಿನ ಸರ್ಕಾರಿ ಹಾಗೂ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ವಿವೇಕ್ ಆಳ್ವ ಉದ್ಘಾಟಿಸಿ ಮಾತನಾಡಿ, ಪ್ರಸಕ್ತ ಸನ್ನಿವೇಶಕ್ಕೆ ತಕ್ಕ ಹಾಗೆ ವಿಜ್ಞಾನದಲ್ಲಿ ಆಗುತ್ತಿರುವ ಬಲಾವಣೆ ಹಾಗೂ ಮೌಡ್ಯತೆಯ ಬಗ್ಗೆ ಜಾಗೃತರಾಗಬೇಕು ಮತ್ತು ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಕನಸು ಕಟ್ಟುವ ಕೆಲಸಕ್ಕೆ ನೆರವಾಗಬೇಕು ಎಂದರು.

ಪ್ರದರ್ಶನದ ಮಾದರಿಗಳನ್ನು ಪರಿಸರದಲ್ಲಿ ಸಾಮಾನ್ಯವಾಗಿ ಸಿಗುವ ಕಚ್ಚಾ ವಸ್ತುಗಳನ್ನು ಬಳಕೆ ಮಾಡಿ ಸಿದ್ದಪಡಿಸಿದ್ದರು. ಈ ಪ್ರದರ್ಶನವು ಶಾಲಾ ಮಕ್ಕಳಲ್ಲಿ ತಾಂತ್ರಿಕತೆಯ ಅರಿವು ಮೂಡಿಸಿತು.
ಸುಳ್ಯದಲ್ಲಿ ' ಯುವಜನ ಹಬ್ಬ' ದ ಸಂಭ್ರಮ: ಸಮೃದ್ಧ ಭಾರತದ ನಿರ್ಮಾಣ ಯುವಜನತೆಯ ಕೈಯಲ್ಲಿದೆ. ನಮ್ಮ ದೇಶದ ರಕ್ಷಣೆ ಯುವಕರಿಂದ ಮಾತ್ರ ಸಾಧ್ಯ ಎಂದು ದ.ಕ.ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಹೇಳಿದರು.
ಸುಳ್ಯ ಯುವಜನ ಸಂಯುಕ್ತ ಮಂಡಳಿಯ ನವೀಕರಣಗೊಂಡ ಜಾನಕಿ ಕುರುಂಜಿ ವೆಂಕಟ್ರಮಣ ಗೌಡ ರಂಗಮಂದಿರವನ್ನು ಲೋಕಾರ್ಪಣೆ ಮಾಡಿ ಯುವಜನ ಹಬ್ಬವನ್ನು' ಉದ್ಘಾಟಿಸಿ ಅವರು ಮಾತನಾಡಿದರು.
ಯುವಜನತೆ ದಾರಿ ತಪ್ಪದಂತೆ ಸಂಘಟನೆಗಳು ಎಚ್ಚರ ವಹಿಸಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. ನಮ್ಮ ಕಲೆ ಮತ್ತು ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಯುವಕರು ಜೀವನವನ್ನು ಪಾವನಗೊಳಿಸಬೇಕು ಅಂದರು. ಜೊತೆಗೆ ಮುಂದಿನ ಪೀಳಿಗೆಗೆ ಕಲೆ ಸಂಸ್ಕೃತಿಯನ್ನು ಹಸ್ತಾಂತರಿಸುವ ಕೆಲಸವಾಗಬೇಕು ಎಂದರು.
ಯುವಕ ಯುವತಿಯರ ಕಲಾತಂಡದೊಂದಿಗೆ ಸುಳ್ಯದ ಪ್ರಮುಖ ರಸ್ತೆಗಳಲ್ಲಿ ಜಾನಪದ ಕಲೆ ಮತ್ತು ಸಂಸ್ಕೃತಿ ಅನಾವರಣಗೊಂಡ ಆಕರ್ಷಕ ಮೆರವಣಿಗೆ ಮನಸೂರೆಗೊಂಡಿತು. ಯುವಜನ ಹಬ್ಬದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮೆರುಗು ನೀಡಿತು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications