ತೆಂಗು, ಅಡಿಕೆ ಇಳಿಸಲು ಯಂತ್ರ ಕಂಡುಹಿಡಿದ ಬಂಟ್ವಾಳದ ಹುಡುಗರು
ಬಂಟ್ವಾಳ ತಾಲೂಕಿನ ಕೃಷಿ ಮೂಲ ಕುಟುಂಬದಿಂದ ಬಂದ ಪ್ರಮೀತ್ ಶೆಟ್ಟಿ ತನ್ನ ಸಹಪಾಠಿ ವೆಂಕಟೇಶ್ ಪ್ರಭು ಜೊತೆ ಸೇರಿ ಕೃಷಿಕರಿಗೆ ಸಹಾಯವಾಗುವ ನಿಟ್ಟಿನಲ್ಲಿ ಆಟೋಮೇಟೆಡ್ ಕೋಕನಟ್ ಪ್ಲಕ್ಕರ್ ವಿತ್ ಕ್ಯಾಮರಾ' ಎಂಬ ವಿಶೇಷ ಯಂತ್ರವನ್ನು ತಯಾರಿಸಿದ್ದಾರೆ.
ಮಂಗಳೂರು, ಏಪ್ರಿಲ್ 3: ರೈತರನ್ನು ಕಾಡುವ ಸಮಸ್ಯೆಗಳಲ್ಲಿ ಕಾರ್ಮಿಕರ ಸಮಸ್ಯೆಯೂ ಒಂದು. ಅದರಲ್ಲೂ ತೆಂಗು ಮತ್ತು ಅಡಿಕೆ ಹೆಚ್ಚಾಗಿ ಬೆಳೆಯುವ ದಕ್ಷಿಣ ಕನ್ನಡ ಭಾಗದಲ್ಲಿ ಕೃಷಿ ಕಾರ್ಮಿಕರು ಕೈಗೆ ಸಿಗುವುದೇ ಇಲ್ಲ. ಮರ ಹತ್ತುವವರ ಕೊರತೆಯಂತೂ ಹೇಳ ತೀರದು.
ಈ ಸಮಸ್ಯೆ ನೀಗಿಸಲು ನಮ್ಮ ಕಥೆಯ ಈ ಇಬ್ಬರು ಯುವಕರು ಮುಂದಾಗಿದ್ದಾರೆ. ಮರ ಹತ್ತಲು ಹಲವು ಆಧುನಿಕ ಯಂತ್ರೋಪಕರಣಗಳ ಆವಿಷ್ಕಾರ ನಡೆಯುತ್ತಿದೆ. ಇದರ ಮಧ್ಯೆ ಈ ಯುವಕರು ಮರ ಹತ್ತುವ ಸಾಧನ ಕಂಡು ಹಿಡಿದಿದ್ದು ಗಮನ ಸೆಳೆಯುತ್ತಾರೆ.[ಮರಳು ಮಾಫಿಯಾ ಅಡ್ಡೆ ಮೇಲೆ ದಾಳಿ, ಉಡುಪಿ ಡಿಸಿ ಕೊಲೆ ಯತ್ನ]
ಬಂಟ್ವಾಳ ತಾಲೂಕಿನ ಕೃಷಿ ಮೂಲ ಕುಟುಂಬದಿಂದ ಬಂದ ಪ್ರಮೀತ್ ಶೆಟ್ಟಿ ತನ್ನ ಸಹಪಾಠಿ ವೆಂಕಟೇಶ್ ಪ್ರಭು ಜೊತೆ ಸೇರಿ ಕೃಷಿಕರಿಗೆ ಸಹಾಯವಾಗುವ ನಿಟ್ಟಿನಲ್ಲಿ ಆಟೋಮೇಟೆಡ್ ಕೋಕನಟ್ ಪ್ಲಕ್ಕರ್ ವಿತ್ ಕ್ಯಾಮರಾ' ಎಂಬ ವಿಶೇಷ ಯಂತ್ರವನ್ನು ತಯಾರಿಸಿದ್ದಾರೆ. ಈ ಮೂಲಕ ರೈತ ವರ್ಗದ ಅಭಿನಂದನೆಗೆ ಪಾತ್ರರಾಗಿದ್ದಾರೆ.

ಯಾವ ಮರವಾದರೂ ಒಕೆ
ಒನ್ ಇಂಡಿಯಾ ಕನ್ನಡ ಜೊತೆಗೆ ಮಾತನಾಡಿದ ಪ್ರಮೀತ್ ಅಡಿಕೆ ಮರವಿರಲಿ, ತೆಂಗಿನ ಮರವಿರಲಿ ಈ ಯಂತ್ರಕ್ಕೆ ಸಮಸ್ಯೆಯೇ ಅಲ್ಲ. ಎಷ್ಟೇ ಎತ್ತರ ಮತ್ತು ಯಾವುದೇ ಸುತ್ತಳತೆಯ ಮರವನ್ನಾದರೂ ಇದು ತಾನಾಗಿಯೇ ಏರಬಲ್ಲದು ಎಂದು ತಮ್ಮ ಯಂತ್ರದ ಬಗ್ಗೆ ಮಾಹಿತಿ ನೀಡಿದ್ದಾರೆ.

ಕೊಯ್ಲು, ಔಷಧಿ ಸಿಂಪಡನೆಗೆ ಉಪಯುಕ್ತ
ಅಡಿಕೆ, ತೆಂಗಿನ ಕೊಯ್ಲಿಗೆ ಈ ಯಂತ್ರ ಪರಿಣಾಮಕಾರಿಯಾಗಿ ಬಳಕೆ ಮಾಡಬಹುದಾಗಿದೆ. ಅಡಿಕೆಗೆ ಔಷಧಿ ಸಿಂಪಡಣೆಗೂ ಇದನ್ನು ಬಳಸುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಗೊನೆಯಲ್ಲಿರುವ ಕೆಲವು ಕಾಯಿಗಳನ್ನಷ್ಟೇ ಕೀಳಬೇಕು ಎಂದರೂ ಇದರಲ್ಲಿ ವ್ಯವಸ್ಥೆಯಿದೆ.[ಉಡುಪಿ ಡಿಸಿ, ಎಸಿ ಕೊಲೆ ಯತ್ನ, ಬಂಧಿತರ ಸಂಖ್ಯೆ 13ಕ್ಕೆ ಏರಿಕೆ]

ಬ್ಯಾಟರಿ ಚಾಲಿತ
12 ವೋಲ್ಟ್ ಬ್ಯಾಟರಿಯಿಂದ ಚಾಲನೆಗೊಳ್ಳುವ ಈ ಯಂತ್ರ, ಒಂದು ಬಾರಿ ಬ್ಯಾಟರಿ ಫುಲ್ ಚಾರ್ಜ್ ಮಾಡಿದರೆ 150 ಮರಗಳಿಂದ ಕಾಯಿ ಕೀಳುವ ಸಾಮರ್ಥ್ಯ ಹೊಂದಿದೆ. ಯಂತ್ರದಲ್ಲಿ ಕ್ಯಾಮರಾ ಇದ್ದು, ಡಿಸ್ಪ್ಲೇಯಲ್ಲಿ ಮರದ ತುತ್ತ ತುದಿಯ ಚಿತ್ರಗಳನ್ನೂ, ಗೊನೆ, ಕಾಯಿಗಳ ವೀಕ್ಷಣೆಯನ್ನೂ ಸುಲಭದಲ್ಲಿ ಮಾಡಬಹುದಾಗಿದೆ. ಈ ಮೂಲಕ ಯಂತ್ರಕ್ಕೆ ನಿರ್ದೇಶನಗಳನ್ನು ನೀಡಬಹುದು.

ಪ್ರಶಸ್ತಿ ಗೆದ್ದ ಯಂತ್ರ
ಪ್ರಮೀತ್ ಶೆಟ್ಟಿ ಮೂಡಬಿದಿರೆ ಎಸ್ ಎನ್ ಪಾಲಿಟೆಕ್ನಿಕ್ಕಿನ ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದಾರೆ. ರಾಜ್ಯ ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದ ವತಿಯಿಂದ ಬಾಗಲಕೋಟೆ ಸರಕಾರಿ ಪಾಲಿಟೆಕ್ನಿಕ್ಕಿನಲ್ಲಿ ಇತ್ತೀಚೆಗೆ ಆಯೋಜಿಸಿದ ರಾಜ್ಯಮಟ್ಟದ ನೀವೇ ಮಾಡಿ ನೋಡಿ,' ತಾಂತ್ರಿಕ ಮಾದರಿ ಪ್ರದರ್ಶನ ಸ್ಪರ್ಧೆಯಲ್ಲಿ ಈ ಯಂತ್ರವನ್ನು ತಯಾರಿಸಿ ದ್ವಿತೀಯ ಪ್ರಶಸ್ತಿಯನ್ನೂ ಪಡೆದಿದ್ದಾರೆ.

ಸಾಧನೆ ಮುಂದುವರಿಯಲಿ
ಕೃಷಿ ಕುಟುಂಬದಿಂದ ಬಂದ ಅರಳ ಗ್ರಾಮ ಪಂಚಾಯತ್ ಸದಸ್ಯ ಲಕ್ಷ್ಮೀಧರ ಹಾಗೂ ರೂಪಾ ದಂಪತಿಯ ಪುತ್ರನಾಗಿರುವ ಪ್ರಮೀತ್ ಶೆಟ್ಟಿ ಸಾಧನೆ ಮತ್ತಷ್ಟು ಮುಂದುವರಿಸಲು ಮನೆಮಂದಿಯ ಮತ್ತು ಊರವರ ಉತ್ತೇಜನವಿದೆ. ಪ್ರಸ್ತುತ ಈ ಯಂತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಪ್ರಮೀತ್ ಪ್ರಯತ್ನ ನಡೆಸುತ್ತಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications