ಮಂಗಳೂರಿನಲ್ಲಿ ಭೂಗತ ಪಾತಕಿ ವಿಕ್ಕಿ ಶೆಟ್ಟಿ ಸಹಚರರ ಬಂಧನ
ಭೂಗತ ಪಾತಕಿ ವಿಕ್ಕಿ ಸಹಚರ ಆಕಾಶಭವನ ಶರಣ್ ಹಾಗೂ ಗಾಂಜಾ ಮಾರಟಗಾರ ತಣ್ಣಿ ರಹೀಮ್ ಎಂಬುವವರು ಬಂಧಿಸಿದ್ದು ಗೂಂಡಾಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರು, ಫೆಬ್ರವರಿ 11: ಮಂಗಳೂರಲ್ಲಿ ಭೂಗತ ಪಾತಕಿ ವಿಕ್ಕಿ ಶೆಟ್ಟಿಯ ಇಬ್ಬರು ಸಹಚರರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಭೂಗತ ಪಾತಕಿ ವಿಕ್ಕಿ ಸಹಚರ ಆಕಾಶಭವನ ಶರಣ್ ಹಾಗೂ ಗಾಂಜಾ ಮಾರಟಗಾರ ತಣ್ಣಿ ರಹೀಮ್ ಎಂಬುವವರು ಬಂಧಿತರು. ಸಮಾಜಘಾತುಕ ಚುಟುವಟಿಕೆಯಲ್ಲಿ ತೊಡಗಿದ್ದನೆಂದು ಆಕಾಶ ಭವನ್ ಚರಣ್ ಹಾಗೂ ಗಾಂಜಾ ಮಾರಟದಲ್ಲಿ ತಣ್ಣಿ ರಹೀಮ್ ಅನ್ನು ಗೂಂಡಾ ಕಾಯ್ದೆಯಡಿಯಲ್ಲಿ ಬಂಧಿಸಿದ್ದಾರೆ. ಆಕಾಶ್ ಭವನ್ ವಿರುದ್ಧ ಮಂಗಳೂರಿನ ವಿವಿಧ ಠಾಣೆಗಳಲ್ಲಿ 14 ಪ್ರಕರಣಗಳಿವೆ. ತಣ್ಣಿ ರಹೀಮ್ ವಿರುದ್ಧ 8 ಪ್ರಕರಣ ದಾಖಲಾಗಿದೆ.[ಭಾರತಕ್ಕೆ ಬಂದ ಭೂಗತ ಪಾತಕಿ ಛೋಟಾ ರಾಜನ್]

ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇವರನ್ನು ಬಂಧಿಸುವಂತೆ ಮಂಗಳೂರು ಪೊಲೀಸ್ ಕಮಿಷನರ್ ಚಂದ್ರಶೇಖರ್ ಆದೇಶ ನೀಡಿದ್ದರು. ಮಂಗಳೂರಲ್ಲಿ ಡ್ರಗ್ ಜಾಲ ಹೆಚ್ಚಾಗುತ್ತಿದೆ ಎಂಬುದರ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲೂ ಚರ್ಚೆ ನಡೆದಿತ್ತು.
ಇನ್ನು ಮೊನ್ನೆ ತಾನೇ ಅಧಿವೇಶನದಲ್ಲಿ ಗೃಹ ಸಚಿವರು ಗೂಂಡಾ ಕಾಯ್ದೆಯಡಿಯಲ್ಲಿ ಅತ್ಯಚಾರ ಮತ್ತು ಅನೇಕ ಕೃತ್ಯಗಳಲ್ಲಿ ಭಾಗವಹಿಸುವವರ ವಿರುದ್ಧ ಕ್ರಮ ಜರುಗಿಸುವುದಾಗಿ ತಿಳಿಸಿದ್ದರು.
ಬಸ್ - ಬೈಕ್ ಡಿಕ್ಕಿ ಚಿತ್ರಕಲಾ ಶಿಕ್ಷಕರಿಗೆ ಗಂಭೀರ ಗಾಯ
ಉಡುಪಿ : ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಖ್ಯಾತ ಚಿತ್ರಕಲಾ ಶಿಕ್ಷಕರೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ಹೆಮ್ಮಾಡಿಯ ಬೈಪಾಸ್ ಬಳಿ ಇಂದು ಬೆಳಗಿನ ಜಾವ ಸಂಭವಿಸಿದೆ.

ಕೋಟೇಶ್ವರ ಪದವಿ ಪೂರ್ವ ಕಾಲೇಜಿನ ಚಿತ್ರಕಲಾ ಶಿಕ್ಷಕ, ಹೆಮ್ಮಾಡಿ ನಿವಾಸಿ ಭೋಜು ಹಾಂಡ(52) ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಸಾವು ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಘಟನೆ ವೇಳೆ ಬೈಕ್ ಹಿಂಬದಿ ಕುಳಿತಿದ್ದ ಅರ್ಪಿತಾ(11) ಕುಂದಾಪುರ ಚಿನ್ಮಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿತ್ರಕಲೆಯಲ್ಲಿ ಸಾಕಷ್ಟು ಸಾಧನೆ ಮಾಡಿದ್ದ ಭೋಜು ಹಾಂಡರು, ತಮ್ಮ ಬಿಡುವಿನ ವೇಳೆಯಲ್ಲಿ ಸ್ಥಳೀಯ ಶಾಲಾ ಮಕ್ಕಳಿಗೆ ಚಿತ್ರಕಲೆ ಹಾಗೂ ಇನ್ನಿತರ ಪೇಪರ್ ಕ್ರಾಫ್ಟ್ ಗಳನ್ನು ಹೇಳಿಕೊಡುತ್ತಿದ್ದರು. ಕುಂದಾಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications