ಜನಾರ್ದನ ಪೂಜಾರಿ ಪರ ಬೆಂಗಳೂರಿನಲ್ಲಿ ಬ್ಯಾಟಿಂಗ್

ಮಂಗಳೂರು ಕ್ಷೇತ್ರದ ಟಿಕೆಟ್ ಹಂಚಿಕೆಯ ಕುರಿತು ವಿವಾದವೆದ್ದು ಹಲವು ದಿನಗಳು ಕಳೆದಿವೆ. ಈ ಬಾರಿಯ ಚುನಾವಣೆಯಲ್ಲಿ ಕೇಂದ್ರದಲ್ಲಿ ತಮ್ಮ ಪ್ರಭಾವ ಬಳಸಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ತಮ್ಮ ಪುತ್ರ ಹರ್ಷ ಮೊಯ್ಲಿಗೆ ಟಿಕೆಟ್ ಕೊಡಿಸುತ್ತಾರೆ. ಸಂಸದ ಜನಾರ್ದನ ಪೂಜಾರಿಗೆ ಟಿಕೆಟ್ ನೀಡುವುದಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. [ದಕ್ಷಿಣ ಕನ್ನಡ ಹೊಸಮುಖವೊ-ಹಳೆಹುಲಿಯೋ]
ಈ ಕುರಿತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿದ್ದ ಮಾತುಕತೆಗಳು ಬೆಂಗಳೂರು ತಲುಪಿದ್ದು, ಜನಾರ್ದನ ಪೂಜಾರಿಗೆ ಟಿಕೆಟ್ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆ. ಇದರಿಂದ ಟಿಕೆಟ್ ಹಂಚಿಕೆ ವಿವಾದ ಬೆಂಗಳೂರಿಗೆ ಕಾಲಿಟ್ಟಿದೆ. [ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ]
ಆರೋಗ್ಯ ಸಚಿವ ಯುಟಿ ಖಾದರ್, ಬೆಳ್ತಂಗಡಿ ಶಾಸಕ ವಸಂತ್ ಬಂಗೇರಾ ನೇತೃತ್ವದ ಸುಮಾರು 300 ಸದಸ್ಯರ ನಿಯೋಗ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಜನಾರ್ದನ ಪೂಜಾರಿ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿತು. ದಕ್ಷಿಣ ಕನ್ನಡ ಜಿಲ್ಲಾ ಘಟಕ ಸಹ ಪೂಜಾರಿ ಅವರು ಸ್ಪರ್ಧಿಸಬೇಕೆಂದು ಬಯಸುತ್ತಿದೆ ಎಂದು ಸಿಎಂಗೆ ಮನವಿಕೆ ಮಾಡಿಕೊಟ್ಟಿದ್ದಾರೆ.
ನಿಯೋಗದ ಮನವಿ ಆಲಿಸಿದ ಸಿಎಂ ಸಿದ್ದರಾಮಯ್ಯ, ಟಿಕೆಟ್ ಹಂಚಿಕೆ ಬಗ್ಗೆ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಜನಾರ್ದನ ಪೂಜಾರಿ ಅವರಿಗೆ ಟಿಕೆಟ್ ನೀಡುವಂತೆ ನೀವು ಸಲ್ಲಿಸಿದ ಮನವಿಯನ್ನು ರಾಷ್ಟ್ರೀಯ ನಾಯಕರಿಗೆ ಕಳುಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ವೀರಪ್ಪ ಮೊಯ್ಲಿ ಪುತ್ರ ಹರ್ಷ ಅವರು, ಸ್ವತಃ ಮಂಗಳೂರಿನ ಮತದಾರರಲ್ಲ. ಸದ್ಯ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂಬ ಮಾತು ಕೇಳಿಬರುತ್ತಿರುವುದರಿಂದ ಕಾರ್ಯಕರ್ತರಲ್ಲಿ ಅನಗತ್ಯ ಗೊಂದಲ ಉಂಟಾಗುತ್ತಿದೆ ಎಂದು ಸಿಎಂಗೆ ನಿಯೋಗ ಮನವರಿಕೆ ಮಾಡಿಕೊಟ್ಟಿದೆ. ಜನಾರ್ದನ ಪೂಜಾರಿ ಅವರು ಮಹಾನಗರ ಪಾಲಿಕೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಪಕ್ಷದ ಗೆಲುವಿಗೆ ಸಹಕರಿಸಿದ್ದಾರೆ ಆದ್ದರಿಂದ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಹರ್ಷ ಮೊಯ್ಲಿ ಹೇಳುವುದೇನು : ಈ ನಡುವೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಹರ್ಷ ಮೊಯ್ಲಿ ನಾನು ಮಂಗಳೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿ. ಕೆಪಿಸಿಸಿ ಕೇಂದ್ರ ನಾಯಕರಿಗೆ ಕಳುಹಿಸಿರುವ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರಿಗೆ. ಪ್ರಭಾವ ಬಳಸಿ ಕೊನೆ ಕ್ಷಣದಲ್ಲಿ ಹೆಸರು ಸೇರಿಸಲಾಗಿದೆ ಎಂಬುದು ಸತ್ಯಕ್ಕೆ ದೂರವಾದುದು ಎಂದು ಹೇಳಿದ್ದಾರೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications