ಪ್ರಿಯಾ ವಾರಿಯರ್ ಕಣ್ಣೋಟಕ್ಕೆ ಜಾರಿ ಬಿದ್ದ ಮಂಗಳೂರು ಕಾರ್ಪೊರೇಟರ್
Recommended Video

ಮಂಗಳೂರು, ಫೆಬ್ರವರಿ 17: ಕೇರಳದ ಚೆಲುವೆ ಪ್ರಿಯಾ ಪ್ರಕಾಶ ವಾರಿಯರ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾ ಪಟ್ಟೆ ಸದ್ದು ಮಾಡುತ್ತಿದ್ದಾರೆ. ತನ್ನ ಕಣ್ಣೋಟದಿಂದ ಭಾರತದ ಉದ್ದಗಲಕ್ಕೂ ಸಂಚಲನ ಸೃಷ್ಠಿಸಿದ್ದಾರೆ ಪ್ರಿಯಾ.
ಈ ಮಲೆಯಾಳಿ ಬೆಡಗಿಯ ಕೆಣಕುವ ಕಣ್ಣೋಟಕ್ಕೆ ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಕೂಡ ಫಿದಾ ಆಗಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಗಂಭೀರ ಚರ್ಚೆ ನಡೆಯುತ್ತಿದ್ದಾಗ ಕಾರ್ಪೊರೇಟರ್ ಒಬ್ಬರು ಪ್ರಿಯಾ ಪ್ರಕಾಶ್ ವಾರಿಯರ್ ಕುಡಿನೋಟಕ್ಕೆ ಮರುಳಾಗಿದ್ದು ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಎಡಿಬಿ ನೆರವಿನೊಂದಿಗೆ ಪಾಲಿಕೆ ವ್ಯಾಪ್ತಿಯಲ್ಲಿ ಒಳಚರಂಡಿ ಯೋಜನೆಯ ಸಾಧಕ ಬಾಧಕಗಳ ಕುರಿತ ಸಭೆ ಗುರುವಾರ ಮಂಗಳೂರು ಪಾಲಿಕೆ ಸಭಾಂಗಣದಲ್ಲಿ ನಡೆದಿತ್ತು. ಸಭೆಯಲ್ಲಿ ಉಪಸ್ಥಿತರಿದ್ದ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಎಬಿಡಿ ಯೋಜನೆಯ ಅವ್ಯವಹಾರದಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಮೊಯಿದ್ದಿನ್ ಬಾವಾ ಶಾಮೀಲಾಗಿದ್ದಾರೆ ಎಂದು ಬಹಿರಂಗವಾಗಿ ಆರೋಪಿಸಿದ ಈ ಹಿನ್ನಲೆಯಲ್ಲಿ ಸಭೆಯಲ್ಲಿ ಕೋಲಾಹಲವೇ ನಡೆಯಿತು.

ಆದರೆ ಇಷ್ಟೆಲ್ಲಾ ವಾಗ್ವಾದ , ಆರೋಪ ಪ್ರತ್ಯಾರೋಪ ನಡೆಯುತ್ತಿದ್ದರೂ ಮಂಗಳೂರು ಮಹಾನಗರಪಾಲಿಕೆಯ ಕಾರ್ಪೋರೇಟರ್ ಕಾಂಗ್ರೇಸಿನ ನವೀನ್ ಡಿಸೋಜಾ ಮಾತ್ರ ಪ್ರಿಯಾ ಪ್ರಕಾಶ್ ವಾರಿಯರ್ ಅವರ ಕಣ್ಣೋಟದ ವಿಡಿಯೋ ನೋಡುವುದರಲ್ಲೇ ತಲ್ಲಿನರಾಗಿದ್ದರು.
ಪಾಲಿಕೆಯ ಸಭೆಯಲ್ಲಿ ಅಷ್ಟೆಲ್ಲಾ ರಾದ್ದಾಂತ ನಡೆದರೂ ನವೀನ್ ಡಿಸೋಜಾ ಮಾತ್ರ ಪ್ರಿಯಾ ಪ್ರಕಾಶ್ ಕಣ್ಣಿನ ಆಟಕ್ಕೆ ಮರಳಾಗಿ ಕ್ರಶ್ ಗೆ ಒಳಗಾಗಿದ್ದರು. ಪ್ರಿಯಾ ಕಣ್ಣೋಟಕ್ಕೆ ಇಡೀ ದೇಶವೇ ಫಿದಾ ಆಗಿದೆ. ಇನ್ನು ನವೀನ್ ಯಾವ ಲೆಕ್ಕ ಅಲ್ವಾ!
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications