ನಾಗರಪಂಚಮಿಯಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬಂದ್
ಮಂಗಳೂರು, ಜು. 24: ಹಬ್ಬ ಹರಿದಿನಗಳಿಗು ಕೊರೊನಾವೈರಸ್ ಪರಿಣಾಮ ಜೋರಾಗಿಯೆ ತಟ್ಟಿದೆ. ಸಾರ್ವಜನಿಕವಾಗಿ ಹಬ್ಬ ಆಚರಣೆಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಅದರಲ್ಲೂ ನಾಗರಪಂಚಮಿ ದಿನದಂದು ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಭಕ್ತರಿಗೆ ತೆರೆಯದಿರಲು ದೇವಸ್ಥಾನದ ಆಡಳಿತ ಮಂಡಳಿ ತೀರ್ಮಾನ ಮಾಡಿದೆ. ಈ ಬಗ್ಗೆ ಆಡಳಿತ ಆಡಳಿತ ಮಂಡಳಿಯ ಪ್ರಕಟಣೆ ಭಕ್ತರಿಗೆ ನಿರಾಸೆ ಮೂಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಹಾಗೂ ದೇಶದಾದ್ಯಂತ ಭಕ್ತರ ದಂಡು ಹರಿದು ಬರುತ್ತಿತ್ತು. ಆದರೇ ಇದೇ ಮೊದಲ ಬಾರಿಗೆ ನಾಗರಪಂಚಮಿಯಂದು ಭಕ್ತರಿಗೆ ದೇಗುಲಕ್ಕೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ.
Recommended Video
ಪ್ರಕಟಣೆ ಹೊರಡಿಸಿರುವ ದೇವಸ್ಥಾನ ಆಡಳಿತ ಮಂಡಳಿ ಸಾಮಾಜಿಕ ಅಂತರ ಕಾಪಾಡಲು ಕಷ್ಟವಾಗುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ಈ ಬಾರಿ ಅರ್ಚಕರಿಂದ ಮಾತ್ರ ಧಾರ್ಮಿಕ ವಿಧಿ ವಿಧಾನ ನೆರವೇರಿಸಲಾಗುತ್ತಿದೆ. ಇನ್ನೂ ಮಂಗಳೂರಿನ ಇತಿಹಾಸ ಪ್ರಸಿದ್ಧ ಕುಡುಪು ದೇಗುಲಕ್ಕೂ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ನಾಗರಪಂಚಮಿಯ ದಿನದ ಸೇವೆಗಳು, ಸೇವಾ ಪ್ರಸಾದ, ತೀರ್ಥ ಪ್ರಸಾದ ಮತ್ತು ಅನ್ನ ಸಂತರ್ಪಣೆಗಳು ಇರುವುದಿಲ್ಲ.

ನಾಗರ ಪಂಚಮಿಯ ಪ್ರಯುಕ್ತ ನಾಗ ತಂಬಿಲ, ಪಂಚಾಮೃತ, ಆಶ್ಲೇಷ ಬಲಿ ಮೊದಲಾದ ಯಾವುದೇ ಸೇವೆಗಳು ಇಲ್ಲ ಎಂದು ಕುಡುಪು ಶ್ರೀ ಅನಂತ ಪದ್ಮನಾಭ ದೇವಳದ ಆಡಳಿತ ಮಂಡಳಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications