"ಮಂಗಳೂರು ಗೋಲಿಬಾರ್: ಸರ್ಕಾರದಿಂದ ಮೃತರ ಕುಟುಂಬಕ್ಕಿಲ್ಲ ಪರಿಹಾರ"
ಮಂಗಳೂರು, ಡಿಸೆಂಬರ್.25: ಮಂಗಳೂರು ಗೋಲಿಬಾರ್ ಹಿಂದೆ ಸಾಕಷ್ಟು ಅನುಮಾನಗಳು ಹುಟ್ಟಿಕೊಳ್ಳುತ್ತಿವೆ. ಗಲಭೆ ಸೃಷ್ಟಿಸಲು ಮೊದಲೇ ಎಲ್ಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿತ್ತು. ಅದಕ್ಕಾಗಿ ನೆರೆ ರಾಜ್ಯಗಳಿಂದಲೂ ಜನರನ್ನು ಕರೆಸಿಕೊಂಡಿರುವ ಆರೋಪ ಕೇಳಿ ಬಂದಿದೆ.
ಮಂಗಳೂರು ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಮೃತಪಟ್ಟ ಜಲೀಲ್ ಹಾಗೂ ನೌಸಿನ್ ಕುಟುಂಬಕ್ಕೆ ಪರಿಹಾರ ನೀಡಬೇಕೋ ಬೇಡವೋ ಎಂಬ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಮೊದಲು ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದ ಸರ್ಕಾರ, ಇದೀತ ಈ ಬಗ್ಗೆ ಯೋಚನೆ ಮಾಡುತ್ತಿದೆ.
ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಕಾರಣವೂ ಕೂಡಾ ಇದೆ. ಕಳೆದ ಡಿಸೆಂಬರ್.19 ರಂದು ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಮಂಗಳೂರಿನಲ್ಲಿ ತೀವ್ರ ಪ್ರತಿಭಟನೆ ನಡೆಯಿತು. ಕೇಂದ್ರ ಸರ್ಕಾರದ ವಿರುದ್ಧ ಶಾಂತಿಯುತ ಹೋರಾಟ ದಿಢೀರ್ ಉಗ್ರ ಸ್ವರೂಪ ಪಡೆದುಕೊಂಡಿತು. ಪೊಲೀಸರ ಮೇಲೆ ಮುಗಿಬಿದ್ದ ಉದ್ರಿಕ್ತರ ಗುಂಪು ಏಕಾಏಕಿ ಕಲ್ಲುತೂರಾಟ ನಡೆಸಿತು. ನೋಡ ನೋಡುತ್ತಿದ್ದಂತೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಮಂಗಳೂರು ಪೊಲೀಸರು ಬಿಡುಗಡೆ ಮಾಡಿರುವ ಪೋಟೋ ಹಾಗೂ ಸಿಸಿ ಕ್ಯಾಮರಾ ದೃಶ್ಯಾವಳಿಗಳು ಹೊಸ ಅನುಮಾನಗಳನ್ನು ಹುಟ್ಟು ಹಾಕುತ್ತಿವೆ.

ಇಬ್ಬರು ಮೃತ ಕುಟುಂಬಕ್ಕೆ ಸರ್ಕಾರದಿಂದಿಲ್ಲ ಪರಿಹಾರ?
ಮಂಗಳೂರಿನಲ್ಲಿ ನಡೆದ ಗೋಲಿಬಾರ್ ನಲ್ಲಿ ನೌಸಿನ್ ಹಾಗೂ ಜಲೀಲ್ ಎಂಬ ಇಬ್ಬರು ಯುವಕರು ಮೃತಪಟ್ಟಿದ್ದರು. ಇಬ್ಬರ ಕುಟುಂಬಕ್ಕೂ ರಾಜ್ಯ ಸರ್ಕಾರ ಮೊದಲು ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿತ್ತು. ಆದರೆ, ಈಗ ಇಬ್ಬರ ಕುಟುಂಬಕ್ಕೆ ಸದ್ಯ ಸರ್ಕಾರದಿಂದ ಪರಿಹಾರ ನೀಡುವುದಿಲ್ಲ ಎಂದು ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸರ್ಕಾರದ ನಿರ್ಧಾರಕ್ಕೆ ಸಿಎಂ ಬಿಎಸ್ ವೈ ಸ್ಪಷ್ಟನೆ
ಇಬ್ಬರು ಮೃತರ ಕುಟುಂಬಕ್ಕೆ ಸದ್ಯ ಪರಿಹಾರ ನೀಡದಿರಲು ತೀರ್ಮಾನಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಅದಕ್ಕೆ ಕಾರಣವನ್ನು ತಿಳಿಸಿದ್ದಾರೆ. ಮಂಗಳೂರಿನಲ್ಲಿ ಅವರು ಮಾತನಾಡಿದ್ದು, ಗಲಭೆ ಸೃಷ್ಟಿಸುವಲ್ಲಿ ಮೃತರ ಕೈವಾಡ ಇದೆಯೇ ಇಲ್ಲವೇ ಎಂಬ ಬಗ್ಗೆ ಸ್ಪಷ್ಟವಾಗಬೇಕು. ನಂತರವಷ್ಟೇ ಪರಿಹಾರ ನೀಡುವ ಬಗ್ಗೆ ಸರ್ಕಾರ ನಿರ್ಧರಿಸಲಿದೆ ಎಂದು ಹೇಳಿದ್ದಾರೆ.

ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ
ಕಳೆದ ಡಿಸೆಂಬರ್.19ರಂದು ನಡೆದ ಗಲಭೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ವಿಡಿಯೋ ಹಾಗೂ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಉದ್ರಿಕ್ತರ ಗುಂಪು ಮೊದಲೇ ಎಲ್ಲ ತಯಾರಿಗಳನ್ನು ಮಾಡಿಕೊಂಡಿರುವ ಅನುಮಾನ ಹುಟ್ಟಿಕೊಂಡಿದೆ. ಈ ಸಿಸಿ ಕ್ಯಾಮರಾ ದೃಶ್ಯಾವಳಿ ಆಧರಿಸಿ ಮೊದಲು ತನಿಖೆ ನಡೆಸಲಾಗುತ್ತದೆ. ಗಲಭೆ ಸೃಷ್ಟಿಸುವಲ್ಲಿ ಮೃತರ ಪಾತ್ರವಿಲ್ಲ ಎಂಬುದು ಸ್ಪಷ್ಟವಾದರೆ ಮಾತ್ರ ಸರ್ಕಾರದಿಂದ ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
| Array |
ಕಲ್ಲು ತೂರಾಟಕ್ಕೆ ಮೊದಲೇ ಹಾಕಿದ್ದರಾ ಸ್ಕೆಚ್?
ಇನ್ನು, ಮಂಗಳೂರು ಪೊಲೀಸರು ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಗೂಡ್ಸ್ ಗಾಡಿಯಲ್ಲಿ ಪ್ರತಿಭಟನಾಕಾರರು ಕಲ್ಲನ್ನು ತರಿಸಿಕೊಂಡಿದ್ದು ಬಯಲಾಗಿದೆ. ಗೂಡ್ಸ್ ಗಾಡಿಯಲ್ಲಿ ಕಲ್ಲಿನ ಮೂಟೆಗಳನ್ನು ತರಿಸಿಕೊಂಡು ಉದ್ರಿಕ್ತರು ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿದ್ದು ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲದರ ಬಗ್ಗೆ ತನಿಖೆ ನಡೆಸಿದ ನಂತರವಷ್ಟೇ ಮೃತರ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ತೀರ್ಮಾನಿಸಲು ಸರ್ಕಾರ ಮುಂದಾಗಿದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications