ಬಣ್ಣ ಬಣ್ಣದ ವಿದ್ಯುತ್ ದೀಪದ ಬೆಳಕಿನಲ್ಲಿ ಕಂಗೊಳಿಸುತ್ತಿದೆ ಮಂಗಳೂರು
ಮಂಗಳೂರು, ಅಕ್ಟೋಬರ್. 17: ದಸರಾ ಬಂತೆಂದರೆ ಮಂಗಳೂರು ನಗರದಲ್ಲಿ ಎಲ್ಲಿ ನೋಡಿದರೂ ಬೆಳಕಿನ ಚಿತ್ತಾರ. ನಗರದ ರಸ್ತೆ ಬದಿಯಲೆಲ್ಲಾ ವಿದ್ಯುತ್ ದೀಪಗಳ ರಂಗು ಮೂಡುತ್ತದೆ. ಸುಮಾರು 9 ಕಿಲೋ ಮೀಟರ್ ಉದ್ದಕ್ಕೆ ಬರೋಬ್ಬರಿ 22 ಲಕ್ಷ ಬಲ್ಬ್ಗಳು ಏಕ ಕಾಲಕ್ಕೆ ಪ್ರಕಾಶಮಾನವಾಗಿ ಬೆಳಗುತ್ತಿರುತ್ತವೆ.
ರಾತ್ರಿಯ ಹೊತ್ತು ಕಣ್ಣು ಕೋರೈಸುವ ವಿದ್ಯುತ್ ದೀಪದ ಬೆಳಕಿನಲ್ಲಿ ನಗರದ ಸೊಬಗನ್ನು ನೋಡುವುದೇ ಕಣ್ಣಿಗೆ ಹಬ್ಬ. ಈ ಸೊಬಗನ್ನು ಸವಿಯಲು ದಸರಾ ಸಂದರ್ಭ ಕಡಲನಗರಿ ಮಂಗಳೂರಿಗೆ ದೇಶ- ವಿದೇಶಗಳಿಂದ ಪ್ರವಾಸಿಗರ ದಂಡೇ ಹರಿದು ಬರುತ್ತದೆ.
ಇತ್ತೀಚೆಗೆ ಮಂಗಳೂರು ದಸರಾ ಕೂಡ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲೂ ಪ್ರಖ್ಯಾತಿ ಪಡೆಯುತ್ತಿದ್ದು, ದಸರಾ ಇಷ್ಟರ ಮಟ್ಟಿಗೆ ಖ್ಯಾತಿ ಗಳಿಸಲು ಪ್ರಮುಖ ಕಾರಣ ಇಲ್ಲಿನ ವಿದ್ಯುತ್ ದೀಪಗಳ ವರ್ಣಮಯ ಶೃಂಗಾರ.
ಮಂಗಳೂರು ದಸರಾ ನಡೆಯುತ್ತಿರುವ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ ಸಂಜೆಯಾಗುತ್ತಿದ್ದಂತೆ ಭೂಲೋಕದ ಸ್ವರ್ಗದಂತೆ ಕಂಗೊಳಿಸುತ್ತದೆ. ನಗರದ ಸುಮಾರು 9 ಕಿಲೋ ಮೀಟರ್ ರಸ್ತೆಯುದ್ದಕ್ಕೂ ಶ್ರೀ ಕ್ಷೇತ್ರದ ವತಿಯಿಂದ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಮುಂದೆ ಓದಿ...

22 ಲಕ್ಷ ಬಲ್ಬ್ಗಳ ಬಳಕೆ
ಈ ಬಾರಿಯ ದಸರಾಕ್ಕೆ 22 ಲಕ್ಷ ಬಲ್ಬ್ಗಳನ್ನು ಶೃಂಗಾರಕ್ಕಾಗಿ ಬಳಸಲಾಗಿದೆ. ಕಳೆದ ಬಾರಿಗಿಂತ 5 ಲಕ್ಷ ಬಲ್ಬ್ಗಳ ಸಂಖ್ಯೆ ಹೆಚ್ಚಿಸಲಾಗಿದೆ. ಮಾರ್ಗದ ಇಕ್ಕೆಲಗಳಲ್ಲಿರುವ ಕಟ್ಟಡ, ಅಂಗಡಿ-ಮುಂಗಟ್ಟುಗಳು ಈ ವೈಭವಕ್ಕೆ ಮೆರುಗು ನೀಡಲು ವಿದ್ಯುತ್ ದೀಪಗಳಿಂದ ಅಲಂಕಾರಗೊಳ್ಳುತ್ತಿವೆ.

ಮಧುವಣಗಿತ್ತಿಯಂತೆ ಅಲಂಕಾರ
ದಸರಾ ಹಿನ್ನೆಲೆಯಲ್ಲಿ ನವರಾತ್ರಿ ಆರಂಭಗೊಂಡ ದಿನದಿಂದ 9 ದಿನಗಳ ಕಾಲ ಸಂಜೆ 6 ಗಂಟೆಯಾಗುತ್ತಿದ್ದಂತೆ ಕಡಲತಡಿಯ ನಗರ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತದೆ. ಸದಾ ಜನಜಂಗುಳಿ ವಾಹನಗಳಿಂದ ತುಂಬಿರುವ ನಗರದ ರಸ್ತೆಗಳೆಲ್ಲಾ ಈ ಸಂದರ್ಭದಲ್ಲಿ ಬೆಳಕಿನ ಲತೆಗಳಿಂದ ಮಧುವಣಗಿತ್ತಿಯಂತೆ ಅಲಂಕೃತಗೊಳ್ಳುತ್ತವೆ.

ಬೆಳಕಿನ ಸಂಯೋಜನೆ
ದೇಶದ ಬೇರೆಲ್ಲೂ ಇಷ್ಟು ಪ್ರಮಾಣದಲ್ಲಿ ಬೆಳಕಿನ ಸಂಯೋಜನೆ ಕಾಣಸಿಗದು. ಸರ್ಕಾರದ ಅಥವಾ ಇನ್ಯಾವುದೇ ಅನುದಾನ ಇಲ್ಲದೆ ಶ್ರೀ ಕ್ಷೇತ್ರ ಕುದ್ರೋಳಿಯ ವತಿಯಿಂದಲೇ ಈ ಬೆಳಕಿನ ಸಂಯೋಜನೆಯನ್ನು ಮಾಡಲಾಗುವುದು ಇಲ್ಲಿನ ವಿಶೇಷತೆ.

ನವದುರ್ಗೆಯರ ದರ್ಶನ
ಕುದ್ರೋಳಿಯ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾದ ನವದುರ್ಗೆಯರ ಮೂರ್ತಿಗಳು ವಿಶೇಷ ಮೆರಗು ನೀಡುತ್ತಿವೆ. ಒಟ್ಟಿನಲ್ಲಿ ಮಂಗಳೂರು ದಸರಾದ ವಿಜೃಂಭಣೆ ವಿಕ್ಷಿಸಲು ಜನಸಾಗರವೇ ಹರಿದು ಬರುತ್ತಿದೆ. ಕುದ್ರೋಳಿ ದೇವಾಲಯದಲ್ಲಿ ನವದುರ್ಗೆಯರ ದರ್ಶನ ಪಡೆಯುವುದೇ ಕಣ್ಣಿಗೆ ಹಬ್ಬವಾಗಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications