'ಗುಜರಾತಿಗಿಂತ ಮಂಗಳೂರು ಅಭಿವೃದ್ಧಿ ಕಂಡಿದೆ'
ಮಂಗಳೂರು, ಏ.15: ಬಿಜೆಪಿ ಅವರು ಗುಜರಾತ್ ಮಾದರಿ ಅಭಿವೃದ್ಧಿ ಕಾಣಲು ಮೋದಿ ಪ್ರಧಾನಿಯಾಗಬೇಕು ಎಂದು ಎಲ್ಲೆಡೆ ಹೇಳುತ್ತಿದ್ದಾರೆ. ಆದರೆ, ಗುಜರಾತಿಗೆ ಹೋಲಿಸಿದರೆ ನಮ್ಮ ಮಂಗಳೂರು ಸಾಕಷ್ಟು ಮುಂದಿದೆ ಎಂದು ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಅಭಿಪ್ರಾಯಪಟ್ಟಿದ್ದಾರೆ.
ದಕ್ಷಿಣ ಕನ್ನಡದ ಕಾಂಗ್ರೆಸ್ ಅಭ್ಯರ್ಥಿ ಬಿ.ಜನಾರ್ದನ ಪೂಜಾರಿ ಪರ ಮತಯಾಚನೆ ನಡೆಸಲು ಬಂದಿರುವ ಆಸ್ಕರ್ ಫರ್ನಾಂಡೀಸ್ ಅವರು ಮಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿ ಬಗ್ಗೆ ಮಾತನಾಡಿದರು.
ಮಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ, ವಿಮಾನ ನಿಲ್ದಾಣ, ಬಂದರು, ರೈಲ್ವೆ ಹಾಗೂ ಇನ್ನಿತರ ವಿಭಾಗಗಳಲ್ಲಿ ಅಭಿವೃದ್ಧಿ ಕಾಣಲು ಕಾಂಗ್ರೆಸ್ ಸರ್ಕಾರ ಕಾರಣ. ಪೂಜಾರಿ ಅವರನ್ನು ಗೆಲ್ಲಿಸಿದರೆ ಇದೆಲ್ಲವೂ ಮುಂದುವರೆಯಲಿದೆ. ಇತರೆ ಪಕ್ಷದವರು ಗೆದ್ದ ಮೇಲೆ ಕ್ಷೇತ್ರಕ್ಕೆ ಹಿಂತಿರುಗುವುದೇ ಅನುಮಾನ ಎಂದು ಆಸ್ಕರ್ ಫರ್ನಾಂಡೀಸ್ ಹೇಳಿದರು.
ಗೋವಾದ ಮಾಜಿ ಮುಖ್ಯಮಂತ್ರಿ ಲೂಜಿನ್ಹೊ ಫಲೆರೋ ಅವರ ಜತೆಗೂಡಿ ಕಾಂಗ್ರೆಸ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಅವರ ಜಯಂತಿ ಆಚರಿಸಿದರು.ಫೆಲೆರೋ ಅವರು ಮಾತನಾಡಿ ಗುಜರಾತ್ ರಾಜ್ಯ ಶಿಕ್ಷಣ, ಆರೋಗ್ಯ, ಕೃಷಿ ಇನ್ನಿತರ ಕ್ಷೇತ್ರಗಳಲ್ಲಿ ಹಿಂದುಳಿದಿದೆ. ಕೇವಲ ಕೈಗಾರಿಕಾ ಅಭಿವೃದ್ಧಿಯನ್ನು ಅಭಿವೃದ್ಧಿ ಎನ್ನುವುದಾದರೆ ಕರ್ನಾಟಕವೇ ಹೆಚ್ಚಿನ ಅಭಿವೃದ್ಧಿ ಕಂಡಿದೆ ಎಂದರು.
ಜೆಆರ್ ಲೊಬೊ, ಮೊಯಿದ್ದೀನ್ ಬಾವಾ, ಐವಾನ್ ಡಿಸೋಜ, ಕೆ ತಾರಾನಾಥ್ ಶೆಟ್ಟಿ, ಕಾಂಗ್ರೆಸ್ ವಕ್ತಾರರಾದ ಇಬ್ರಾಹಿಂ ಕೊಡಿಯಾಳ್, ಜಿಲ್ಲಾ ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷ ಸುರೇಶ್ ಬಳ್ಳಾಲ, ಸುನಿಲ್ ಖಾಂಡಕ್ ಇನ್ನಿತರ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು. [ಚಿತ್ರಗಳು: ಐಸಾಕ್ ರಿಚರ್ಡ್]

ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಅಭಿಪ್ರಾಯ
ಗುಜರಾತಿಗೆ ಹೋಲಿಸಿದರೆ ನಮ್ಮ ಮಂಗಳೂರು ಸಾಕಷ್ಟು ಮುಂದಿದೆ ಎಂದು ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿ
ಮಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ, ವಿಮಾನ ನಿಲ್ದಾಣ, ಬಂದರು, ರೈಲ್ವೆ ಹಾಗೂ ಇನ್ನಿತರ ವಿಭಾಗಗಳಲ್ಲಿ ಅಭಿವೃದ್ಧಿ ಕಾಣಲು ಕಾಂಗ್ರೆಸ್ ಸರ್ಕಾರ ಕಾರಣ. ಪೂಜಾರಿ ಅವರನ್ನು ಗೆಲ್ಲಿಸಿದರೆ ಇದೆಲ್ಲವೂ ಮುಂದುವರೆಯಲಿದೆ.

ಡಾ.ಅಂಬೇಡ್ಕರ್ ಅವರ ಜಯಂತಿ
ಗೋವಾದ ಮಾಜಿ ಮುಖ್ಯಮಂತ್ರಿ ಲೂಜಿನ್ಹೊ ಫಲೆರೋ ಅವರ ಜತೆಗೂಡಿ ಕಾಂಗ್ರೆಸ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಅವರ ಜಯಂತಿ ಆಚರಿಸಿದರು.

ಕರ್ನಾಟಕವೇ ಹೆಚ್ಚಿನ ಅಭಿವೃದ್ಧಿ ಕಂಡಿದೆ
ಫೆಲೆರೋ ಅವರು ಮಾತನಾಡಿ ಗುಜರಾತ್ ರಾಜ್ಯ ಶಿಕ್ಷಣ, ಆರೋಗ್ಯ, ಕೃಷಿ ಇನ್ನಿತರ ಕ್ಷೇತ್ರಗಳಲ್ಲಿ ಹಿಂದುಳಿದಿದೆ. ಕೇವಲ ಕೈಗಾರಿಕಾ ಅಭಿವೃದ್ಧಿಯನ್ನು ಅಭಿವೃದ್ಧಿ ಎನ್ನುವುದಾದರೆ ಕರ್ನಾಟಕವೇ ಹೆಚ್ಚಿನ ಅಭಿವೃದ್ಧಿ ಕಂಡಿದೆ ಎಂದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications