Get Updates
Get notified of breaking news, exclusive insights, and must-see stories!

ಹಲ್ಲೆಗೊಳಗಾದ ಮುಸ್ಲಿಂ ಯುವಕ ಮಾಡಿದ ತಪ್ಪೇನು ಗೊತ್ತಾ?

ಮಂಗಳೂರು, ಆಗಸ್ಟ್, 25 : ಅನ್ಯ ಕೋಮಿನ ಇಬ್ಬರು ಸಹೋದ್ಯೋಗಿಗಳ ಮಾತುಕತೆ ನಗರದಲ್ಲಿ ಭಾರೀ ಸಂಘರ್ಷಕ್ಕೆ ಕಾರಣವಾಗಿದ್ದು, ಕೆಲವು ಘಂಟೆಗಳ ಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.

ಮುಸ್ಲಿಂ ಯುವಕ ತನ್ನ ಸಹೋದ್ಯೋಗಿ ಹಿಂದೂ ಮಹಿಳೆಯೊಂದಿಗೆ ಮಾತಿಗಿಳಿರುವುದನ್ನು ಕಂಡ ಭಜರಂಗ ದಳದ 13 ಯುವಕರ ತಂಡ ಯುವಕನ ಮೇಲೆ ದಾಳಿ ನಡೆಸಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಸಂಬಂಧ ಯುವಕರನ್ನು ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.[ಮತಾಂತರ ಏಕೆ? ಈ ಬಗ್ಗೆ ಕಾನೂನು ಏನು ಹೇಳುತ್ತದೆ?]

Mangalore : Muslim man stripped, beaten for talking to Hindu girl

ಮಂಗಳೂರಿನ ಕೂಳೂರು ನಿವಾಸಿಯಾದ ಶಕೀರ್ ಮತ್ತು ಮೂಡಿಗೆರೆ ನಿವಾಸಿಯಾದ ಯುವತಿ ಇಬ್ಬರು ಸೂಪರ್‌ ಮಾರ್ಕೆಟಿಂಗ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸೋಮವಾರ ಇವರಿಬ್ಬರನ್ನು ಕಾರಿನಲ್ಲಿ ಕಂಡ ಭಜರಂಗ ದಳದ ಕಾರ್ಯಕರ್ತರು ಆತನನ್ನು ತಡೆದು ಅರೆಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ.

ಮಂಗಳೂರಿನ ಅತ್ತಾವರ ಬಾಬು ಗಡ್ಡೆಯಲ್ಲಿ ಈ ಘಟನೆ ನಡೆದಿದ್ದು, ಶಕೀರ್ ಮತ್ತು ಯುವತಿಯ ಕಾರನ್ನು ಹಿಂಬಾಲಿಸಿದ ಹಿಂದೂ ಸಂಘಟನಾ ಕಾರ್ಯಕರ್ತರು ಅವರಿಬ್ಬರಿದ್ದ ಕಾರು ಅತ್ತಾವರ ಬಾಬುಗುಡ್ಡೆ ಹತ್ತಿರ ಬರುತ್ತಿದ್ದಂತೆ ದಾರಿಯಲ್ಲಿ ಅಡ್ಡಗಟ್ಟಿ ದಾಂಧಲೆ ನಡೆಸಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆದ ಪಾಂಡೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಯುವಕ ಯುವತಿಯರಿಂದ ಹೇಳಿಕೆ ಪಡೆದದ ಪೊಲೀಸರು ತನಿಖೆ ಆರಂಭಿಸಿದ್ದು, ನಗರದಲ್ಲಿ ಅಶಾಂತಿ ನಿರ್ಮಿಸಿ ತಲೆಮರೆಸಿಕೊಂಡ ಭಜರಂಗ ದಳದ ಕೆಲವು ಯುವಕರ ಹುಡುಗಾಟದಲ್ಲಿ ತೊಡಗಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+