ನೇತ್ರಾವತಿಗೆ ಇಳಿದ ಮಂಗಳೂರು ವಿದ್ಯಾರ್ಥಿ ನೀರುಪಾಲು
ಬಂಟ್ವಾಳ, ಸೆಪ್ಟೆಂಬರ್ 6: ಗಣೇಶ ಚತುರ್ಥಿಯ ರಜೆ ಕಳೆಯಲು ಬಂಟ್ವಾಳಕ್ಕೆ ಬಂದಿದ್ದ ಮಂಗಳೂರಿನ ವಿದ್ಯಾರ್ಥಿ ನೇತ್ರಾವತಿ ನೀರಿನ ಆಳ ಅರಿಯದೆ, ಮುಳುಗಿ ಮೃತಪಟ್ಟ ಘಟನೆ ಇಲ್ಲಿನ ಕೈಕುಂಜೆ ರೈಲ್ವೆ ಸೇತುವೆ ಬಳಿ ಸೋಮವಾರ ನಡೆದಿದೆ.
ಮಂಗಳೂರು ತಾಲೂಕಿನ ನಂತೂರು ನಿವಾಸಿ ರಜನೀಕಾಂತ್(24) ಮೃತ ವಿದ್ಯಾರ್ಥಿ. ಮಂಗಳೂರು- ವಳಚ್ಚಿಲ್ ಪದವು ಶ್ರೀನಿವಾಸ್ ಕಾಲೇಜಿನಲ್ಲಿ ದ್ವಿತೀಯ ಬಿಬಿಎಂ ವ್ಯಾಸಂಗ ಮಾಡುತ್ತಿದ್ದ ಈತ, ಗಣೇಶ ಚತುರ್ಥಿ ಪ್ರಯುಕ್ತ ಕಾಲೇಜಿಗೆ ರಜೆ ಇದ್ದ ಕಾರಣ ಸೋಮವಾರ ಸ್ನೇಹಿತರ ಜೊತೆ ರಜಾ ಕಳೆಯಲು ಬಂಟ್ವಾಳಕ್ಕೆ ಬಂದಿದ್ದ.[ಎತ್ತಿನಹೊಳೆ: ಪಶ್ಚಿಮ ಘಟ್ಟದ ರಕ್ಷಣೆಗಾಗಿ ಯುನೆಸ್ಕೋಗೆ ಆಗ್ರಹ]

ಈ ಸಂದರ್ಭದಲ್ಲಿ ಸ್ಥಳೀಯ ಇಬ್ಬರು ಸ್ನೇಹಿತರ ಜತೆಗೂಡಿ ಮೂವರು ಕೈಕುಂಜೆ ರೈಲ್ವೆ ಸೇತುವೆ ಸಮೀಪ ನೇತ್ರಾವತಿ ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದರು. ಈಜು ಗೊತ್ತಿಲ್ಲದಿದ್ದರೂ ನೀರಿಗೆ ಇಳಿದಿದ್ದ ಈತ ನದಿಯ ಆಳ ತಿಳಿಯದೆ ಮುಳುಗಿ ಮೃತಪಟ್ಟಿದ್ದಾನೆ. ಜೊತೆಗಿದ್ದ ಸ್ನೇಹಿತರು ರಕ್ಷಿಸಲು ಪ್ರಯತ್ನಿಸಿದರೂ ಸಫಲರಾಗಲಿಲ್ಲ.
ಅವಘಡ ಸಂಭವಿಸಿದ ಸುದ್ದಿ ತಿಳಿಯುತ್ತಲೇ ಗೂಡಿನಬಳಿಯ ಮುಸ್ಲಿಂ ಯುವಕರು ತಕ್ಷಣ ಧಾವಿಸಿದ್ದು, ನೀರಿಗೆ ಧುಮುಕಿದ್ದಾರೆ. ಎಂಕೆ ರೋಡ್ ನಿವಾಸಿ ಮುಹಮ್ಮದ್ ಯಾನೆ ಮೊಮ್ಮು ಎಂಬವರು ಮೃತದೇಹವನ್ನು ಮೇಲೆತ್ತುವಲ್ಲಿ ಸಫಲರಾದರು. ಎಂಕೆ ರೋಡ್ ನಿವಾಸಿ ಇಬ್ರಾಹಿಂ, ಮಸೀದಿ ಬಳಿ ನಿವಾಸಿ ಚೆರಿಯಮೋನು ಕಾರ್ಯಾಚರಣೆಗೆ ಸಾಥ್ ನೀಡಿದ್ದಾರೆ.['ವೀರಪ್ಪ ಮೊಯ್ಲಿ, ಡಿವಿಎಸ್ ಗೆ ಖೇಲ್ ರತ್ನ ಪ್ರಶಸ್ತಿ ಕೊಡಿ']

ಮೃತದೇಹ ಮೇಲೆತ್ತಿದ ಮುಹಮ್ಮದ್ ಈ ಹಿಂದೆಯೂ ಇಂತಹ ಹಲವಾರು ಸಂದರ್ಭಗಳಲ್ಲಿ ಆಪದ್ಬಾಂಧವರಾಗಿ ಕಾರ್ಯ ನಿರ್ವಹಿಸಿರುವುದು ಸ್ಮರಣಾರ್ಹ. ಅವಘಡ ಸ್ಥಳದಲ್ಲಿ ಗೂಡಿನಬಳಿ ಮುಸ್ಲಿಂ ಯುವಕರ ಕಾರ್ಯಾಚರಣೆ ಶ್ಲಾಘನೆಗೆ ಕಾರಣವಾಗಿದೆ.[ಶನಿಪೂಜೆ ವೇಳೆ ಕರ್ತವ್ಯಕ್ಕೆ ಅಡ್ಡಿ: 20 ಆರೋಪಿಗಳ ಖುಲಾಸೆ]
ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾಧಿಕಾರಿ ನಂದಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications