ಮಂಗಳೂರು: ಭೀಕರ ಅಪಘಾತಕ್ಕೆ ಮೂವರು ಬಲಿ
ಮಂಗಳೂರು, ಮೇ.12: ನಗರದ ಹೊರವಲಯದ ಸುರತ್ಕಲ್ ಸಮೀಪದ ಮುಕ್ಕ ಎಂಬಲ್ಲಿ ಸೋಮವಾರ ಬೆಳಗ್ಗೆ ಲಾರಿ ಹಾಗೂ ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ದಾರುಣವಾಗಿ ಮೃತಪಟ್ಟು, ಮಹಿಳೆಯೋರ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಮೃತ ಮೂವರಲ್ಲಿ ಇಬ್ಬರು ಮಕ್ಕಳಾಗಿದ್ದು, ಇನ್ನೋರ್ವರು ಆಟೋ ಚಾಲಕರೆಂದು ತಿಳಿದುಬಂದಿದೆ. ಘಟನೆಯಲ್ಲಿ ರಿಕ್ಷಾದಲ್ಲಿದ್ದ ಮಹಿಳೆಯೋರ್ವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಮೃತರ ಕುರಿತು ಹೆಚ್ಚಿನ ವಿವರ ಈವರೆಗೆ ಲಭ್ಯವಾಗಿಲ್ಲ.
ರಿಕ್ಷಾ ಚಾಲಕ ಉಡುಪಿ-ಮಂಗಳೂರು ಹೆದ್ದಾರಿಯಲ್ಲಿ ಚಲಿಸುತ್ತಿರುವಾಗ ಯಾವುದೇ ಸೂಚನೆ ನೀಡದೆ ತಿರುಗಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ರಿಕ್ಷಾ ಲಾರಿಯಡಿಗೆ ಸಿಲುಕಿ ಅಪ್ಪಚ್ಚಿಯಾಗಿತ್ತು. ಬಳಿಕ ಜೆಸಿಬಿಯ ಮೂಲಕ ತೆರವುಗೊಳಿಸಿ ಮೃತಪಟ್ಟವರ ದೇಹವನ್ನು ಹೊರತೆಗೆಯಲಾಯಿತು. ಘಟನೆಯ ಸಂಬಂಧ ಲಾರಿ ಚಾಲಕನನ್ನು ವಶಕ್ಕೆ ಪಡೆದಿರುವ ಸುರತ್ಕಲ್ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿದುಬಂದಿದೆ.













Click it and Unblock the Notifications