ಪ್ರತಿಷ್ಠಿತ ಒಲಿಂಪಿಯಾಡ್ ಗೆ ಮಂಗ್ಳೂರು ಹುಡುಗ ಆದಿತ್ಯ ಪ್ರಕಾಶ್
ಮಂಗಳೂರು, ಮೇ 23 : ಮಂಗಳೂರಿನ ಸೆಂಟರ್ ಫಾರ್ ಅಡ್ವಾನ್ಸ್ ಡ್ ಲರ್ನಿಂಗ್ (ಸಿಎಫ್ ಎಎಲ್) ನಲ್ಲಿ ತರಬೇತಿ ಪಡೆದ ಆದಿತ್ಯ ಪ್ರಕಾಶ್ ಈಗ ಅಂತಾರಾಷ್ಟ್ರೀಯ ಮ್ಯಾತಮೆಟಿಕ್ಸ್ ಒಲಿಂಪಿಯಾಡ್ (ಐಎಂಒ)-2017ಗೆ ರಾಜ್ಯದಿಂದ ಆಯ್ಕೆಯಾಗಿದ್ದಾರೆ.
ಜುಲೈ 17ರಿಂದ 23ರ ವರೆಗೆ ಬ್ರೆಜಿಲ್ ನ ರಿಯೊ ಡಿ ಜನೈರೋದಲ್ಲಿ ಈ ಸ್ಪರ್ಧೆ ನಡೆಯಲಿದ್ದು ಗಣಿತಕ್ಕೆ ಸಂಬಂಧಪಟ್ಟಂತೆ ಜಾಗತಿಕವಾಗಿ ನಡೆಯುವ ಈ ಸ್ಪರ್ಧೆಯಲ್ಲಿ ಸುಮಾರು 100 ದೇಶಗಳಿಂದ 400 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಸ್ಪರ್ಧೆಯ ಆಯ್ಕೆಯ ಕುರಿತಂತೆ ಪ್ರಥಮ ಹಂತವಾಗಿ ಸುಮಾರು 50,000 ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಆಯ್ಕೆಯಾದ ಸುಮಾರು 900 ವಿದ್ಯಾರ್ಥಿಗಳನ್ನು 2ನೇ ಹಂತಕ್ಕೆ ಆಯ್ಕೆ ಮಾಡಲಾಗಿತ್ತು.
3ನೇ ಹಂತದಲ್ಲಿ 35ರಿಂದ 50 ವಿದ್ಯಾರ್ಥಿಗಳನ್ನು ಹೋಮಿ ಭಾಭಾ ಸೆಂಟರ್ ಫಾರ್ ಸೈನ್ಸ್ ಎಜುಕೇಶನ್ ಆಯ್ಕೆ ಮಾಡಿದ್ದು, ಅದರಲ್ಲಿ 6 ಮಂದಿಯನ್ನು ಐಎಂಒಗೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಪ್ರೋಗ್ರಾಮ್ ಕೊ-ಆರ್ಡಿನೇಟರ್ ಸೆವ್ರಿನ್ ರೊಸಾರಿಯೊ ತಿಳಿಸಿದ್ದಾರೆ.

ಆದಿತ್ಯ ಪ್ರಕಾಶ್ ತನ್ನದೇ ಆಸಕ್ತಿಯಿಂದ ಸಿಎಫ್ ಎಎಲ್ ಕೋಚಿಂಗ್ ಸೆಂಟರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಪ್ರಸ್ತುತ ಜಪಾನ್ನಲ್ಲಿ ನಡೆಯುತ್ತಿರುವ ಫಕುರಾ ತರಬೇತಿಯಲ್ಲಿ ಭಾಗವಹಿಸಿದ್ದು, ಐಎಂಒಗೆ ಆಯ್ಕೆಯಾಗಿರುವ ಕ್ರೆಡಿಟ್ ಸಿಎಫ್ ಎಎಲ್ ಸಲ್ಲಬೇಕು ಎಂದು ಆದಿತ್ಯ ಪ್ರಕಾಶ್ ತಂದೆ, ಕಾರ್ಪೊರೇಶನ್ ಬ್ಯಾಂಕಿನ ಅಧಿಕಾರಿ ಓಂಪ್ರಕಾಶ್ ಬನ್ವಾಲ್ ಸಂತಸ ವ್ಯಕ್ತಪಡಿಸಿದರು.
ಸಿಎಫ್ ಎಎಲ್ ನ ಗಣಿತ ಪ್ರಾಧ್ಯಾಪಕ ಡಾ. ಶ್ರೀಕಾಂತ್ ಪೈ ಮಾತನಾಡಿ, "ಐಎಂಒಗೆ ಆಯ್ಕೆಯಾಗಿರುವ ಆದಿತ್ಯ ಅವರು ಸದಾ ಭಿನ್ನವಾಗಿ ಯೋಚಿಸುವ ವಿದ್ಯಾರ್ಥಿ. ಅವರು ಗಣಿತದ ಯಾವುದೇ ಸಮಸ್ಯೆಯನ್ನು ತತಕ್ಷಣದಲ್ಲಿ ಪರಿಹರಿಸುತ್ತಾರೆ.
ಈ ಬಾರಿ ಆದಿತ್ಯ ಪ್ರಕಾಶ್ ಚಿನ್ನ ಗೆಲ್ಲುವ ಪೂರ್ಣ ವಿಶ್ವಾಸವಿದೆ. ಜಗತ್ತಿನಲ್ಲಿ ಪ್ರಸ್ತುತ ಇರುವ ಪ್ರತಿಷ್ಠಿತ ಗಣಿತ ತಜ್ಞರೆಲ್ಲರೂ ಕೂಡ ಐಎಂಒಗೆ ಆಯ್ಕೆಯಾದವರು ಎಂಬುದು ವಿಶೇಷವಾಗಿದೆ" ಎಂದರು.
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ?












Click it and Unblock the Notifications