ಬೆಂಕಿ ಪೊಟ್ಟಣದ ಕಡ್ಡಿ ಎಣಿಸುವಂತೆ ರ್ಯಾಗ್ ಮಾಡಿದ ಸೀನಿಯರ್ಸ್ ವಿದ್ಯಾರ್ಥಿಗಳ ಬಂಧನ
ಮಂಗಳೂರು, ಫೆಬ್ರವರಿ 12: ದಕ್ಷಿಣ ಕನ್ನಡ ಜಿಲ್ಲೆಯ ದೇರಳಕಟ್ಟೆಯ ಕಣಚೂರು ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಕಾಲೇಜಿನ ಮೊದಲ ವರ್ಷದ ಫಿಸಿಯೋಥೆರಪಿ ವಿದ್ಯಾರ್ಥಿಗಳಿಗೆ ಅದೇ ಕಾಲೇಜಿನ ಸೀನಿಯರ್ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿದ ಆರೋಪದಲ್ಲಿ 11 ಮಂದಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಕೇರಳ ಕ್ಯಾಲಿಕಟ್ ಪದಿಯಾಕೆರೆ ನಿವಾಸಿ ಮಹಮ್ಮದ್ ಶಮೊಸ್(19), ಕೊಟ್ಟಾಯಂ ಕಾನಕರಿ ನಿವಾಸಿ ಅಕ್ಷಯ್(19), ಕೊಟ್ಟಾಯಂ ಪುಣ್ಣತೊರ ಈಸ್ಟ್ ನಿವಾಸಿ ರೋಬಿನ್ ಬಿಜು(20), ಕಾಸರಗೋಡು ಆನಂದಾಶ್ರಮ ಅಬ್ದುಲ್ ಅನನಾಸ್(21), ಕಾಸರಗೋಡು ಚಿಟ್ಟಾರಿಕಲ್ ನಿವಾಸಿ ಜೇಫಿನ್ ರೋಯಿಚನ್(19), ಕೊಟ್ಟಾಯಂ ಎಡೆಯಾರಿ ಅಲ್ವಿನ್ ಜೋಯ್(19), ಕೊಟ್ಟಾಯಂ ಜೆರೋನ್ ಸಿರಿಲ್(19), ಪತ್ತನಂತಿಟ್ಟ ಮಹಮ್ಮದ್ ಸಿರಾಜ್(19), ಕ್ಯಾಲಿಕಟ್ ಆಸಿನ್ ಬಾಬು(19), ಚೋಲೆಕಲ್ ಮಂಜೇರಿ ಜುಬಿನ್ ಮೆಹರೂಫ್(21), ಮಲಪುರ ಅಬ್ದುಲ್ ಬಾಸಿತ್(19) ಬಂಧಿತರಾಗಿದ್ದಾರೆ.
ಬಂಧಿತ ಆರೋಪಿಗಳು ಜೂನಿಯರ್ ವಿದ್ಯಾರ್ಥಿಗಳನ್ನು ಶೇವಿಂಗ್, ಕಟ್ಟಿಂಗ್ ಮಾಡಿಸಬೇಕು, ಬೆಂಕಿ ಪೊಟ್ಟಣ ಕಡ್ಡಿ ಎಣಿಸಬೇಕು, ಬೆಂಕಿ ಕಡ್ಡಿಯಿಂದ ರೂಮನ್ನು ಅಳೆಯಬೇಕು ಎಂಬಿತ್ಯಾದಿ ಮಾಡಿದ್ದಲ್ಲದೆ, ವಿರೋಧ ಮಾಡಿದ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲದೆ ಈ ವಿಷಯ ಯಾರಿಗಾದರೂ ಹೇಳಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ.

ಇದರಿಂದ ನೊಂದ ಐವರು ವಿದ್ಯಾರ್ಥಿಗಳು ಕಾಲೇಜು ಆಡಳಿತ ಮಂಡಳಿಗೆ ವಿಷಯ ತಿಳಿಸಿದ್ದು, ಅವರ ನಿರ್ದೇಶನ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.
ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಡಿಸಿಪಿಗಳಾದ ಹರಿರಾಂ ಶಂಕರ್, ವಿನಯ್ ಗಾಂವ್ಕರ್, ಎಸಿಪಿ ರಂಜಿತ್ ನಿರ್ದೇಶನ ಮೇರೆಗೆ ಉಳ್ಳಾಲ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ದೂರು ನೀಡಿ
ಕಾಲೇಜಿನಲ್ಲಿ ರ್ಯಾಗಿಂಗ್ ನಡೆಯುತ್ತಿದ್ದರೆ ಶಾಲಾ ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳು ಕೂಡಲೇ ಸಂಬಂಧಪಟ್ಟ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ಕಮಿಷನರ್ ತಿಳಿಸಿದ್ದಾರೆ.
-
ಏಪ್ರಿಲ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ: 9ನೇ ತರಗತಿಯ ಪರಿಷ್ಕೃತ NCERT ಪಠ್ಯಪುಸ್ತಕ ವಿಳಂಬ, ಹೆಚ್ಚಾದ ಗೊಂದಲ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications