ಮಂಗಳೂರು: ರಾಷ್ಟ್ರೀಯ ಅಥ್ಲೆಟಿಕ್ಸ್ ಗೆ ಅದ್ದೂರಿ ಚಾಲನೆ
ಮಂಗಳೂರು, ಮೇ. 1: ಮಂಗಳೂರಿನಲ್ಲಿ ಮೇ 4 ರವರೆಗೆ ಕ್ರೀಡಾಪಟುಗಳ ಕಲರವ. 19ನೇ ಫೆಡರೇಶನ್ ಕಪ್ ರಾಷ್ಟ್ರೀಯ ಸೀನಿಯರ್ ಅಥ್ಲೆಟಿಕ್ಸ್ ಚಾಂಪಿಯಶಿಪ್ ಗೆ ಚಾಲನೆ ದೊರೆತಿದ್ದು ಕ್ರೀಡಾ ಜಗತ್ತು ಅನಾವರಣಗೊಂಡಿದೆ.
ಬಲೂನುಗಳನ್ನು ಆಗಸಕ್ಕೆ ಹಾರಿ ಬಿಡುವ ಸಚಿವ ದೇಶಪಾಂಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕ್ರೀಡೆಗೆ ಉತ್ತೇಜನ ನೀಡಲು ರಾಜ್ಯ ಸರ್ಕಾರ ಮಂಗಳೂರಿನಲ್ಲಿ ಈ ರಾಷ್ಟ್ರೀಯ ಕ್ರೀಡಾಕೂಟ ಆಯೋಜನೆಗೆ ಸಹಕಾರ ನೀಡಿದೆ ಎಂದು ಹೇಳಿದರು.[ಚಾಂಪಿಯನ್ ಷಿಪ್ ವಿಶೇಷಗಳೇನು]

ಬಾಲಿವುಡ್ ನಟ ಸುನೀಲ್ ಶೆಟ್ಟಿ ಮಾತನಾಡಿ, ತುಳುನಾಡಿನ ಮಗನಾಗಿರುವ ನಾನು ಇಂತಹ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದಕ್ಕೆ ನನಗೆ ಹೆಮ್ಮೆಯಾಗುತ್ತಿದೆ. ಕ್ರೀಡಾ ರಂಗದಲ್ಲಿ ಮಂಗಳೂರಿನ ಕೀರ್ತಿ ಇನ್ನಷ್ಟು ಎತ್ತರಕ್ಕೇರಲಿ ಎಂದರು.
ರಾಜ್ಯದ ಕ್ರೀಡಾ ಮತ್ತು ಯುವಜನ ಸೇವಾ ಸಬಲೀಕರಣ ಸಚಿವ ಅಭಯಚಂದ್ರ ಜೈನ್, ಅರಣ್ಯ ಸಚಿವ ಬಿ.ರಮಾನಾಥ ರೈ, ಆರೋಗ್ಯ ಸಚಿವ ಯು.ಟಿ.ಖಾದರ್, ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಹಾಜರಿದ್ದರು.

ಮಂಗಳೂರು ದಕ್ಷಿಣ ಶಾಸಕ ಜೆ.ಆರ್.ಲೋಬೋ, ಕರ್ನಾಟಕ ಅಮೆಚೂರ್ ಅಥ್ಲೆಟಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಅಥ್ಲೆಟಿಕ್ಸ್ ಫೆಡರೇಶನ್ ಅಫ್ ಇಂಡಿಯಾದ ಅಧ್ಯಕ್ಷ ಆದಿಲ್ ಜೆ.ಸುಮಾರಿವಾಲಾ, ದಕ್ಷಿಣ ಕನ್ನಡ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಶನ್ನಿನ ಅಧ್ಯಕ್ಷ ಮಂಜುನಾಥ ಭಂಡಾರಿ, ಯುವ ಸಬಲೀಕರಣ- ಕ್ರೀಡಾ ಇಲಾಖೆ ನಿರ್ದೇಶಕ ಎಚ್.ಎಸ್.ವೆಂಕಟೇಶ್, ಶಾಸಕ ಮೊಯಿದ್ದೀನ್ ಬಾವಾ, ವಿಧಾನ ಪರಿಷತ್ ಸದಸ್ಯ ಐವನ್ ಡಿ'ಸೋಜಾ, ಮಂಗಳೂರು ಮಹಾನಗರಪಾಲಿಕೆ ಮೇಯರ್ ಜೆಸಿಂತಾ ಇಪಸ್ಥಿತರಿದ್ದರು.
ಕ್ರೀಡಾಕೂಟದ ಉದ್ಘಾಟನೆಗಿಂತ ಮೊದಲು ಆಕರ್ಷಕ ಮೆರವಣಿಗೆ ನಡೆಯಿತು. ಮೈಸೂರಿನ ಪೊಲೀಸ್ ಬ್ಯಾಂಡ್, ತಟ್ಟಿರಾಯ, ಕೊಂಬು-ಚೆಂಡೆ, ಬಣ್ಣದ ಕೊಡೆಗಳು, ಆಟಿ ಕಳೆಂಜ, ಕೇರಳದ ಚೆಂಡೆ, ಥೆಯ್ಯಂ, ಕುಡುಬಿ, ಯಕ್ಷಗಾನ, ಹುಲಿವೇಷ, ಕಲ್ಲಡ್ಕ ಗೊಂಬೆ, ಕೀಲು ಕುದುರೆ, ಡೊಳ್ಳು ಕುಣಿತ, ವೀರಗಾಸೆ, ನಗಾರಿ ಮುಂತಾದುವುಗಳು ಜನಮನ ಸೆಳೆದವು.

-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು












Click it and Unblock the Notifications