ಮಂಗಳೂರಿನಲ್ಲಿ ಮರ್ಮಾಂಗ ಕತ್ತರಿಸಿ ಬರ್ಬರ ಹತ್ಯೆ
ಮಂಗಳೂರು, ಫೆ.8: ನಗರದ ಎ.ಜೆ.ಆಸ್ಪತ್ರೆ ಸಮೀಪದ ಬಾರೆ ಬೈಲ್ ಎಂಬಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬನ ಮರ್ಮಾಂಗ ಕತ್ತರಿಸಿ ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಮೃತಪಟ್ಟಿರುವ ವ್ಯಕ್ತಿಯನ್ನು ಆಂಟೋನಿ ಪಿಂಟೋ (49) ಎಂದು ಗುರುತಿಸಲಾಗಿದೆ.
ಕುಂಟಿಕಾನ ಬಾರೆಬೈಲ್ ನಿವಾಸಿಯಾಗಿರುವ ಪಿಂಟೋ ಶನಿವಾರ ರಾತ್ರಿ 8 ಗಂಟೆಯಿಂದ ನಾಪತ್ತೆಯಾಗಿದ್ದು ಮನೆಯವರು ಅವರಿಗಾಗಿ ಹುಡುಕಾಡಿದ್ದರಾದರೂ ಮನೆಗೆ ಮರಳಿರಲಿಲ್ಲ. ಭಾನುವಾರ ಬೆಳಗ್ಗೆ ಮೃತ ದೇಹ ಪತ್ತೆಯಾಗಿದೆ. ಸ್ಥಳೀಯರು ಕದ್ರಿ ಠಾಣೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಪತ್ನಿ ಮತ್ತು ಮಕ್ಕಳೊಂದಿಗೆ ಬಾರೆಬೈಲ್ ನಲ್ಲಿ ವಾಸವಿದ್ದ ಆಂಟನಿ ಪಿಂಟೋ ಅವರನ್ನು ಯಾವ ಕಾರಣಕ್ಕೆ ಹೀಗೆ ಕೊಲೆ ಮಾಡಲಾಗಿದೆ ಎನ್ನುವುದು ತಿಳಿದು ಬಂದಿಲ್ಲ.ಮೇಲ್ನೋಟಕ್ಕೆ ಇದು ದ್ವೇಷದಿಂದ ನಡೆದ ಕೊಲೆ ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಕದ್ರಿ ಠಾಣಾಧಿಕಾರಿಗಳು ಹೇಳಿದ್ದಾರೆ.
ಭೀಕರ ದೃಶ್ಯ: ಮೃತ ವ್ಯಕ್ತಿ ಅಂಗಿ ಮತ್ತು ಲುಂಗಿ ಧರಿಸಿದ್ದು, ಒಳ ಉಡುಪನ್ನು ತೆಗೆದು ಮರ್ಮಾಂಗವನ್ನು ತುಂಡರಿಸಲಾಗಿದೆ. ಮೇಲ್ನೋಟಕ್ಕೆ ಇದೊಂದು ಪ್ರತೀಕಾರದ ಹತ್ಯೆ ಎನ್ನುವಂತೆ ಭಾಸವಾಗುತ್ತಿದೆ. ಶನಿವಾರ ರಾತ್ರಿಯೇ ಈ ಕೃತ್ಯ ನಡೆದಿರುವ ಸಾಧ್ಯತೆಯಿದೆ.
ನಂಬಿಗಸ್ಥರೇ ಇವರನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿ ಮೃತದೇಹವನ್ನು ಬಿಟ್ಟು ಹೋಗಿದ್ದಾರೆ ಎನ್ನುವಂತೆ ಕಾಣುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಯಕ್ಷಗಾನ ಕಲಾವಿದ ಜನಾರ್ದನ ಬಜಲ್ ನಿಧನ
ತೆಂಕತೆಟ್ಟು ಯಕ್ಷಗಾನ ಶೈಲಿಯ ಖ್ಯಾತ ಕಲಾವಿದ ಜನಾರ್ದನ ಬಜಲ್ ಅವರು ಶನಿವಾರ ಕಾಸರಗೋಡಿನ ಮಂಜೇಶ್ವರದಲ್ಲಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಪುತ್ರರು ಹಾಗೂ ನಾಲ್ವರು ಪುತ್ರಿಯರು ಸೇರಿದಂತೆ ಅಪಾರ ಅಭಿಮಾನಿ ವರ್ಗವನ್ನು ಅಗಲಿದ್ದಾರೆ.
ಬೋಲಾರ ನಾರಾಯಣ ಶೆಟ್ಟಿ ಅವರ ಗರಡಿಯಲ್ಲಿ ಬೆಳೆದ ಬಜಲ್ ಅವರು ಸುಮಾರು ನಾಲ್ಕು ದಶಕಗಳ ಕಾಲ ಯಕ್ಷಗಾನದಲ್ಲಿ ವಿವಿಧ ವೇಷಗಳನ್ನು ತೊಟ್ಟು ಪ್ರೇಕ್ಷಕರನ್ನು ರಂಜಿಸಿದ್ದರು. ಜನಾರ್ದನ ಅವರ ನಿಧನಕ್ಕೆ ಉಡುಪಿ ಯಕ್ಷಗಾನ ಕಲಾರಂಗ ಅಧ್ಯಕ್ಷ ಟಿ ಶಿವರಾಮ್ ಶೆಟ್ಟಿ ಮತ್ತಿತ್ತರ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.
-
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ












Click it and Unblock the Notifications