ಮಂಗಳೂರು : ಅಪಘಾತದಿಂದ ಹೋವರ್ ಕ್ರಾಫ್ಟ್ಗೆ ಹಾನಿ
ಮಂಗಳೂರು, ಜ.30 : ಕರಾವಳಿ ತಟರಕ್ಷಣಾ ಪಡೆಯ (ಕೋಸ್ಟ್ಗಾರ್ಡ್) ಸೇರಿದ 'ಹೋವರ್ ಕ್ರಾಫ್ಟ್-196' ವಾಹನ ಪಣಂಬೂರು ಸಮೀಪ ಅವಘಾತಕ್ಕೆ ಈಡಾಗಿದೆ. ದಿಕ್ಕುತಪ್ಪಿ ಕ್ರಾಫ್ಟ್ ಮರಕ್ಕೆ ಡಿಕ್ಕಿ ಹೊಡೆದಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಹೋವರ್ ಕ್ರಾಫ್ಟ್-196 ವಾಹನವನ್ನು ಗುರುವಾರ ಮುಂಜಾನೆ 5 ಗಂಟೆ ಸುಮಾರಿಗೆ ಸಮುದ್ರಕ್ಕೆ ಇಳಿಸುವಾಗ ಈ ಘಟನೆ ನಡೆದಿದೆ. ಕ್ರಾಫ್ಟ್ಅನ್ನು ಸಮುದ್ರಕ್ಕೆ ಇಳಿಸುವಾಗ ಬಲವಾಗಿ ಗಾಳಿ ಬೀಸಿದ್ದರಿಂದ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಪಣಂಬೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. [ಕರಾವಳಿ ರಕ್ಷಣೆಗೆ ಬಂದ ಹೋವರ್ ಕ್ರಾಫ್ಟ್]

ಎರಡು ಹೋವರ್ ಕ್ರಾಫ್ಟ್ಗಳನ್ನು ಪಣಂಬೂರು ಬೀಚ್ ಬಳಿಯ ಟವರ್ ಒಂದರ ಬಳಿ ನೆಲದ ಮೇಲೆ ನಿಲ್ಲಿಸಲಾಗಿತ್ತು. ಕೆಲವು ದಿನಗಳ ಹಿಂದೆ ಈ ಹೋವರ್ ಕ್ರಾಫ್ಟ್ಗಳನ್ನು ಕರಾವಳಿ ತಟರಕ್ಷಣಾ ಪಡೆಗೆ ಸಮರ್ಪಿಸಲಾಗಿತ್ತು. ರಾಜ್ಯಪಾಲ ವಜುಭಾಯಿ ವಾಲಾ ಇವುಗಳನ್ನು ಲೋಕಾರ್ಪಣೆ ಮಾಡಿದ್ದರು. ಸದ್ಯ ಒಂದು ಕ್ರಾಫ್ಟ್ ಹಾನಿಗೀಡಾಗಿದೆ. [ಪಣಂಬೂರು ಕಡಲ ತೀರಕ್ಕೆ ಬಂತು ಹೋವರ್ ಕ್ರಾಫ್ಟ್]
ಘಟನೆ ನಡೆದ ಬಗ್ಗೆ ವರದಿ ಮಾಡದಂತೆ ಪತ್ರಕರ್ತರಿಗೆ ಅಧಿಕಾರಿಗಳು ಬೆದರಿಕೆ ಹಾಕಿದ್ದಾರೆ. ಹೋವರ್ ಕ್ರಾಫ್ಟ್ ನೋಡಲು ಬಂದ ಜನರನ್ನು ದೂರು ಕಳಿಸಿದ್ದಾರೆ. ಇದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.
ಹೋವರ್ ಕ್ರಾಫ್ಟ್-196 ನೀರು ಮತ್ತು ನೆಲದ ಮೇಲೆ ಸಂಚರಿಸುವ ಸಾಮರ್ಥ್ಯ ಹೊಂದಿದೆ. ವಿದೇಶಿ ನಿರ್ಮಿತವಾಗಿರುವ ಇದರ ಮೌಲ್ಯ ಸುಮಾರು 60 ಕೋಟಿ. ಅಪಘಾತದಿಂದಾಗಿ ಕ್ರಾಫ್ಟ್ನ ಬೆಲೂನ್ನಂಥ ಭಾಗಕ್ಕೆ ಹಾನಿಯಾಗಿದ್ದು ಲಕ್ಷಾಂತರ ರೂ. ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications