ಮಂಗಳೂರು : ಅಪಘಾತದಿಂದ ಹೋವರ್ ಕ್ರಾಫ್ಟ್ಗೆ ಹಾನಿ
ಮಂಗಳೂರು, ಜ.30 : ಕರಾವಳಿ ತಟರಕ್ಷಣಾ ಪಡೆಯ (ಕೋಸ್ಟ್ಗಾರ್ಡ್) ಸೇರಿದ 'ಹೋವರ್ ಕ್ರಾಫ್ಟ್-196' ವಾಹನ ಪಣಂಬೂರು ಸಮೀಪ ಅವಘಾತಕ್ಕೆ ಈಡಾಗಿದೆ. ದಿಕ್ಕುತಪ್ಪಿ ಕ್ರಾಫ್ಟ್ ಮರಕ್ಕೆ ಡಿಕ್ಕಿ ಹೊಡೆದಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಹೋವರ್ ಕ್ರಾಫ್ಟ್-196 ವಾಹನವನ್ನು ಗುರುವಾರ ಮುಂಜಾನೆ 5 ಗಂಟೆ ಸುಮಾರಿಗೆ ಸಮುದ್ರಕ್ಕೆ ಇಳಿಸುವಾಗ ಈ ಘಟನೆ ನಡೆದಿದೆ. ಕ್ರಾಫ್ಟ್ಅನ್ನು ಸಮುದ್ರಕ್ಕೆ ಇಳಿಸುವಾಗ ಬಲವಾಗಿ ಗಾಳಿ ಬೀಸಿದ್ದರಿಂದ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಪಣಂಬೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. [ಕರಾವಳಿ ರಕ್ಷಣೆಗೆ ಬಂದ ಹೋವರ್ ಕ್ರಾಫ್ಟ್]

ಎರಡು ಹೋವರ್ ಕ್ರಾಫ್ಟ್ಗಳನ್ನು ಪಣಂಬೂರು ಬೀಚ್ ಬಳಿಯ ಟವರ್ ಒಂದರ ಬಳಿ ನೆಲದ ಮೇಲೆ ನಿಲ್ಲಿಸಲಾಗಿತ್ತು. ಕೆಲವು ದಿನಗಳ ಹಿಂದೆ ಈ ಹೋವರ್ ಕ್ರಾಫ್ಟ್ಗಳನ್ನು ಕರಾವಳಿ ತಟರಕ್ಷಣಾ ಪಡೆಗೆ ಸಮರ್ಪಿಸಲಾಗಿತ್ತು. ರಾಜ್ಯಪಾಲ ವಜುಭಾಯಿ ವಾಲಾ ಇವುಗಳನ್ನು ಲೋಕಾರ್ಪಣೆ ಮಾಡಿದ್ದರು. ಸದ್ಯ ಒಂದು ಕ್ರಾಫ್ಟ್ ಹಾನಿಗೀಡಾಗಿದೆ. [ಪಣಂಬೂರು ಕಡಲ ತೀರಕ್ಕೆ ಬಂತು ಹೋವರ್ ಕ್ರಾಫ್ಟ್]
ಘಟನೆ ನಡೆದ ಬಗ್ಗೆ ವರದಿ ಮಾಡದಂತೆ ಪತ್ರಕರ್ತರಿಗೆ ಅಧಿಕಾರಿಗಳು ಬೆದರಿಕೆ ಹಾಕಿದ್ದಾರೆ. ಹೋವರ್ ಕ್ರಾಫ್ಟ್ ನೋಡಲು ಬಂದ ಜನರನ್ನು ದೂರು ಕಳಿಸಿದ್ದಾರೆ. ಇದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.
ಹೋವರ್ ಕ್ರಾಫ್ಟ್-196 ನೀರು ಮತ್ತು ನೆಲದ ಮೇಲೆ ಸಂಚರಿಸುವ ಸಾಮರ್ಥ್ಯ ಹೊಂದಿದೆ. ವಿದೇಶಿ ನಿರ್ಮಿತವಾಗಿರುವ ಇದರ ಮೌಲ್ಯ ಸುಮಾರು 60 ಕೋಟಿ. ಅಪಘಾತದಿಂದಾಗಿ ಕ್ರಾಫ್ಟ್ನ ಬೆಲೂನ್ನಂಥ ಭಾಗಕ್ಕೆ ಹಾನಿಯಾಗಿದ್ದು ಲಕ್ಷಾಂತರ ರೂ. ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications